Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...