Homeಅಂತರಾಷ್ಟ್ರೀಯಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

ಅಮೆರಿಕ| ಭಾರತೀಯ ವಿದ್ಯಾರ್ಥಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವಿ ದೌರ್ಜನ್ಯ; ರಾಯಭಾರ ಕಚೇರಿ ಪ್ರತಿಕ್ರಿಯೆ

- Advertisement -
- Advertisement -

ನ್ಯೂಜೆರ್ಸಿಯ ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿ ಭಾರತೀಯ ವಿದ್ಯಾರ್ಥಿಯೊಬ್ಬರಿಗೆ ಕೈಕೋಳ ಹಾಕಿ, ನೆಲಕ್ಕೆ ಕೆಡವುವ ಮೂಲಕ ಬಂಧಿಸಿದ ಆತಂಕಕಾರಿ ವಿಡಿಯೋ ವೈರಲ್ ಆಗಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ದೂತಾವಾಸದಿಂ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜೂನ್ 7ರಂದು ನಡೆದ ಈ ಘಟನೆಯ ವಿಡಿಯೋವನ್ನು ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ಎಲ್ಲೆಡೆ ವೈರಲ್ ಆಗಿದೆ.

ಆ ರಾತ್ರಿ ವಿದ್ಯಾರ್ಥಿಗೆ ವಿಮಾನ ಹತ್ತಲು ಸಮಯ ನಿಗದಿಯಾಗಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು, ಬಳಿಕ ಬಿಟ್ಟು ಕಳಿಸಿದ್ದಾರೆ ಎಂದು ಜೈನ್ ಹೇಳಿದ್ದಾರೆ.

ಕುನಾಲ್ ಜೈನ್ ಹಂಚಿಕೊಂಡಿರುವ ವಿಡಿಯೋದಲ್ಲಿ ವಿದ್ಯಾರ್ಥಿ ನೆಲದ ಮೇಲೆ ಬಿದ್ದು ಅಳುತ್ತಿರುವು ಮತ್ತು ಅಧಿಕಾರಿಗಳು ಆತನ ಹತ್ತಿರದಲ್ಲಿ ನಿಂತಿರುವುದನ್ನು ನೋಡಬಹುದು. ಘಟನೆಯನ್ನು ನೇರವಾಗಿ ಕಂಡ ಜೈನ್, ವಿದ್ಯಾರ್ಥಿಯ ಪರಿಸ್ಥಿತಿಯ ಬಗ್ಗೆ ದುಃಖ ವ್ಯಕ್ತಪಡಿಸುತ್ತಾ, “ನಿನ್ನೆ ರಾತ್ರಿ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಒಬ್ಬ ಭಾರತೀಯ ವಿದ್ಯಾರ್ಥಿಯನ್ನು ಕೈಕೋಳ ಹಾಕಿ ಅಪರಾಧಿಯಂತೆ ನಡೆಸಿಕೊಳ್ಳುವುದನ್ನು ನಾನು ನೋಡಿದೆ” ಎಂದು ಬರೆದುಕೊಂಡಿದ್ದಾರೆ.

“ಅವನು (ವಿದ್ಯಾರ್ಥಿ) ಕನಸುಗಳನ್ನು ಬೆನ್ನಟ್ಟುತ್ತಾ ಬಂದವನು, ಹಾನಿ ಮಾಡಲು ಅಲ್ಲ. ಒಬ್ಬ ಅನಿವಾಸಿ ಭಾರತೀಯನಾಗಿ ನಾನು ಅಸಹಾಯಕನಾಗಿದ್ದೆ, ಎದೆ ಒಡೆದಂತೆ ಆಯಿತು. ಇದು ಮಾನವ ದುರಂತ” ಎಂದು ಕುನಾಲ್ ಜೈನ್ ಹೇಳಿದ್ದಾರೆ.

ವಿದ್ಯಾರ್ಥಿಯ ಕುಟುಂಬಕ್ಕೆ ನಡೆದ ಘಟನೆಗಳ ಬಗ್ಗೆ ಮಾಹಿತಿಯಿಲ್ಲ ಎಂದು ಜೈನ್ ಹೇಳಿದ್ದಾರೆ. “ಈ ಬಡ ಮಗುವಿನ ಪೋಷಕರಿಗೆ ಅವನಿಗೆ ಏನಾಗುತ್ತಿದೆ ಎಂದು ತಿಳಿದಿರುವುದಿಲ್ಲ” ಎಂದು ಜೂನ್ 9ರಂದು ಬೆಳಿಗ್ಗೆ 4:43ಕ್ಕೆ ಹಂಚಿಕೊಂಡ ಪೋಸ್ಟ್‌ನಲ್ಲಿ ಜೈನ್ ಬರೆದಿದ್ದಾರೆ.

ವಾಷಿಂಗ್ಟನ್ ಡಿ.ಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರನ್ನು ಟ್ಯಾಗ್ ಮಾಡಿ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಜೈನ್ ಒತ್ತಾಯಿಸಿದ್ದರು.

ಪೋಸ್ಟ್‌ಗೆ ಪ್ರತಿಕ್ರಿಯಿಸಿದ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್, “ನ್ಯೂವಾರ್ಕ್ ಲಿಬರ್ಟಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಜೆಯೊಬ್ಬರು ಸಮಸ್ಯೆ ಎದುರಿಸಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ಈ ಸಂಬಂಧ ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಹೇಳಿದೆ.

ಸದಾ ಭಾರತೀಯ ಪ್ರಜೆಗಳ ನೆರವಿಗೆ ಬದ್ಧ ಎಂದು ಕಾನ್ಸುಲೇಟ್ ಭರವಸೆ ನೀಡಿದೆ.

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...