Homeಮುಖಪುಟರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

ರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

- Advertisement -
- Advertisement -

ರಷ್ಯಾದ ಸೈನ್ಯಕ್ಕೆ ಅಕ್ರಮವಾಗಿ ಸೇರ್ಪಡೆಗೊಂಡ ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ಮತ್ತು ನಾಪತ್ತೆಯಾದ ಇಬ್ಬರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ದಿ ಹಿಂದೂ ಭಾನುವಾರ ವರದಿ ಮಾಡಿದೆ. ನಾಪತ್ತೆಯಾದವರಲ್ಲಿ ಒಬ್ಬರನ್ನು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್‌ನ 27 ವರ್ಷದ ಜಹೂರ್ ಶೇಖ್ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯಲ್ಲಿದ್ದ

ನಾಪತ್ತೆಯಾದ ಜಹೂರ್‌ ಶೇಖ್‌ ಅವರ ತಂದೆ ಮೊಹಮ್ಮದ್ ಅಮೀನ್ ಶೇಖ್ ಮಾತನಾಡಿ, ತನ್ನ ಮಗ ಡಿಸೆಂಬರ್ 31 ರಂದು ಕುಟುಂಬದೊಂದಿಗೆ ಕೊನೆಯದಾಗಿ ಮಾತನಾಡಿದ್ದಾನೆ ಎಂದು ಹೇಳಿದ್ದಾರೆ. “ತಾನು ತರಬೇತಿಗೆ ಹೋಗುತ್ತಿರುವುದಾಗಿ ಮತ್ತು ಮುಂದಿನ ಮೂರು ತಿಂಗಳು ಫೋನ್‌ನಲ್ಲಿ ಲಭ್ಯವಿರುವುದಿಲ್ಲ ಎಂದು ಅವರು ಹೇಳಿದ್ದಾರೆ” ಎಂದು ಜಮ್ಮು ಕಾಶ್ಮೀರದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಆಗಿರುವ ಮೊಹಮ್ಮದ್ ಅಮೀನ್ ಶೇಖ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾಗ್ಯೂ, ಜನವರಿಯಲ್ಲಿ ರಷ್ಯಾದಲ್ಲಿ ಭಾರತೀಯರ ಸಾವಿನ ಬಗ್ಗೆ ಸುದ್ದಿಯನ್ನು ನೋಡಿ ನಾವು ಚಿಂತೆಗೊಳಗಾಗಿ, ಅವರ ಸಂಖ್ಯೆಗೆ ಕರೆ ಮಾಡಿದೆವು. ಆದರೆ ಅವರಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಅವರು ಕೂಡಾ ಇದುವರೆಗೆ ನಮಗೆ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 24, 2022 ರಂದು ರಷ್ಯಾವು ಉಕ್ರೇನ್ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದು, ಎರಡನೇ ವಿಶ್ವ ಯುದ್ಧದ ನಂತರ ಯುರೋಪ್‌ನಲ್ಲಿ ನಡೆದ ಭಾರಿ ಸಂಘರ್ಷ ಇದಾಗಿದೆ. ಯುದ್ಧದಲ್ಲಿ ಸುಮಾರು ನೂರು ಭಾರತೀಯರನ್ನು ರಷ್ಯಾ ಸೈನ್ಯದ ಪರವಾಗಿ ಹೋರಾಡುವಂತೆ ಮಾಡಲಾಗಿದೆ ಎಂದು ನಂಬಲಾಗಿದೆ. ಅವರಲ್ಲಿ ಹತ್ತಾರು ಜನರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದರು.

ಜುಲೈ ವೇಳೆಗೆ ಸಂಘರ್ಷದಲ್ಲಿ ಕನಿಷ್ಠ ಎಂಟು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ. ಬೇರೆ ದುಡಿಮೆಗೆ ಎಂದು ರಷ್ಯಾಕ್ಕೆ ಕರೆಸಿಕೊಂಡು ಭಾರತೀಯರನ್ನು ಸೇನೆಗೆ ಸೇರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ವಾರ ಜಹೂರ್ ಶೇಖ್ ಬಗ್ಗೆ ಮಾಹಿತಿ ನೀಡಲು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿಫಲವಾದ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಷ್ಯಾದ ರಾಯಭಾರ ಕಚೇರಿಯಿಂದ ಉತ್ತರಗಳನ್ನು ಪಡೆಯಲು ಮೊಹಮ್ಮದ್ ಅಮೀನ್ ಶೇಖ್ ಮತ್ತು ಅವರ ಇಬ್ಬರು ಪುತ್ರರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಷ್ಯಾದ ಸೇನೆಯಲ್ಲಿದ್ದ

