Homeಅಂಕಣಗಳುಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

ಅಂತಾರಾಷ್ಟ್ರೀಯ ಮಟ್ಟದ ಪ್ರಚಾರಕ್ಕೆ ಒತ್ತು: ದೇಶದ ಸಮಸ್ಯೆಗಳನ್ನೇ ಮರೆತ ಮೋದಿ ಬಾಬ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಪಡೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೇ ಅದ್ಭುತ, ಅಮೋಘ ಸಾಧನೆ ಎಂಬಂತೆ ಮೀಡಿಯಾಗಳು ಬಿಂಬಿಸುತ್ತಿವೆ. ಮೀಡಿಯಾಗಳಲ್ಲಿ ಬರುತ್ತಿರುವ ಮಸಾಲೆ ಮೋದಿ ಸುದ್ದಿಗಳು ಪ್ರಧಾನಿ ಅಂದರೆ ಹೀಗೆ ಬ್ಯುಸಿಯಾಗಿರಬೇಕು ಎಂದು ಜನ ನಂಬುವಂತಾಗಿದೆ. ಒಂದೊಂದು ಕ್ಷಣಕ್ಕೂ ಒಂದೊಂದು ಬಣ್ಣ ಬದಲಿಸುವ ಊಸರವಳ್ಳಿ ಹಾಗೆ ಪ್ರಧಾನಿ ನಮೋ ಕೂಡ ಬಣ್ಣಬಣ್ಣದ ಸೂಟ್ ಬೂಟ್ ಧರಿಸುತ್ತಿರುವುದು ಎದ್ದು ಕಾಣುತ್ತಿದೆ. ಅಂದರೆ ಎಲ್ಲವನ್ನೂ ನಾನೇ ನಿಭಾಯಿಸುತ್ತಿದ್ದೇನೆ. ಇನ್ನ್ಯಾರೂ ಸಮಸ್ಯೆಗಳ ಬಗ್ಗೆ ತಲೆಕಡಿಕೊಳ್ಳುತ್ತಿಲ್ಲ ಎಂಬ ವರ್ತನೆ ಅದು.

ಹೌದು.. ಮೋದಿ ದೇಶ ಸುತ್ತುವ ಕೆಲಸ ಮಾಡುತ್ತಿದ್ದಾರೆ. ಅದರಲ್ಲೇ ಸಂತಸದ ಕ್ಷಣಗಳನ್ನು ಕಳೆಯುತ್ತಿದ್ದಾರೆ. ಪ್ರಧಾನಿ ಹುದ್ದೆ ಸಿಕ್ಕಿರುವುದು ಅಂತಾರಾಷ್ಟ್ರೀಯ ಮಟ್ಟದ ನಾಯಕರನ್ನು ಭೇಟಿ ಮಾಡಲು, ಅವರೊಂದಿಗೆ ಮಾತನಾಡುವುದು, ತಬ್ಬಿಕೊಳ್ಳುವುದು, ಜನರತ್ತ ಕೈಬೀಸಲು ಎಂದು ಭಾವಿಸಿದಂತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಂದರೆ ಅಚ್ಚುಮೆಚ್ಚು. ಮುಸ್ಲಿಂ ಬಾಹುಳ್ಯ ದೇಶಗಳಿಗೂ ಭೇಟಿ ಕೊಡುತ್ತಾರೆ. ನಾಜಿವಾದಿಗಳನ್ನೂ ಅಪ್ಪಿಕೊಳ್ಳುತ್ತಾರೆ. ಇತ್ತ ಚೀನಾವನ್ನೂ ಓಲೈಸುತ್ತಾರೆ. ರಷ್ಯಾವನ್ನೂ ಮೆಚ್ಚಿಸಲು ಪ್ರಯತ್ನಿಸುತ್ತಾರೆ. ಒಟ್ಟಿನಲ್ಲಿ ‘ಅಂದರಿಕಿ ಮಂಚಿವಾಡು ಅನಂತಯ್ಯ’ ಎಂಬಂತೆ ಎಲ್ಲರಿಗೂ ಒಳ್ಳೆಯವರಾಗಲು ಬಯಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭರ್ಜರಿ ಭಾಷಣ ಬಿಗಿಯುತ್ತಿರುವ ಮೋದಿಗೆ ದೇಶದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಮಾತ್ರ ಜಾಣಕುರುಡು, ಜಾಣಮರೆವು.

