Homeಅಂತರಾಷ್ಟ್ರೀಯಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

ಟ್ರಂಪ್ ಆಡಳಿತದಿಂದ ವೀಸಾ ರದ್ದು: ಕೊಲಂಬಿಯಾ ವಿವಿ ಭಾರತೀಯ ವಿದ್ಯಾರ್ಥಿ ಸ್ವಯಂ ಗಡಿಪಾರು

- Advertisement -
- Advertisement -

‘ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುತ್ತಿದ್ದಾರೆ’ ಮತ್ತು ಹಮಾಸ್ ಅನ್ನು ಬೆಂಬಲಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಡೊನಾಲ್ಡ್ ಟ್ರಂಪ್ ಆಡಳಿತವು ಇತ್ತೀಚೆಗೆ ವೀಸಾ ರದ್ದುಗೊಳಿಸಿದ ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಯೊಬ್ಬರು ಸ್ವಯಂ ಗಡೀಪಾರು ಮಾಡಿ ದೇಶ ತೊರೆದಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಪಿಹೆಚ್‌ಡಿ ವಿದ್ಯಾರ್ಥಿಯಾಗಿದ್ದ ಭಾರತೀಯ ಪ್ರಜೆ ರಂಜನಿ ಶ್ರೀನಿವಾಸನ್ ಅವರು ಎಫ್‌-1 ವಿದ್ಯಾರ್ಥಿ ವೀಸಾದಲ್ಲಿ ಅಮೆರಿಕ ಪ್ರವೇಶಿಸಿದ್ದರು ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ (ಡಿಹೆಚ್‌ಎಸ್‌) ಶುಕ್ರವಾರ (ಮಾ.14) ಹೇಳಿಕೆಯಲ್ಲಿ ತಿಳಿಸಿದೆ.

ರಂಜನಿ ಶ್ರೀನಿವಾಸನ್ ಅವರು ಗಾಝಾದ ಹಮಾಸ್ ಗುಂಪನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಅಮೆರಿಕ ವಿದೇಶಾಂಗ ಇಲಾಖೆ ಮಾರ್ಚ್ 5ರಂದು ಅವರ ವೀಸಾವನ್ನು ರದ್ದುಗೊಳಿಸಿತ್ತು. ಮಾರ್ಚ್ 11 ರಂದು ರಂಜನಿ ಅವರು ಕಸ್ಟಮ್ಸ್ ಅಂಡ್ ಬಾರ್ಡರ್ ಪ್ರೊಟೆಕ್ಷನ್ (ಸಿಬಿಪಿ) ಹೋಮ್ ಆ್ಯಪ್ ಬಳಸಿ ಸ್ವಯಂ-ಗಡೀಪಾರು ಮಾಡಿಕೊಂಡಿರುವುದಾಗಿ ಇಲಾಖೆ ತಿಳಿಸಿದೆ.

‘ಹಿಂಸೆ ಮತ್ತು ಭಯೋತ್ಪಾದನೆ’ಯನ್ನು ಪ್ರತಿಪಾದಿಸಿದ್ದಕ್ಕಾಗಿ ವಿದ್ಯಾರ್ಥಿ ವೀಸಾ ರದ್ದುಗೊಳಿಸಲ್ಪಟ್ಟ ಕೊಲಂಬಿಯಾ ವಿವಿ ವಿದ್ಯಾರ್ಥಿಗಳಲ್ಲಿ ಒಬ್ಬರು ಸಿಬಿಪಿ ಹೋಮ್ ಆ್ಯಪ್ ಬಳಸಿಕೊಂಡು ಸ್ವಯಂ-ಗಡಿಪಾರು ಮಾಡಿಕೊಂಡಿದ್ದಾರೆ ಎಂದು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ರಂಜನಿ ಅವರು ದೇಶ ತೊರೆದ ವಿಡಿಯೋ ಹಂಚಿಕೊಂಡಿರುವ ಅವರು,”ಅಮೆರಿಕದಲ್ಲಿ ವಾಸಿಸಲು ಮತ್ತು ಅಧ್ಯಯನ ಮಾಡಲು ವೀಸಾ ನೀಡಲಾಗುತ್ತಿರುವುದು ಒಂದು ಸೌಭಾಗ್ಯ. ನೀವು ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವಾಗ ಆ ಸವಲತ್ತನ್ನು ರದ್ದುಗೊಳಿಸಬೇಕು ಮತ್ತು ನೀವು ಈ ದೇಶದಲ್ಲಿ ಇರಬಾರದು. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕ ಬೆಂಬಲಿಗರಲ್ಲಿ ಒಬ್ಬರು ಸ್ವಯಂ ಗಡೀಪಾರು ಮಾಡಲು ಸಿಬಿಪಿ ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಿ ನನಗೆ ಸಂತೋಷವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಎಫ್‌-1 ವೀಸಾದ ಅವಧಿ ಮೀರಿ ತಂಗಿದ್ದ ಪ್ಯಾಲೇಸ್ತೀನ್‌ ವಿದ್ಯಾರ್ಥಿಯೊಬ್ಬರನ್ನು ಬಂಧಿಸಲಾಗಿದೆ” ಎಂದು ಡಿಹೆಚ್‌ಎಸ್‌ ಹೇಳಿಕೆ ತಿಳಿಸಿದೆ.

