Homeಅಂತರಾಷ್ಟ್ರೀಯಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

- Advertisement -
- Advertisement -

ಪ್ಯಾಲೆಸ್ತೀನಿ ಹೋರಾಟಗಾರರ ಗುಂಪು ‘ಹಮಾಸ್’ನ ಪರವಾಗಿದ್ದು ಅದನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲ್ಪಟ್ಟ ಭಾರತೀಯ ಶಿಕ್ಷಣ ತಜ್ಞ ಬದರ್ ಖಾನ್ ಸೂರಿಯನ್ನು ಗಡೀಪಾರು ಮಾಡದಂತೆ ಅಮೆರಿಕದ ನ್ಯಾಯಾಧೀಶರು ಗುರುವಾರ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಆದೇಶಿಸಿದ್ದಾರೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ. ಭಾರತೀಯ ವಿದ್ಯಾರ್ಥಿಯ

ವರ್ಜೀನಿಯಾ ನ್ಯಾಯಾಲಯದ ಪೂರ್ವ ಜಿಲ್ಲೆಯ ನ್ಯಾಯಾಧೀಶೆ ಪೆಟ್ರೀಷಿಯಾ ಟೋಲಿವರ್ ಗೈಲ್ಸ್ ಅವರು “ನ್ಯಾಯಾಲಯವು ವ್ಯತಿರಿಕ್ತ ಆದೇಶವನ್ನು ನೀಡುವವರೆಗೆ” ಸೂರಿಯನ್ನು ಅಮೆರಿಕದಿಂದ ಗಡೀಪಾರು ಮಾಡುವುದನ್ನು ತಡೆಹಿಡಿದು ಆದೇಶ ಹೊರಡಿಸಿದ್ದಾರೆ. ಅಮೆರಿಕ ಅವರನ್ನು ಗಡಿಪಾರು ಮಾಡಲು ಪ್ರಯತ್ನಿಸುತ್ತಿದೆ ಎಂದು ಸೂರಿ ಪರ ವಕೀಲರು ಹೇಳಿದ್ದಾರೆ. ಭಾರತೀಯ ವಿದ್ಯಾರ್ಥಿಯ

ಬದರ್ ಖಾನ್ ಸೂರಿ ಅವರು ಪ್ಯಾಲೆಸ್ತೀನಿ ಹೋರಾಟಗಾರ ಗುಂಪು ಹಮಾಸ್ ಜೊತೆಗಿನ ಸಂಬಂಧ ಹೊಂದಿದ್ದಾರೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆಯು ಆರೋಪಿಸಿತ್ತು. ಜೊತೆಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಮಾಸ್ ಪರ ಪ್ರಚಾರ ಮಾಡುತ್ತಿದ್ದು, ಮತ್ತು ಯಹೂದಿಯರ ವಿರುದ್ಧ ಪ್ರೊಪಗಾಂಡ ಹರಡಿದ್ದಾರೆ ಎಂದು ಅದು ಆರೋಪಿಸಿದೆ.

ಶ್ವೇತಭವನದ ಉಪ ಮುಖ್ಯಸ್ಥ ಸ್ಟೀಫನ್ ಮಿಲ್ಲರ್ ಅವರು ಈ ಬಗ್ಗೆ ಅಲ್ಲಿನ ಬಲಪಂಥೀಯ ಚಾನೆಲ್‌ಗೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದ್ದು, ಅದಾಗ್ಯೂ ಅವರು ಯಾವುದೇ ಪುರಾವೆಗಳನ್ನು ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ. ಸೂರಿ ಅವರ ಚಟುವಟಿಕೆಗಳು ಅವರನ್ನು ಗಡೀಪಾರು ಮಾಡಲು ಅರ್ಹರನ್ನಾಗಿ ಮಾಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ನಿರ್ಧರಿಸಿದ್ದಾರೆ ಎಂದು ಅದು ಹೇಳಿದೆ.

ಸೂರಿ ಅವರು ವಿದ್ಯಾರ್ಥಿ ವೀಸಾದ ಮೇಲೆ ಅಮೆರಿಕದಲ್ಲಿ ವಾಸಿಸುತ್ತಿದ್ದು, ಅವರು ಅಮೇರಿಕನ್ ಪ್ರಜೆಯನ್ನು ಮದುವೆಯಾಗಿದ್ದಾರೆ. ಅವರನ್ನು ಲೂಸಿಯಾನದ ಅಲೆಕ್ಸಾಂಡ್ರಿಯಾದಲ್ಲಿ ಬಂಧಿಸಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಅವರು ವಲಸೆ ನ್ಯಾಯಾಲಯದಲ್ಲಿ ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಸೂರಿಯಬನ್ನು ಸೋಮವಾರ ರಾತ್ರಿ ವರ್ಜೀನಿಯಾದ ರೋಸ್ಲಿನ್‌ನಲ್ಲಿರುವ ಅವರ ಮನೆಯ ಹೊರಗೆ ಅಮೆರಿಕದ ತನಿಖಾ ಸಂಸ್ಥೆಯ ಅಧಿಕಾರಿಗಳ ಬಂಧಿಸಿದ್ದರು. ಬಂಧನದ ನಂತರ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೂರಿ ಯಾವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆನ್ನಲಾದರು ಎಂಬುದರ ವಿವರಗಳನ್ನು ಇಲಾಖೆ ಒದಗಿಸಿಲ್ಲ. ಪ್ಯಾಲೆಸ್ತೀನಿ ಹೋರಾಟ ಗುಂಪಾದ ಹಮಾಸ್ ಅನ್ನು ಅಮೆರಿಕ ಸರ್ಕಾರ ‘ಭಯೋತ್ಪಾದಕ ಸಂಘಟನೆ’ ಪಟ್ಟಿಯಲ್ಲಿ ಸೇರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...