Homeಅಂತರಾಷ್ಟ್ರೀಯಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

- Advertisement -
- Advertisement -

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ಇತ್ತೀಚೆಗೆ ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿದೆ.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

‘ಹಿಂಸೆ ಮತ್ತು ಭಯೋತ್ಪಾದನೆ’ಯನ್ನು ಪ್ರತಿಪಾದಿಸಿದ್ದಕ್ಕಾಗಿ ವಿದ್ಯಾರ್ಥಿ ವೀಸಾ ರದ್ದುಗೊಳಿಸಲ್ಪಟ್ಟ ಕೊಲಂಬಿಯಾ ವಿವಿ ವಿದ್ಯಾರ್ಥಿಗಳಲ್ಲಿ ಒಬ್ಬರು ಸಿಬಿಪಿ ಹೋಮ್ ಆ್ಯಪ್ ಬಳಸಿಕೊಂಡು ಸ್ವಯಂ-ಗಡಿಪಾರು ಮಾಡಿಕೊಂಡಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಂಜನಿ ಅವರು ದೇಶ ತೊರೆದ ವಿಡಿಯೋ ಹಂಚಿಕೊಂಡಿರುವ ಅವರು,”ಅಮೆರಿಕದಲ್ಲಿ ವಾಸಿಸಲು ಮತ್ತು ಅಧ್ಯಯನ ಮಾಡಲು ವೀಸಾ ನೀಡಲಾಗುತ್ತಿರುವುದು ಒಂದು ಸೌಭಾಗ್ಯ. ನೀವು ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವಾಗ ಆ ಸವಲತ್ತನ್ನು ರದ್ದುಗೊಳಿಸಬೇಕು ಮತ್ತು ನೀವು ಈ ದೇಶದಲ್ಲಿ ಇರಬಾರದು. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕ ಬೆಂಬಲಿಗರಲ್ಲಿ ಒಬ್ಬರು ಸ್ವಯಂ ಗಡೀಪಾರು ಮಾಡಲು ಸಿಬಿಪಿ ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಿ ನನಗೆ ಸಂತೋಷವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಎಫ್‌-1 ವೀಸಾದ ಅವಧಿ ಮೀರಿ ತಂಗಿದ್ದ ಪ್ಯಾಲೇಸ್ತೀನ್‌ ವಿದ್ಯಾರ್ಥಿಯೊಬ್ಬರನ್ನು ಬಂಧಿಸಲಾಗಿದೆ” ಎಂದು ಡಿಹೆಚ್‌ಎಸ್‌ ಹೇಳಿಕೆ ತಿಳಿಸಿದೆ.

ಜನವರಿ 26, 2022ರಂದು ಹಾಜರಾತಿ ಕೊರತೆಯಿಂದಾಗಿ ವಿದ್ಯಾರ್ಥಿ ವೀಸಾ ಅವಧಿ ಮುಗಿದಿದೆ. ಆ ನಂತರವೂ ದೇಶದಲ್ಲಿ ಉಳಿದಿದ್ದಕ್ಕಾಗಿ, ವೆಸ್ಟ್ ಬ್ಯಾಂಕ್‌ನ ಪ್ಯಾಲೆಸ್ತೀನ್‌ ಮೂಲದ ಲೆಕಾ ಕೊರ್ದಿಯಾ ಎಂಬ ಕೊಲಂಬಿಯಾ ವಿವಿ ವಿದ್ಯಾರ್ಥಿಯನ್ನು ಐಸಿಇ ಹೆಚ್‌ಎಸ್‌ಐ ನ್ಯೂಯಾರ್ಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 2024 ರಲ್ಲಿ, ನ್ಯೂಯಾರ್ಕ್ ನಗರದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಮಾಸ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರಲ್ಲಿ ಕೊರ್ದಿಯಾ ಕೂಡ ಒಬ್ಬರು.

ಗಾಝಾದಲ್ಲಿ ಇಸ್ರೇಲ್ ನಡೆಸಿರುವ ಮತ್ತು ಪ್ರಸ್ತುತ ನಡೆಸುತ್ತಿರುವ ಆಕ್ರಮಣದ ವಿರುದ್ಧದ ಕ್ಯಾಂಪಸ್ ಪ್ರತಿಭಟನೆಗಳಲ್ಲಿ ಭಾಗವಹಿಸುವುದಕ್ಕೆ ಅಮೆರಿಕದ ಟ್ರಂಪ್ ಆಡಳಿತ ಅವಕಾಶ ನೀಡುತ್ತಿಲ್ಲ. ಈ ಪ್ರತಿಭಟನೆಗಳನ್ನು ಹಮಾಸ್‌ಗೆ ಬೆಂಬಲ ನೀಡುವುದಕ್ಕೆ ಸಮ ಎಂದು ಟ್ರಂಪ್ ಆಡಳಿತ ಪರಿಗಣಿಸಿದೆ.