ಜನವರಿ 26, 2022ರಂದು ಹಾಜರಾತಿ ಕೊರತೆಯಿಂದಾಗಿ ವಿದ್ಯಾರ್ಥಿ ವೀಸಾ ಅವಧಿ ಮುಗಿದಿದೆ. ಆ ನಂತರವೂ ದೇಶದಲ್ಲಿ ಉಳಿದಿದ್ದಕ್ಕಾಗಿ, ವೆಸ್ಟ್ ಬ್ಯಾಂಕ್‌ನ ಪ್ಯಾಲೆಸ್ತೀನ್‌ ಮೂಲದ ಲೆಕಾ ಕೊರ್ದಿಯಾ ಎಂಬ ಕೊಲಂಬಿಯಾ ವಿವಿ ವಿದ್ಯಾರ್ಥಿಯನ್ನು ಐಸಿಇ ಹೆಚ್‌ಎಸ್‌ಐ ನ್ಯೂಯಾರ್ಕ್ ಅಧಿಕಾರಿಗಳು ಬಂಧಿಸಿದ್ದಾರೆ.

ಏಪ್ರಿಲ್ 2024 ರಲ್ಲಿ, ನ್ಯೂಯಾರ್ಕ್ ನಗರದ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಮಾಸ್ ಪರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರಲ್ಲಿ ಕೊರ್ದಿಯಾ ಕೂಡ ಒಬ್ಬರು.

ಗಾಝಾದಲ್ಲಿ ಇಸ್ರೇಲ್ ನಡೆಸಿರುವ ಮತ್ತು ಪ್ರಸ್ತುತ ನಡೆಸುತ್ತಿರುವ ಆಕ್ರಮಣದ ವಿರುದ್ಧದ ಕ್ಯಾಂಪಸ್ ಪ್ರತಿಭಟನೆಗಳಲ್ಲಿ ಭಾಗವಹಿಸುವುದಕ್ಕೆ ಅಮೆರಿಕದ ಟ್ರಂಪ್ ಆಡಳಿತ ಅವಕಾಶ ನೀಡುತ್ತಿಲ್ಲ. ಈ ಪ್ರತಿಭಟನೆಗಳನ್ನು ಹಮಾಸ್‌ಗೆ ಬೆಂಬಲ ನೀಡುವುದಕ್ಕೆ ಸಮ ಎಂದು ಟ್ರಂಪ್ ಆಡಳಿತ ಪರಿಗಣಿಸಿದೆ.

ಭಾರತೀಯರು ಸೇರಿದಂತೆ ಗಣನೀಯ ಸಂಖ್ಯೆಯ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳನ್ನು ಹೊಂದಿರುವ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಹಲವಾರು ಬಾರಿ ಗಾಝಾ ಆಕ್ರಮಣದ ವಿರುದ್ದ ಪ್ರತಿಭಟನೆಗಳು ನಡೆದಿವೆ. ಆದರೆ, ಟ್ರಂಪ್ ಆಡಳಿತ ಬಂದ ಬಳಿಕ ಕ್ಯಾಂಪಸ್ ಪ್ರತಿಭಟನೆಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಕಳೆದ ಗುರುವಾರ (ಮಾ.13) ತಡರಾತ್ರಿ ಹೊರಡಿಸಿದ ಆದೇಶದಲ್ಲಿ ಟ್ರಂಪ್ ಆಡಳಿತವು ಕೊಲಂಬಿಯಾ ವಿವಿಯ ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಫ್ರಿಕನ್ ಅಧ್ಯಯನ ವಿಭಾಗವನ್ನು (MESAAS) ‘ಅಕಾಡೆಮಿಕ್‌ ರಿಸೀವರ್‌ಶಿಪ್‌’ಗೆ ಒಳಪಡಿಸಬೇಕೆಂದು ಒತ್ತಾಯಿಸಿದೆ. ಅಂದರೆ, ಈ ವಿಭಾಗಗಳನ್ನು ವಿವಿಯ ಹೊರತಾಗಿ ಹೊರಗಿನ ಪ್ರಾಧಿಕಾರವು ನಿಯಂತ್ರಣವನ್ನು ತೆಗೆದುಕೊಳ್ಳಲಿದೆ. ಆಗಾಗ, ವಿಭಾಗಗಳನ್ನು ದುರುಪಯೋಗ ಮಾಡಿಕೊಳ್ಳುವುತ್ತಿರುವುದಕ್ಕೆ ಶಿಕ್ಷೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.