ದೇಶದ ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ಸಮಸ್ಯೆಗಳಿವೆ. ರೈತರು ಅತಿವೃಷ್ಟಿ-ಅನಾವೃಷ್ಟಿಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಸಾಲಸೋಲ ಮಾಡಿಕೊಂಡು, ಮಳೆ, ನೆರೆಯಿಂದ ಫಸಲು ಕೈ ಸೇರದೆ ಜರ್ಜರಿತರಾಗಿದ್ದಾರೆ. ಅನ್ನದಾತನ ಅಳಲು, ಗೋಳು, ಸಂಕಷ್ಟವನ್ನು ಆಲಿಸುವವರೇ ಇಲ್ಲ. ಇತ್ತ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರಿತಪಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಹೆಮ್ಮರವಾಗುತ್ತಿದೆ. ದೇಶದ ಬಹುತೇಕ ಉದ್ದಿಮೆಗಳು ಬಾಗಿಲು ಮುಚ್ಚುತ್ತಿವೆ. ಉತ್ಪಾದನೆಯನ್ನು ಕಡಿತಗೊಳಿಸುವ ಪ್ರಕ್ರಿಯೆ ಕಳೆದ ಆರೇಳು ತಿಂಗಳಿಂದ ಜಾರಿಯಲ್ಲಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಜವಳಿ, ಉಕ್ಕು ಮತ್ತು ಕಬ್ಬಿಣ, ಆಟೋಮೊಬೈಲ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಕೆಲಸವಿಲ್ಲ. ಕೆಲಸ ಕಳೆದುಕೊಂಡು, ಕಾರ್ಮಿಕರು ದಿಕ್ಕು ತೋಚದೆ ಕುಳಿತುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಕೆಲಸ ಅರಸಿ, ನಗರಗಳಲ್ಲಿ ಬಂದು ನೆಲೆಸಿದ್ದ ಕುಟುಂಬಗಳು ತಮ್ಮ ತಮ್ಮ ಸ್ವಗ್ರಾಮಗಳಿಗೆ ತೆರಳುತ್ತಿವೆ. ಕಟ್ಟಡ ನಿರ್ಮಾಣ ಕೆಲಸ ಸಂಪೂರ್ಣ ಕುಸಿದು ಹೋಗಿದೆ. ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ದಿನದ ದುಡಿಮೆಯಲ್ಲೇ ಬದುಕು ಸಾಗಿಸುತ್ತಿದ್ದ ಕಾರ್ಮಿಕರು ಕುಟುಂಬ ನಿರ್ವಹಣೆ ಮಾಡೋದು ಹೇಗೆ ಎಂದು ಚಿಂತಿತರಾಗಿದ್ದಾರೆ. ಉದ್ದಿಮೆ, ಕಂಪನಿಗಳ ಬಾಗಿಲು ಮುಚ್ಚುತ್ತಿರುವ ಮಾಲೀಕರು, ಕಾರ್ಮಿಕರಿಗೆ ನೀಡಬೇಕಿದ್ದ ಬಾಕಿ ಮತ್ತು ಪಿಎಫ್ ಹಣ ನೀಡದಿರುವ ಪ್ರಕರಣಗಳು ನಡೆಯುತ್ತಿವೆ.
ದೇಶದಲ್ಲಿ ಶ್ರೇಷ್ಟತೆಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಶಸ್ತ್ರಾಸ್ತ್ರ, ಮಾರಕಾಸ್ತ್ರ ಹಿಡಿದು ಬೀದಿಯಲ್ಲಿ ತಿರುಗಬಾರದು ಎಂದು ಸಂವಿಧಾನದಲ್ಲಿ ಹೇಳಲಾಗಿದ್ದರೂ ಸಹ ಇದು ನಮಗಲ್ಲ ಎಂಬ ಧೋರಣೆ ಬೆಳೆಸಿಕೊಂಡಿರುವ ಕೆಲ ಮೇಲ್ವರ್ಗದ ಜನತೆ ದೊಣ್ಣೆ, ಮಚ್ಚುಗಳಿಂದ ಅಮಾಯಕ ದಲಿತರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಬಯಲು ಶೌಚಕ್ಕೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯುವಂತಹ ಹೀನ ಪ್ರಕರಣಗಳೂ ನಡೆಯುತ್ತಿವೆ. ಹಾಡಹಗಲೇ ವಿದ್ಯಾರ್ಥಿನಿಯರ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸುವ ಪ್ರಕರಣಗಳು ನಮ್ಮ ಕಣ್ಣ ಮುಂದಿವೆ.

