Homeಅಂತರಾಷ್ಟ್ರೀಯಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

ಭಾರತೀಯ ವಿದ್ಯಾರ್ಥಿಯ ಗಡೀಪಾರು ವಿವಾದ | ಟ್ರಂಪ್ ಆಡಳಿತಕ್ಕೆ ಕೋರ್ಟ್‌ ನಿರ್ಬಂಧ

- Advertisement -
- Advertisement -

ಪ್ಯಾಲೆಸ್ತೀನಿ ಹೋರಾಟಗಾರರ ಗುಂಪು ‘ಹಮಾಸ್’ನ ಪರವಾಗಿದ್ದು ಅದನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲ್ಪಟ್ಟ ಭಾರತೀಯ ಶಿಕ್ಷಣ ತಜ್ಞ ಬದರ್ ಖಾನ್ ಸೂರಿಯನ್ನು ಗಡೀಪಾರು ಮಾಡದಂತೆ ಅಮೆರಿಕದ ನ್ಯಾಯಾಧೀಶರು ಗುರುವಾರ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ಆದೇಶಿಸಿದ್ದಾರೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ. ಭಾರತೀಯ ವಿದ್ಯಾರ್ಥಿಯ

ವರ್ಜೀನಿಯಾ ನ್ಯಾಯಾಲಯದ ಪೂರ್ವ ಜಿಲ್ಲೆಯ ನ್ಯಾಯಾಧೀಶೆ ಪೆಟ್ರೀಷಿಯಾ ಟೋಲಿವರ್ ಗೈಲ್ಸ್ ಅವರು “ನ್ಯಾಯಾಲಯವು ವ್ಯತಿರಿಕ್ತ ಆದೇಶವನ್ನು ನೀಡುವವರೆಗೆ” ಸೂರಿಯನ್ನು ಅಮೆರಿಕದಿಂದ ಗಡೀಪಾರು ಮಾಡುವುದನ್ನು ತಡೆಹಿಡಿದು ಆದೇಶ ಹೊರಡಿಸಿದ್ದಾರೆ. ಅಮೆರಿಕ ಅವರನ್ನು ಗಡಿಪಾರು ಮಾಡಲು ಪ್ರಯತ್ನಿಸುತ್ತಿದೆ ಎಂದು ಸೂರಿ ಪರ ವಕೀಲರು ಹೇಳಿದ್ದಾರೆ. ಭಾರತೀಯ ವಿದ್ಯಾರ್ಥಿಯ

ಬದರ್ ಖಾನ್ ಸೂರಿ ಅವರು ಪ್ಯಾಲೆಸ್ತೀನಿ ಹೋರಾಟಗಾರ ಗುಂಪು ಹಮಾಸ್ ಜೊತೆಗಿನ ಸಂಬಂಧ ಹೊಂದಿದ್ದಾರೆ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆಯು ಆರೋಪಿಸಿತ್ತು. ಜೊತೆಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಮಾಸ್ ಪರ ಪ್ರಚಾರ ಮಾಡುತ್ತಿದ್ದು, ಮತ್ತು ಯಹೂದಿಯರ ವಿರುದ್ಧ ಪ್ರೊಪಗಾಂಡ ಹರಡಿದ್ದಾರೆ ಎಂದು ಅದು ಆರೋಪಿಸಿದೆ.

ಶ್ವೇತಭವನದ ಉಪ ಮುಖ್ಯಸ್ಥ ಸ್ಟೀಫನ್ ಮಿಲ್ಲರ್ ಅವರು ಈ ಬಗ್ಗೆ ಅಲ್ಲಿನ ಬಲಪಂಥೀಯ ಚಾನೆಲ್‌ಗೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದ್ದು, ಅದಾಗ್ಯೂ ಅವರು ಯಾವುದೇ ಪುರಾವೆಗಳನ್ನು ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ. ಸೂರಿ ಅವರ ಚಟುವಟಿಕೆಗಳು ಅವರನ್ನು ಗಡೀಪಾರು ಮಾಡಲು ಅರ್ಹರನ್ನಾಗಿ ಮಾಡಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ನಿರ್ಧರಿಸಿದ್ದಾರೆ ಎಂದು ಅದು ಹೇಳಿದೆ.

ಸೂರಿ ಅವರು ವಿದ್ಯಾರ್ಥಿ ವೀಸಾದ ಮೇಲೆ ಅಮೆರಿಕದಲ್ಲಿ ವಾಸಿಸುತ್ತಿದ್ದು, ಅವರು ಅಮೇರಿಕನ್ ಪ್ರಜೆಯನ್ನು ಮದುವೆಯಾಗಿದ್ದಾರೆ. ಅವರನ್ನು ಲೂಸಿಯಾನದ ಅಲೆಕ್ಸಾಂಡ್ರಿಯಾದಲ್ಲಿ ಬಂಧಿಸಲಾಗಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಅವರು ವಲಸೆ ನ್ಯಾಯಾಲಯದಲ್ಲಿ ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಸೂರಿಯಬನ್ನು ಸೋಮವಾರ ರಾತ್ರಿ ವರ್ಜೀನಿಯಾದ ರೋಸ್ಲಿನ್‌ನಲ್ಲಿರುವ ಅವರ ಮನೆಯ ಹೊರಗೆ ಅಮೆರಿಕದ ತನಿಖಾ ಸಂಸ್ಥೆಯ ಅಧಿಕಾರಿಗಳ ಬಂಧಿಸಿದ್ದರು. ಬಂಧನದ ನಂತರ ಅವರ ವೀಸಾವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸೂರಿ ಯಾವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆನ್ನಲಾದರು ಎಂಬುದರ ವಿವರಗಳನ್ನು ಇಲಾಖೆ ಒದಗಿಸಿಲ್ಲ. ಪ್ಯಾಲೆಸ್ತೀನಿ ಹೋರಾಟ ಗುಂಪಾದ ಹಮಾಸ್ ಅನ್ನು ಅಮೆರಿಕ ಸರ್ಕಾರ ‘ಭಯೋತ್ಪಾದಕ ಸಂಘಟನೆ’ ಪಟ್ಟಿಯಲ್ಲಿ ಸೇರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ಉಡುಪಿ| ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಿಗೆ ನ್ಯಾಯಾಂಗ ಬಂಧನ, ಇಬ್ಬರು ಪೊಲೀಸರು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...