Homeಅಂತರಾಷ್ಟ್ರೀಯಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

- Advertisement -
- Advertisement -

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ಇತ್ತೀಚೆಗೆ ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿದೆ.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

‘ಹಿಂಸೆ ಮತ್ತು ಭಯೋತ್ಪಾದನೆ’ಯನ್ನು ಪ್ರತಿಪಾದಿಸಿದ್ದಕ್ಕಾಗಿ ವಿದ್ಯಾರ್ಥಿ ವೀಸಾ ರದ್ದುಗೊಳಿಸಲ್ಪಟ್ಟ ಕೊಲಂಬಿಯಾ ವಿವಿ ವಿದ್ಯಾರ್ಥಿಗಳಲ್ಲಿ ಒಬ್ಬರು ಸಿಬಿಪಿ ಹೋಮ್ ಆ್ಯಪ್ ಬಳಸಿಕೊಂಡು ಸ್ವಯಂ-ಗಡಿಪಾರು ಮಾಡಿಕೊಂಡಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಂಜನಿ ಅವರು ದೇಶ ತೊರೆದ ವಿಡಿಯೋ ಹಂಚಿಕೊಂಡಿರುವ ಅವರು,”ಅಮೆರಿಕದಲ್ಲಿ ವಾಸಿಸಲು ಮತ್ತು ಅಧ್ಯಯನ ಮಾಡಲು ವೀಸಾ ನೀಡಲಾಗುತ್ತಿರುವುದು ಒಂದು ಸೌಭಾಗ್ಯ. ನೀವು ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವಾಗ ಆ ಸವಲತ್ತನ್ನು ರದ್ದುಗೊಳಿಸಬೇಕು ಮತ್ತು ನೀವು ಈ ದೇಶದಲ್ಲಿ ಇರಬಾರದು. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕ ಬೆಂಬಲಿಗರಲ್ಲಿ ಒಬ್ಬರು ಸ್ವಯಂ ಗಡೀಪಾರು ಮಾಡಲು ಸಿಬಿಪಿ ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಿ ನನಗೆ ಸಂತೋಷವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಎಫ್‌-1 ವೀಸಾದ ಅವಧಿ ಮೀರಿ ತಂಗಿದ್ದ ಪ್ಯಾಲೇಸ್ತೀನ್‌ ವಿದ್ಯಾರ್ಥಿಯೊಬ್ಬರನ್ನು ಬಂಧಿಸಲಾಗಿದೆ” ಎಂದು ಡಿಹೆಚ್‌ಎಸ್‌ ಹೇಳಿಕೆ ತಿಳಿಸಿದೆ.

ಜನವರಿ 26, 2022ರಂದು ಹಾಜರಾತಿ ಕೊರತೆಯಿಂದಾಗಿ ವಿದ್ಯಾರ್ಥಿ ವೀಸಾ ಅವಧಿ ಮುಗಿದಿದೆ. ಆ ನಂತರವೂ ದೇಶದಲ್ಲಿ ಉಳಿದಿದ್ದಕ್ಕಾಗಿ, ವೆಸ್ಟ್ ಬ್ಯಾಂಕ್‌ನ ಪ್ಯಾಲೆಸ್ತೀನ್‌ ಮೂಲದ ಲೆಕಾ ಕೊರ್ದಿಯಾ ಎಂಬ ಕೊಲಂಬಿಯಾ ವಿವಿ ವಿದ್ಯಾರ್ಥಿಯನ್ನು ಐಸಿಇ ಹೆಚ್‌ಎಸ್‌ಐ ನ್ಯೂಯಾರ್ಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 2024 ರಲ್ಲಿ, ನ್ಯೂಯಾರ್ಕ್ ನಗರದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಮಾಸ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರಲ್ಲಿ ಕೊರ್ದಿಯಾ ಕೂಡ ಒಬ್ಬರು.

ಗಾಝಾದಲ್ಲಿ ಇಸ್ರೇಲ್ ನಡೆಸಿರುವ ಮತ್ತು ಪ್ರಸ್ತುತ ನಡೆಸುತ್ತಿರುವ ಆಕ್ರಮಣದ ವಿರುದ್ಧದ ಕ್ಯಾಂಪಸ್ ಪ್ರತಿಭಟನೆಗಳಲ್ಲಿ ಭಾಗವಹಿಸುವುದಕ್ಕೆ ಅಮೆರಿಕದ ಟ್ರಂಪ್ ಆಡಳಿತ ಅವಕಾಶ ನೀಡುತ್ತಿಲ್ಲ. ಈ ಪ್ರತಿಭಟನೆಗಳನ್ನು ಹಮಾಸ್‌ಗೆ ಬೆಂಬಲ ನೀಡುವುದಕ್ಕೆ ಸಮ ಎಂದು ಟ್ರಂಪ್ ಆಡಳಿತ ಪರಿಗಣಿಸಿದೆ.