ಮಾರ್ಚ್ 20ರೊಳಗೆ ಅಕಾಡೆಮಿಕ್‌ ರಿಸೀವರ್‌ಶಿಪ್‌ ವ್ಯವಸ್ಥೆ ರಚಿಸುವ ಯೋಜನೆ ರೂಪಿಸುವಂತೆ ವಿವಿಗೆ ಸೂಚಿಸಲಾಗಿದೆ. ಅನುಸರಿಸಲು ವಿಫಲವಾದರೆ ವಿವಿ ಮತ್ತು ಸರ್ಕಾರದ ನಡುವಿನ ಆರ್ಥಿಕ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಪತ್ರ ಆದೇಶ ಎಚ್ಚರಿಸಿದೆ.

ಕೊಲಂಬಿಯಾ ವಿವಿ 2023 ಮತ್ತು 2024ರಲ್ಲಿ ಗಾಝಾದಲ್ಲಿ ಇಸ್ರೇಲ್‌ ನಡೆಸುತ್ತಿದ್ದ ಆಕ್ರಮಣದ ವಿರುದ್ದ ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆಗಳ ಕೇಂದ್ರ ಬಿಂದುವಾಗಿತ್ತು. ಇದರ ವಿರುದ್ದ ಕ್ಯಾಂಪಸ್‌ಗಳಾದ್ಯಂತ ನಡೆದ ದಮನ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 3,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಯಹೂದಿ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಕಿರುಕುಳ ತಡೆಯುವಲ್ಲಿ ವಿವಿ ವಿಫಲವಾಗಿದೆ ಎಂದು ಆರೋಪಿಸಿ, ವಿವಿಗೆ ಸರ್ಕಾರದ ನೀಡಲು ಉದ್ದೇಶಿಸಿದ್ದ ಸುಮಾರು 400 ಮಿಲಿಯನ್ ಡಾಲರ್ ಆರ್ಥಿಕ ಒಪ್ಪಂದವನ್ನು ರದ್ದುಗೊಳಿಸಿರುವುದಾಗಿ ಕಳೆದವಾರ ಟ್ರಂಪ್ ಆಡಳಿತ ಘೋಷಿಸಿತ್ತು.

ಜನವರಿ 20ರಂದು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿರುವ ಡೊನಾಲ್ಡ್ ಟ್ರಂಪ್, “ಅಮೆರಿಕದ ನಾಗರಿಕರು, ಸಂಸ್ಕೃತಿ, ಸರ್ಕಾರ, ಸಂಸ್ಥೆಗಳು ಮತ್ತು ಸ್ಥಾಪಕ ತತ್ವಗಳಿಗೆ’ ಪ್ರತಿಕೂಲ ವರ್ತನೆಗಳನ್ನು ಹೊಂದಿರುವ ಅಥವಾ ನಮ್ಮ ರಾಷ್ಟ್ರೀಯ ಭದ್ರತೆಗೆ ಇರುವ ಬೆದರಿಕೆಗಳನ್ನು ಬೆಂಬಲಿಸುವ ವಿದೇಶಿಯರನ್ನು ತಕ್ಷಣ ದೇಶದಿಂದ ಹೊರಹಾಕುವಂತೆ ಸೂಚಿಸಿದ್ದಾರೆ.

ಕೊಲಂಬಿಯಾ ವಿಶ್ವವಿದ್ಯಾಲಯದ ವೆಬ್‌ಸೈಟ್‌ನ ಪ್ರಕಾರ, ರಂಜನಿ ಶ್ರೀನಿವಾಸನ್ ಅಹಮದಾಬಾದ್‌ನ ಸಿಇಪಿಟಿ ವಿಶ್ವವಿದ್ಯಾಲಯದಿಂದ ಡಿಸೈನಿಂಗ್‌ನಲ್ಲಿ ಪದವಿ ಪಡೆದಿದ್ದಾರೆ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯದ ಗ್ರಾಜುಯೇಟ್ ಸ್ಕೂಲ್ ಆಫ್ ಡಿಸೈನ್‌ನಲ್ಲಿ ಕ್ರಿಟಿಕಲ್ ಕನ್ಸರ್ವೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯಲು ಫುಲ್‌ಬ್ರೈಟ್ ನೆಹರು ಮತ್ತು ಇನ್‌ಲ್ಯಾಕ್ಸ್ ವಿದ್ಯಾರ್ಥಿವೇತನವನ್ನು ಪಡೆದಿದ್ದಾರೆ.

ಪ್ಯಾಲೆಸ್ಟೀನಿಯನ್ನರನ್ನು  ಪೂರ್ವ ಆಫ್ರಿಕಾಕ್ಕೆ ಸ್ಥಳಾಂತರಿಸಲು ಬಯಸುತ್ತಿರುವ ಅಮೆರಿಕ, ಇಸ್ರೇಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...