Homeಅಂತರಾಷ್ಟ್ರೀಯಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

ಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

- Advertisement -
- Advertisement -

ನ್ಯೂಜೆರ್ಸಿಯ ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಭಾರತೀಯ ವಿದ್ಯಾರ್ಥಿಯೊಬ್ಬರಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವುವ ಮೂಲಕ ಬಂಧಿಸಿದ ಆತಂಕಕಾರಿ ವಿಡಿಯೋ ವೈರಲ್ ಆಗಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸದಿಂ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜೂನ್ 7ರಂದು ನಡೆದ ಈ ಘಟನೆಯ ವಿಡಿಯೋವನ್ನು ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಎಲ್ಲೆಡೆ ವೈರಲ್ ಆಗಿದೆ.

ಆ ರಾತ್ರಿ ವಿದ್ಯಾರ್ಥಿಗೆ ವಿಮಾನ ಹತ್ತಲು ಸಮಯ ನಿಗದಿಯಾಗಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು, ಬಳಿಕ ಬಿಟ್ಟು ಕಳಿಸಿದ್ದಾರೆ ಎಂದು ಜೈನ್ ಹೇಳಿದ್ದಾರೆ.

ಕುನಾಲ್ ಜೈನ್ ಹಂಚಿಕೊಂಡಿರುವ ವಿಡಿಯೋದಲ್ಲಿ ವಿದ್ಯಾರ್ಥಿ ನೆಲದ ಮೇಲೆ ಬಿದ್ದು ಅಳುತ್ತಿರುವು ಮತ್ತು ಅಧಿಕಾರಿಗಳು ಆತನ ಹತ್ತಿರದಲ್ಲಿ ನಿಂತಿರುವುದನ್ನು ನೋಡಬಹುದು. ಘಟನೆಯನ್ನು ನೇರವಾಗಿ ಕಂಡ ಜೈನ್, ವಿದ್ಯಾರ್ಥಿಯ ಪರಿಸ್ಥಿತಿಯ ಬಗ್ಗೆ ದುಃಖ ವ್ಯಕ್ತಪಡಿಸುತ್ತಾ, “ನಿನ್ನೆ ರಾತ್ರಿ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಯನ್ನು ಕೈಕೋಳ ಹಾಕಿ ಅಪರಾಧಿಯಂತೆ ನಡೆಸಿಕೊಳ್ಳುವುದನ್ನು ನಾನು ನೋಡಿದೆ” ಎಂದು ಬರೆದುಕೊಂಡಿದ್ದಾರೆ.

“ಅವನು (ವಿದ್ಯಾರ್ಥಿ) ಕನಸುಗಳನ್ನು ಬೆನ್ನಟ್ಟುತ್ತಾ ಬಂದವನು, ಹಾನಿ ಮಾಡಲು ಅಲ್ಲ. ಒಬ್ಬ ಅನಿವಾಸಿ ಭಾರತೀಯನಾಗಿ ನಾನು ಅಸಹಾಯಕನಾಗಿದ್ದೆ, ಎದೆ ಒಡೆದಂತೆ ಆಯಿತು. ಇದು ಮಾನವ ದುರಂತ” ಎಂದು ಕುನಾಲ್ ಜೈನ್ ಹೇಳಿದ್ದಾರೆ.

ವಿದ್ಯಾರ್ಥಿಯ ಕುಟುಂಬಕ್ಕೆ ನಡೆದ ಘಟನೆಗಳ ಬಗ್ಗೆ ಮಾಹಿತಿಯಿಲ್ಲ ಎಂದು ಜೈನ್ ಹೇಳಿದ್ದಾರೆ. “ಈ ಬಡ ಮಗುವಿನ ಪೋಷಕರಿಗೆ ಅವನಿಗೆ ಏನಾಗುತ್ತಿದೆ ಎಂದು ತಿಳಿದಿರುವುದಿಲ್ಲ” ಎಂದು ಜೂನ್ 9ರಂದು ಬೆಳಿಗ್ಗೆ 4:43ಕ್ಕೆ ಹಂಚಿಕೊಂಡ ಪೋಸ್ಟ್‌ನಲ್ಲಿ ಜೈನ್ ಬರೆದಿದ್ದಾರೆ.

ವಾಷಿಂಗ್ಟನ್ ಡಿ.ಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಟ್ಯಾಗ್ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಜೈನ್ ಒತ್ತಾಯಿಸಿದ್ದರು.

ಪೋಸ್ಟ್‌ಗೆ ಪ್ರತಿಕ್ರಿಯಿಸಿದ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್, “ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಜೆಯೊಬ್ಬರು ಸಮಸ್ಯೆ ಎದುರಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಹೇಳಿದೆ.

ಸದಾ ಭಾರತೀಯ ಪ್ರಜೆಗಳ ನೆರವಿಗೆ ಬದ್ಧ ಎಂದು ಕಾನ್ಸುಲೇಟ್ ಭರವಸೆ ನೀಡಿದೆ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....