ಭಾರತೀಯರು ಸೇರಿದಂತೆ ಗಣನೀಯ ಸಂಖ್ಯೆಯ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಹೊಂದಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಲವಾರು ಬಾರಿ ಗಾಝಾ ಆಕ್ರಮಣದ ವಿರುದ್ದ ಪ್ರತಿಭಟನೆಗಳು ನಡೆದಿವೆ. ಆದರೆ, ಟ್ರಂಪ್ ಆಡಳಿತ ಬಂದ ಬಳಿಕ ಕ್ಯಾಂಪಸ್ ಪ್ರತಿಭಟನೆಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಗುರುವಾರ (ಮಾ.13) ತಡರಾತ್ರಿ ಹೊರಡಿಸಿದ ಆದೇಶದಲ್ಲಿ ಟ್ರಂಪ್ ಆಡಳಿತವು ಕೊಲಂಬಿಯಾ ವಿವಿಯ ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್ ಅಧ್ಯಯನ ವಿಭಾಗವನ್ನು (MESAAS) ‘ಅಕಾಡೆಮಿಕ್‌ ರಿಸೀವರ್‌ಶಿಪ್‌’ಗೆ ಒಳಪಡಿಸಬೇಕೆಂದು ಒತ್ತಾಯಿಸಿದೆ. ಅಂದರೆ, ಈ ವಿಭಾಗಗಳನ್ನು ವಿವಿಯ ಹೊರತಾಗಿ ಹೊರಗಿನ ಪ್ರಾಧಿಕಾರವು ನಿಯಂತ್ರಣವನ್ನು ತೆಗೆದುಕೊಳ್ಳಲಿದೆ. ಆಗಾಗ, ವಿಭಾಗಗಳನ್ನು ದುರುಪಯೋಗ ಮಾಡಿಕೊಳ್ಳುವುತ್ತಿರುವುದಕ್ಕೆ ಶಿಕ್ಷೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಮಾರ್ಚ್ 20ರೊಳಗೆ ಅಕಾಡೆಮಿಕ್‌ ರಿಸೀವರ್‌ಶಿಪ್‌ ವ್ಯವಸ್ಥೆ ರಚಿಸುವ ಯೋಜನೆ ರೂಪಿಸುವಂತೆ ವಿವಿಗೆ ಸೂಚಿಸಲಾಗಿದೆ. ಅನುಸರಿಸಲು ವಿಫಲವಾದರೆ ವಿವಿ ಮತ್ತು ಸರ್ಕಾರದ ನಡುವಿನ ಆರ್ಥಿಕ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪತ್ರ ಆದೇಶ ಎಚ್ಚರಿಸಿದೆ.

ಕೊಲಂಬಿಯಾ ವಿವಿ 2023 ಮತ್ತು 2024ರಲ್ಲಿ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿದ್ದ ಆಕ್ರಮಣದ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗಳ ಕೇಂದ್ರ ಬಿಂದುವಾಗಿತ್ತು. ಇದರ ವಿರುದ್ದ ಕ್ಯಾಂಪಸ್‌ಗಳಾದ್ಯಂತ ನಡೆದ ದಮನ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಯಹೂದಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಕಿರುಕುಳ ತಡೆಯುವಲ್ಲಿ ವಿವಿ ವಿಫಲವಾಗಿದೆ ಎಂದು ಆರೋಪಿಸಿ, ವಿವಿಗೆ ಸರ್ಕಾರದ ನೀಡಲು ಉದ್ದೇಶಿಸಿದ್ದ ಸುಮಾರು 400 ಮಿಲಿಯನ್ ಡಾಲರ್ ಆರ್ಥಿಕ ಒಪ್ಪಂದವನ್ನು ರದ್ದುಗೊಳಿಸಿರುವುದಾಗಿ ಕಳೆದವಾರ ಟ್ರಂಪ್ ಆಡಳಿತ ಘೋಷಿಸಿತ್ತು.

ಜನವರಿ 20ರಂದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವ ಡೊನಾಲ್ಡ್ ಟ್ರಂಪ್, “ಅಮೆರಿಕದ ನಾಗರಿಕರು, ಸಂಸ್ಕೃತಿ, ಸರ್ಕಾರ, ಸಂಸ್ಥೆಗಳು ಮತ್ತು ಸ್ಥಾಪಕ ತತ್ವಗಳಿಗೆ’ ಪ್ರತಿಕೂಲ ವರ್ತನೆಗಳನ್ನು ಹೊಂದಿರುವ ಅಥವಾ ನಮ್ಮ ರಾಷ್ಟ್ರೀಯ ಭದ್ರತೆಗೆ ಇರುವ ಬೆದರಿಕೆಗಳನ್ನು ಬೆಂಬಲಿಸುವ ವಿದೇಶಿಯರನ್ನು ತಕ್ಷಣ ದೇಶದಿಂದ ಹೊರಹಾಕುವಂತೆ ಸೂಚಿಸಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದ ವೆಬ್‌ಸೈಟ್‌ನ ಪ್ರಕಾರ, ರಂಜನಿ ಶ್ರೀನಿವಾಸನ್ ಅಹಮದಾಬಾದ್‌ನ ಸಿಇಪಿಟಿ ವಿಶ್ವವಿದ್ಯಾಲಯದಿಂದ ಡಿಸೈನಿಂಗ್‌ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ಗ್ರಾಜುಯೇಟ್ ಸ್ಕೂಲ್ ಆಫ್ ಡಿಸೈನ್‌ನಲ್ಲಿ ಕ್ರಿಟಿಕಲ್ ಕನ್ಸರ್ವೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಫುಲ್‌ಬ್ರೈಟ್ ನೆಹರು ಮತ್ತು ಇನ್‌ಲ್ಯಾಕ್ಸ್ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...