Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...