Homeಅಂತರಾಷ್ಟ್ರೀಯಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

- Advertisement -
- Advertisement -

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ಇತ್ತೀಚೆಗೆ ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿದೆ.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

‘ಹಿಂಸೆ ಮತ್ತು ಭಯೋತ್ಪಾದನೆ’ಯನ್ನು ಪ್ರತಿಪಾದಿಸಿದ್ದಕ್ಕಾಗಿ ವಿದ್ಯಾರ್ಥಿ ವೀಸಾ ರದ್ದುಗೊಳಿಸಲ್ಪಟ್ಟ ಕೊಲಂಬಿಯಾ ವಿವಿ ವಿದ್ಯಾರ್ಥಿಗಳಲ್ಲಿ ಒಬ್ಬರು ಸಿಬಿಪಿ ಹೋಮ್ ಆ್ಯಪ್ ಬಳಸಿಕೊಂಡು ಸ್ವಯಂ-ಗಡಿಪಾರು ಮಾಡಿಕೊಂಡಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಂಜನಿ ಅವರು ದೇಶ ತೊರೆದ ವಿಡಿಯೋ ಹಂಚಿಕೊಂಡಿರುವ ಅವರು,”ಅಮೆರಿಕದಲ್ಲಿ ವಾಸಿಸಲು ಮತ್ತು ಅಧ್ಯಯನ ಮಾಡಲು ವೀಸಾ ನೀಡಲಾಗುತ್ತಿರುವುದು ಒಂದು ಸೌಭಾಗ್ಯ. ನೀವು ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವಾಗ ಆ ಸವಲತ್ತನ್ನು ರದ್ದುಗೊಳಿಸಬೇಕು ಮತ್ತು ನೀವು ಈ ದೇಶದಲ್ಲಿ ಇರಬಾರದು. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕ ಬೆಂಬಲಿಗರಲ್ಲಿ ಒಬ್ಬರು ಸ್ವಯಂ ಗಡೀಪಾರು ಮಾಡಲು ಸಿಬಿಪಿ ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಿ ನನಗೆ ಸಂತೋಷವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಎಫ್‌-1 ವೀಸಾದ ಅವಧಿ ಮೀರಿ ತಂಗಿದ್ದ ಪ್ಯಾಲೇಸ್ತೀನ್‌ ವಿದ್ಯಾರ್ಥಿಯೊಬ್ಬರನ್ನು ಬಂಧಿಸಲಾಗಿದೆ” ಎಂದು ಡಿಹೆಚ್‌ಎಸ್‌ ಹೇಳಿಕೆ ತಿಳಿಸಿದೆ.

ಜನವರಿ 26, 2022ರಂದು ಹಾಜರಾತಿ ಕೊರತೆಯಿಂದಾಗಿ ವಿದ್ಯಾರ್ಥಿ ವೀಸಾ ಅವಧಿ ಮುಗಿದಿದೆ. ಆ ನಂತರವೂ ದೇಶದಲ್ಲಿ ಉಳಿದಿದ್ದಕ್ಕಾಗಿ, ವೆಸ್ಟ್ ಬ್ಯಾಂಕ್‌ನ ಪ್ಯಾಲೆಸ್ತೀನ್‌ ಮೂಲದ ಲೆಕಾ ಕೊರ್ದಿಯಾ ಎಂಬ ಕೊಲಂಬಿಯಾ ವಿವಿ ವಿದ್ಯಾರ್ಥಿಯನ್ನು ಐಸಿಇ ಹೆಚ್‌ಎಸ್‌ಐ ನ್ಯೂಯಾರ್ಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 2024 ರಲ್ಲಿ, ನ್ಯೂಯಾರ್ಕ್ ನಗರದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಮಾಸ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರಲ್ಲಿ ಕೊರ್ದಿಯಾ ಕೂಡ ಒಬ್ಬರು.

ಗಾಝಾದಲ್ಲಿ ಇಸ್ರೇಲ್ ನಡೆಸಿರುವ ಮತ್ತು ಪ್ರಸ್ತುತ ನಡೆಸುತ್ತಿರುವ ಆಕ್ರಮಣದ ವಿರುದ್ಧದ ಕ್ಯಾಂಪಸ್ ಪ್ರತಿಭಟನೆಗಳಲ್ಲಿ ಭಾಗವಹಿಸುವುದಕ್ಕೆ ಅಮೆರಿಕದ ಟ್ರಂಪ್ ಆಡಳಿತ ಅವಕಾಶ ನೀಡುತ್ತಿಲ್ಲ. ಈ ಪ್ರತಿಭಟನೆಗಳನ್ನು ಹಮಾಸ್‌ಗೆ ಬೆಂಬಲ ನೀಡುವುದಕ್ಕೆ ಸಮ ಎಂದು ಟ್ರಂಪ್ ಆಡಳಿತ ಪರಿಗಣಿಸಿದೆ.

