Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...