Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...