Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...