ದನದ ಮಾಂಸ ಇಟ್ಟುಕೊಂಡಿದ್ದ, ದನದ ಮಾಂಸ ತಿಂದ, ದನದ ಸಾಗಾಟ ಮಾಡಿದ ಎಂಬ ಕಾರಣಕ್ಕೆ ಹತ್ಯೆಗೈಯಲಾಗುತ್ತದೆ. ಆಹಾರದ ಹೆಸರಲ್ಲಿ ಹಲ್ಲೆ-ಕೊಲೆಗಳು ನಡೆಯುತ್ತಿವೆ. ದೇಶದಲ್ಲಿ ಒಂದು ಧರ್ಮದವರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅವರೇ ಈ ದೇಶದ ಎಲ್ಲಾ ಅನಿಷ್ಟಗಳಿಗೆ ಕಾರಣ ಎಂಬಂತೆ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದಷ್ಟೇ ಅಲ್ಲ, ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ, ಅನ್ಯ ಧರ್ಮೀಯ ಯುವತಿಯನ್ನು ಮಾತನಾಡಿಸಿದ ಎಂಬ ಕಾರಣಕ್ಕಾಗಿ ಗಲಭೆಗಳೂ ನಡೆಯುತ್ತಿವೆ.
ಅಂತಾರಾಜ್ಯ ಜಲ ವಿವಾದಗಳು ಬಾಕಿ ಇವೆ. ಮೀನುಗಾರರ ಸಮಸ್ಯೆಗಳು ಹಾಗೇ ಉಳಿದಿವೆ. ಕರಾವಳಿ ತೀರ ಪ್ರದೇಶಗಳು ಕೊಚ್ಚಿ ಹೋಗುತ್ತಿವೆ. ದ್ವೇಷ, ಅಸಹನೆ ವ್ಯಾಪಕವಾಗಿದೆ. ಮನೆ, ಭೂಮಿಯಿಲ್ಲದೆ ಅದೆಷ್ಟೋ ಮಂದಿ ನಲುಗುತ್ತಿದ್ದಾರೆ. ಭೂಮಿ ಹಕ್ಕುಗಳ ಸಮಿತಿ ಕಟ್ಟಿಕೊಂಡು ಮನೆ-ಭೂಮಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಆದಿವಾಸಿಗಳು ಅರಣ್ಯದಲ್ಲಿ ಜೀವಿಸುವುದು ಕಷ್ಟವಾಗಿದ್ದು, ಒಕ್ಕಲೆಬ್ಬಿಸುವ ಭೀತಿ ಎದುರಿಸುತ್ತಿದ್ದಾರೆ.

ಎಲ್ಲಾ ರೀತಿಯ ಕಾನೂನುಗಳು ಇವೆ. ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಸರ್ಕಾರಿ ಸೇವಕರು ಪಕ್ಷಪಾತ ಮಾಡ್ತಿದ್ದಾರೆ. ನ್ಯಾಯ ಶ್ರೀಮಂತರ ಪಾಲಾಗುತ್ತಿದೆ. ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಕತ್ತರಿ ಪ್ರಯೋಗವಾಗ್ತಿದೆ. ಕೊಲಿಜಿಯಂ ಮಾಡಿದ್ದ ಶಿಫಾರಸುಗಳನ್ನು ತಿರಸ್ಕರಿಸಲಾಗಿದೆ. ಸಾಹಿತಿಗಳು, ಕಲಾವಿದರು, ಹೋರಾಟಗಾರರು ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಳಿಸಿಕೊಳ್ಳಲು ಹೆಣಗುವಂತಾಗಿದೆ. ಜನರ ಸಮಸ್ಯೆ ಆಲಿಸಬೇಕಾದ ಪ್ರಧಾನಿ ಕೇವಲ ವಿದೇಶ ಪ್ರವಾಸ, ಭಾಷಣದಲ್ಲಿ ಕಾಲ ಕಳೆದರೆ ದೇಶದ ಆಂತರಿಕ ಸಮಸ್ಯೆಗಳಿಗೆ ಪರಿಹಾರ ಸಿಗೋದು ಯಾವಾಗ..? ದೇಶದ ಕೋಶ ಓದಿ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕಾದ ನೀವೇ ಹೀಗಾದರೆ ಜನತೆಯ ಪಾಡೇನು..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...