“ನಾವು ರಷ್ಯಾದ ರಾಯಭಾರ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದೇವೆ” ಎಂದು ಜಹೂರ್ ಶೇಖ್ ಅವರ ಹಿರಿಯ ಸಹೋದರ 31 ವರ್ಷದ ಐಜಾಜ್ ಅಮೀನ್ ದಿ ಹಿಂದೂಗೆ ತಿಳಿಸಿದ್ದಾರೆ. “ಅವರು ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕನಿಷ್ಠ 15 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಮತ್ತು ರಷ್ಯಾ ಸರ್ಕಾರವು ಸಹಕರಿಸುತ್ತಿದ್ದರೂ, ಸ್ಥಳದಲ್ಲಿ ಇರುವ ಅವರ ಕಮಾಂಡರ್‌ಗಳು ಸ್ಪಂದಿಸುತ್ತಿಲ್ಲ” ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಕೆಲಸಕ್ಕೆ ಸಂಬಂಧಿಸಿದ ಯೂಟ್ಯೂಬ್ ವಿಡಿಯೋ ನೋಡಿದ ನಂತರ ಜಹೂರ್ ಶೇಖ್ ರಷ್ಯಾಕ್ಕೆ ಪ್ರಯಾಣಿಸಿದ್ದರು ಎಂದು ಐಜಾಜ್ ಅಮೀನ್ ಹೇಳಿದ್ದಾರೆ. ಆದರೆ, ಅವರು ರಷ್ಯಾಕ್ಕೆ ತಲುಪಿದ ನಂತರ ಸೈನ್ಯಕ್ಕೆ ಸೇರುವಂತೆ ಆಗಿತ್ತು, ಅಲ್ಲಿ ಅವರು ವಂಚನೆಗೊಳಗಾಗಿದ್ದಾರೆ. ಜಹೋರ್ ಅವರದೇ ರೀತಿ, ಪಂಜಾಬ್‌ನ ಜಲಂಧರ್‌ನ 30 ವರ್ಷದ ಮಂದೀಪ್ ಕೂಡಾ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ಮಂದೀಪ್ ಅವರೊಂದಿಗೆ ಕೊನೆಯದಾಗಿ ಮಾರ್ಚ್ 3 ರಂದು ಮಾತನಾಡಿದ್ದೇವೆ” ಎಂದು ಮಂದೀಪ್ ಅವರ ಸಹೋದರ ಜಗದೀಪ್ ಕುಮಾರ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ. “ಅವರು ಆರಂಭದಲ್ಲಿ ಅರ್ಮೇನಿಯಾಕ್ಕೆ ಹೋಗಿದ್ದು, ಅಲ್ಲಿಂದ ಕೆಲಸ ಹುಡುಕಿಕೊಂಡು ಇಟಲಿಗೆ ಹೋಗಬೇಕಿತ್ತು. ಬದಲಾಗಿ, ಅವರು ವೀಸಾ ಏಜೆಂಟ್‌ನ ಮೋಸದಿಂದ ರಷ್ಯಾಕ್ಕೆ ಹೋಗಿ ಅವರ ಸೈನ್ಯಕ್ಕೆ ಸೇರುವಂತೆ ಆಯಿತು. ಕೆಲವು ದಿನಗಳ ತರಬೇತಿಯ ನಂತರ ಅವರನ್ನು ಯುದ್ಧ ವಲಯಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ, ರಷ್ಯಾದಲ್ಲಿ ಕನಿಷ್ಠ 25 ಭಾರತೀಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಅಕ್ಟೋಬರ್ 21 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಸೈನ್ಯಕ್ಕೆ ಸೇರ್ಪಡೆಗೊಂಡ ಮತ್ತು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲಿದ್ದ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಷ್ಯಾದ ಸೇನೆಯಿಂದ ಇನ್ನೂ 20 ಭಾರತೀಯರನ್ನು ಬಿಡುಗಡೆ ಮಾಡಬೇಕಾಗಿದೆ ಮತ್ತು ಅವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಹೊಸ ದೆಹಲಿ ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಜುಲೈನಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದಾಗ, ರಷ್ಯಾವೂ ತನ್ನ ಮಿಲಿಟರಿಯಿಂದ ಎಲ್ಲಾ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು ಎಂದು ವಿದೇಶಾಂಗ ಸಚಿವಾಲಯ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...