Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...