Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...