Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...