Homeಮುಖಪುಟರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

ರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

- Advertisement -
- Advertisement -

ರಷ್ಯಾದ ಸೈನ್ಯಕ್ಕೆ ಅಕ್ರಮವಾಗಿ ಸೇರ್ಪಡೆಗೊಂಡ ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ಮತ್ತು ನಾಪತ್ತೆಯಾದ ಇಬ್ಬರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ದಿ ಹಿಂದೂ ಭಾನುವಾರ ವರದಿ ಮಾಡಿದೆ. ನಾಪತ್ತೆಯಾದವರಲ್ಲಿ ಒಬ್ಬರನ್ನು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್‌ನ 27 ವರ್ಷದ ಜಹೂರ್ ಶೇಖ್ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯಲ್ಲಿದ್ದ

ನಾಪತ್ತೆಯಾದ ಜಹೂರ್‌ ಶೇಖ್‌ ಅವರ ತಂದೆ ಮೊಹಮ್ಮದ್ ಅಮೀನ್ ಶೇಖ್ ಮಾತನಾಡಿ, ತನ್ನ ಮಗ ಡಿಸೆಂಬರ್ 31 ರಂದು ಕುಟುಂಬದೊಂದಿಗೆ ಕೊನೆಯದಾಗಿ ಮಾತನಾಡಿದ್ದಾನೆ ಎಂದು ಹೇಳಿದ್ದಾರೆ. “ತಾನು ತರಬೇತಿಗೆ ಹೋಗುತ್ತಿರುವುದಾಗಿ ಮತ್ತು ಮುಂದಿನ ಮೂರು ತಿಂಗಳು ಫೋನ್‌ನಲ್ಲಿ ಲಭ್ಯವಿರುವುದಿಲ್ಲ ಎಂದು ಅವರು ಹೇಳಿದ್ದಾರೆ” ಎಂದು ಜಮ್ಮು ಕಾಶ್ಮೀರದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಆಗಿರುವ ಮೊಹಮ್ಮದ್ ಅಮೀನ್ ಶೇಖ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾಗ್ಯೂ, ಜನವರಿಯಲ್ಲಿ ರಷ್ಯಾದಲ್ಲಿ ಭಾರತೀಯರ ಸಾವಿನ ಬಗ್ಗೆ ಸುದ್ದಿಯನ್ನು ನೋಡಿ ನಾವು ಚಿಂತೆಗೊಳಗಾಗಿ, ಅವರ ಸಂಖ್ಯೆಗೆ ಕರೆ ಮಾಡಿದೆವು. ಆದರೆ ಅವರಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಅವರು ಕೂಡಾ ಇದುವರೆಗೆ ನಮಗೆ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 24, 2022 ರಂದು ರಷ್ಯಾವು ಉಕ್ರೇನ್ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದು, ಎರಡನೇ ವಿಶ್ವ ಯುದ್ಧದ ನಂತರ ಯುರೋಪ್‌ನಲ್ಲಿ ನಡೆದ ಭಾರಿ ಸಂಘರ್ಷ ಇದಾಗಿದೆ. ಯುದ್ಧದಲ್ಲಿ ಸುಮಾರು ನೂರು ಭಾರತೀಯರನ್ನು ರಷ್ಯಾ ಸೈನ್ಯದ ಪರವಾಗಿ ಹೋರಾಡುವಂತೆ ಮಾಡಲಾಗಿದೆ ಎಂದು ನಂಬಲಾಗಿದೆ. ಅವರಲ್ಲಿ ಹತ್ತಾರು ಜನರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದರು.

ಜುಲೈ ವೇಳೆಗೆ ಸಂಘರ್ಷದಲ್ಲಿ ಕನಿಷ್ಠ ಎಂಟು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ. ಬೇರೆ ದುಡಿಮೆಗೆ ಎಂದು ರಷ್ಯಾಕ್ಕೆ ಕರೆಸಿಕೊಂಡು ಭಾರತೀಯರನ್ನು ಸೇನೆಗೆ ಸೇರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ವಾರ ಜಹೂರ್ ಶೇಖ್ ಬಗ್ಗೆ ಮಾಹಿತಿ ನೀಡಲು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿಫಲವಾದ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಷ್ಯಾದ ರಾಯಭಾರ ಕಚೇರಿಯಿಂದ ಉತ್ತರಗಳನ್ನು ಪಡೆಯಲು ಮೊಹಮ್ಮದ್ ಅಮೀನ್ ಶೇಖ್ ಮತ್ತು ಅವರ ಇಬ್ಬರು ಪುತ್ರರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಷ್ಯಾದ ಸೇನೆಯಲ್ಲಿದ್ದ

