Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...