ಭಾರತೀಯರು ಸೇರಿದಂತೆ ಗಣನೀಯ ಸಂಖ್ಯೆಯ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಹೊಂದಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಲವಾರು ಬಾರಿ ಗಾಝಾ ಆಕ್ರಮಣದ ವಿರುದ್ದ ಪ್ರತಿಭಟನೆಗಳು ನಡೆದಿವೆ. ಆದರೆ, ಟ್ರಂಪ್ ಆಡಳಿತ ಬಂದ ಬಳಿಕ ಕ್ಯಾಂಪಸ್ ಪ್ರತಿಭಟನೆಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಗುರುವಾರ (ಮಾ.13) ತಡರಾತ್ರಿ ಹೊರಡಿಸಿದ ಆದೇಶದಲ್ಲಿ ಟ್ರಂಪ್ ಆಡಳಿತವು ಕೊಲಂಬಿಯಾ ವಿವಿಯ ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್ ಅಧ್ಯಯನ ವಿಭಾಗವನ್ನು (MESAAS) ‘ಅಕಾಡೆಮಿಕ್‌ ರಿಸೀವರ್‌ಶಿಪ್‌’ಗೆ ಒಳಪಡಿಸಬೇಕೆಂದು ಒತ್ತಾಯಿಸಿದೆ. ಅಂದರೆ, ಈ ವಿಭಾಗಗಳನ್ನು ವಿವಿಯ ಹೊರತಾಗಿ ಹೊರಗಿನ ಪ್ರಾಧಿಕಾರವು ನಿಯಂತ್ರಣವನ್ನು ತೆಗೆದುಕೊಳ್ಳಲಿದೆ. ಆಗಾಗ, ವಿಭಾಗಗಳನ್ನು ದುರುಪಯೋಗ ಮಾಡಿಕೊಳ್ಳುವುತ್ತಿರುವುದಕ್ಕೆ ಶಿಕ್ಷೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಮಾರ್ಚ್ 20ರೊಳಗೆ ಅಕಾಡೆಮಿಕ್‌ ರಿಸೀವರ್‌ಶಿಪ್‌ ವ್ಯವಸ್ಥೆ ರಚಿಸುವ ಯೋಜನೆ ರೂಪಿಸುವಂತೆ ವಿವಿಗೆ ಸೂಚಿಸಲಾಗಿದೆ. ಅನುಸರಿಸಲು ವಿಫಲವಾದರೆ ವಿವಿ ಮತ್ತು ಸರ್ಕಾರದ ನಡುವಿನ ಆರ್ಥಿಕ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪತ್ರ ಆದೇಶ ಎಚ್ಚರಿಸಿದೆ.

ಕೊಲಂಬಿಯಾ ವಿವಿ 2023 ಮತ್ತು 2024ರಲ್ಲಿ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿದ್ದ ಆಕ್ರಮಣದ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗಳ ಕೇಂದ್ರ ಬಿಂದುವಾಗಿತ್ತು. ಇದರ ವಿರುದ್ದ ಕ್ಯಾಂಪಸ್‌ಗಳಾದ್ಯಂತ ನಡೆದ ದಮನ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಯಹೂದಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಕಿರುಕುಳ ತಡೆಯುವಲ್ಲಿ ವಿವಿ ವಿಫಲವಾಗಿದೆ ಎಂದು ಆರೋಪಿಸಿ, ವಿವಿಗೆ ಸರ್ಕಾರದ ನೀಡಲು ಉದ್ದೇಶಿಸಿದ್ದ ಸುಮಾರು 400 ಮಿಲಿಯನ್ ಡಾಲರ್ ಆರ್ಥಿಕ ಒಪ್ಪಂದವನ್ನು ರದ್ದುಗೊಳಿಸಿರುವುದಾಗಿ ಕಳೆದವಾರ ಟ್ರಂಪ್ ಆಡಳಿತ ಘೋಷಿಸಿತ್ತು.

ಜನವರಿ 20ರಂದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವ ಡೊನಾಲ್ಡ್ ಟ್ರಂಪ್, “ಅಮೆರಿಕದ ನಾಗರಿಕರು, ಸಂಸ್ಕೃತಿ, ಸರ್ಕಾರ, ಸಂಸ್ಥೆಗಳು ಮತ್ತು ಸ್ಥಾಪಕ ತತ್ವಗಳಿಗೆ’ ಪ್ರತಿಕೂಲ ವರ್ತನೆಗಳನ್ನು ಹೊಂದಿರುವ ಅಥವಾ ನಮ್ಮ ರಾಷ್ಟ್ರೀಯ ಭದ್ರತೆಗೆ ಇರುವ ಬೆದರಿಕೆಗಳನ್ನು ಬೆಂಬಲಿಸುವ ವಿದೇಶಿಯರನ್ನು ತಕ್ಷಣ ದೇಶದಿಂದ ಹೊರಹಾಕುವಂತೆ ಸೂಚಿಸಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದ ವೆಬ್‌ಸೈಟ್‌ನ ಪ್ರಕಾರ, ರಂಜನಿ ಶ್ರೀನಿವಾಸನ್ ಅಹಮದಾಬಾದ್‌ನ ಸಿಇಪಿಟಿ ವಿಶ್ವವಿದ್ಯಾಲಯದಿಂದ ಡಿಸೈನಿಂಗ್‌ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ಗ್ರಾಜುಯೇಟ್ ಸ್ಕೂಲ್ ಆಫ್ ಡಿಸೈನ್‌ನಲ್ಲಿ ಕ್ರಿಟಿಕಲ್ ಕನ್ಸರ್ವೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಫುಲ್‌ಬ್ರೈಟ್ ನೆಹರು ಮತ್ತು ಇನ್‌ಲ್ಯಾಕ್ಸ್ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...