“ನಾವು ರಷ್ಯಾದ ರಾಯಭಾರ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದೇವೆ” ಎಂದು ಜಹೂರ್ ಶೇಖ್ ಅವರ ಹಿರಿಯ ಸಹೋದರ 31 ವರ್ಷದ ಐಜಾಜ್ ಅಮೀನ್ ದಿ ಹಿಂದೂಗೆ ತಿಳಿಸಿದ್ದಾರೆ. “ಅವರು ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕನಿಷ್ಠ 15 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಮತ್ತು ರಷ್ಯಾ ಸರ್ಕಾರವು ಸಹಕರಿಸುತ್ತಿದ್ದರೂ, ಸ್ಥಳದಲ್ಲಿ ಇರುವ ಅವರ ಕಮಾಂಡರ್‌ಗಳು ಸ್ಪಂದಿಸುತ್ತಿಲ್ಲ” ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಕೆಲಸಕ್ಕೆ ಸಂಬಂಧಿಸಿದ ಯೂಟ್ಯೂಬ್ ವಿಡಿಯೋ ನೋಡಿದ ನಂತರ ಜಹೂರ್ ಶೇಖ್ ರಷ್ಯಾಕ್ಕೆ ಪ್ರಯಾಣಿಸಿದ್ದರು ಎಂದು ಐಜಾಜ್ ಅಮೀನ್ ಹೇಳಿದ್ದಾರೆ. ಆದರೆ, ಅವರು ರಷ್ಯಾಕ್ಕೆ ತಲುಪಿದ ನಂತರ ಸೈನ್ಯಕ್ಕೆ ಸೇರುವಂತೆ ಆಗಿತ್ತು, ಅಲ್ಲಿ ಅವರು ವಂಚನೆಗೊಳಗಾಗಿದ್ದಾರೆ. ಜಹೋರ್ ಅವರದೇ ರೀತಿ, ಪಂಜಾಬ್‌ನ ಜಲಂಧರ್‌ನ 30 ವರ್ಷದ ಮಂದೀಪ್ ಕೂಡಾ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ಮಂದೀಪ್ ಅವರೊಂದಿಗೆ ಕೊನೆಯದಾಗಿ ಮಾರ್ಚ್ 3 ರಂದು ಮಾತನಾಡಿದ್ದೇವೆ” ಎಂದು ಮಂದೀಪ್ ಅವರ ಸಹೋದರ ಜಗದೀಪ್ ಕುಮಾರ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ. “ಅವರು ಆರಂಭದಲ್ಲಿ ಅರ್ಮೇನಿಯಾಕ್ಕೆ ಹೋಗಿದ್ದು, ಅಲ್ಲಿಂದ ಕೆಲಸ ಹುಡುಕಿಕೊಂಡು ಇಟಲಿಗೆ ಹೋಗಬೇಕಿತ್ತು. ಬದಲಾಗಿ, ಅವರು ವೀಸಾ ಏಜೆಂಟ್‌ನ ಮೋಸದಿಂದ ರಷ್ಯಾಕ್ಕೆ ಹೋಗಿ ಅವರ ಸೈನ್ಯಕ್ಕೆ ಸೇರುವಂತೆ ಆಯಿತು. ಕೆಲವು ದಿನಗಳ ತರಬೇತಿಯ ನಂತರ ಅವರನ್ನು ಯುದ್ಧ ವಲಯಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ, ರಷ್ಯಾದಲ್ಲಿ ಕನಿಷ್ಠ 25 ಭಾರತೀಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಅಕ್ಟೋಬರ್ 21 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಸೈನ್ಯಕ್ಕೆ ಸೇರ್ಪಡೆಗೊಂಡ ಮತ್ತು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲಿದ್ದ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಷ್ಯಾದ ಸೇನೆಯಿಂದ ಇನ್ನೂ 20 ಭಾರತೀಯರನ್ನು ಬಿಡುಗಡೆ ಮಾಡಬೇಕಾಗಿದೆ ಮತ್ತು ಅವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಹೊಸ ದೆಹಲಿ ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಜುಲೈನಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದಾಗ, ರಷ್ಯಾವೂ ತನ್ನ ಮಿಲಿಟರಿಯಿಂದ ಎಲ್ಲಾ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು ಎಂದು ವಿದೇಶಾಂಗ ಸಚಿವಾಲಯ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....