Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...