ಭಾರತೀಯರು ಸೇರಿದಂತೆ ಗಣನೀಯ ಸಂಖ್ಯೆಯ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಹೊಂದಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಲವಾರು ಬಾರಿ ಗಾಝಾ ಆಕ್ರಮಣದ ವಿರುದ್ದ ಪ್ರತಿಭಟನೆಗಳು ನಡೆದಿವೆ. ಆದರೆ, ಟ್ರಂಪ್ ಆಡಳಿತ ಬಂದ ಬಳಿಕ ಕ್ಯಾಂಪಸ್ ಪ್ರತಿಭಟನೆಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಗುರುವಾರ (ಮಾ.13) ತಡರಾತ್ರಿ ಹೊರಡಿಸಿದ ಆದೇಶದಲ್ಲಿ ಟ್ರಂಪ್ ಆಡಳಿತವು ಕೊಲಂಬಿಯಾ ವಿವಿಯ ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್ ಅಧ್ಯಯನ ವಿಭಾಗವನ್ನು (MESAAS) ‘ಅಕಾಡೆಮಿಕ್‌ ರಿಸೀವರ್‌ಶಿಪ್‌’ಗೆ ಒಳಪಡಿಸಬೇಕೆಂದು ಒತ್ತಾಯಿಸಿದೆ. ಅಂದರೆ, ಈ ವಿಭಾಗಗಳನ್ನು ವಿವಿಯ ಹೊರತಾಗಿ ಹೊರಗಿನ ಪ್ರಾಧಿಕಾರವು ನಿಯಂತ್ರಣವನ್ನು ತೆಗೆದುಕೊಳ್ಳಲಿದೆ. ಆಗಾಗ, ವಿಭಾಗಗಳನ್ನು ದುರುಪಯೋಗ ಮಾಡಿಕೊಳ್ಳುವುತ್ತಿರುವುದಕ್ಕೆ ಶಿಕ್ಷೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಮಾರ್ಚ್ 20ರೊಳಗೆ ಅಕಾಡೆಮಿಕ್‌ ರಿಸೀವರ್‌ಶಿಪ್‌ ವ್ಯವಸ್ಥೆ ರಚಿಸುವ ಯೋಜನೆ ರೂಪಿಸುವಂತೆ ವಿವಿಗೆ ಸೂಚಿಸಲಾಗಿದೆ. ಅನುಸರಿಸಲು ವಿಫಲವಾದರೆ ವಿವಿ ಮತ್ತು ಸರ್ಕಾರದ ನಡುವಿನ ಆರ್ಥಿಕ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪತ್ರ ಆದೇಶ ಎಚ್ಚರಿಸಿದೆ.

ಕೊಲಂಬಿಯಾ ವಿವಿ 2023 ಮತ್ತು 2024ರಲ್ಲಿ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿದ್ದ ಆಕ್ರಮಣದ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗಳ ಕೇಂದ್ರ ಬಿಂದುವಾಗಿತ್ತು. ಇದರ ವಿರುದ್ದ ಕ್ಯಾಂಪಸ್‌ಗಳಾದ್ಯಂತ ನಡೆದ ದಮನ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಯಹೂದಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಕಿರುಕುಳ ತಡೆಯುವಲ್ಲಿ ವಿವಿ ವಿಫಲವಾಗಿದೆ ಎಂದು ಆರೋಪಿಸಿ, ವಿವಿಗೆ ಸರ್ಕಾರದ ನೀಡಲು ಉದ್ದೇಶಿಸಿದ್ದ ಸುಮಾರು 400 ಮಿಲಿಯನ್ ಡಾಲರ್ ಆರ್ಥಿಕ ಒಪ್ಪಂದವನ್ನು ರದ್ದುಗೊಳಿಸಿರುವುದಾಗಿ ಕಳೆದವಾರ ಟ್ರಂಪ್ ಆಡಳಿತ ಘೋಷಿಸಿತ್ತು.

ಜನವರಿ 20ರಂದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವ ಡೊನಾಲ್ಡ್ ಟ್ರಂಪ್, “ಅಮೆರಿಕದ ನಾಗರಿಕರು, ಸಂಸ್ಕೃತಿ, ಸರ್ಕಾರ, ಸಂಸ್ಥೆಗಳು ಮತ್ತು ಸ್ಥಾಪಕ ತತ್ವಗಳಿಗೆ’ ಪ್ರತಿಕೂಲ ವರ್ತನೆಗಳನ್ನು ಹೊಂದಿರುವ ಅಥವಾ ನಮ್ಮ ರಾಷ್ಟ್ರೀಯ ಭದ್ರತೆಗೆ ಇರುವ ಬೆದರಿಕೆಗಳನ್ನು ಬೆಂಬಲಿಸುವ ವಿದೇಶಿಯರನ್ನು ತಕ್ಷಣ ದೇಶದಿಂದ ಹೊರಹಾಕುವಂತೆ ಸೂಚಿಸಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದ ವೆಬ್‌ಸೈಟ್‌ನ ಪ್ರಕಾರ, ರಂಜನಿ ಶ್ರೀನಿವಾಸನ್ ಅಹಮದಾಬಾದ್‌ನ ಸಿಇಪಿಟಿ ವಿಶ್ವವಿದ್ಯಾಲಯದಿಂದ ಡಿಸೈನಿಂಗ್‌ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ಗ್ರಾಜುಯೇಟ್ ಸ್ಕೂಲ್ ಆಫ್ ಡಿಸೈನ್‌ನಲ್ಲಿ ಕ್ರಿಟಿಕಲ್ ಕನ್ಸರ್ವೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಫುಲ್‌ಬ್ರೈಟ್ ನೆಹರು ಮತ್ತು ಇನ್‌ಲ್ಯಾಕ್ಸ್ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...