Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...