Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...