Homeಅಂತರಾಷ್ಟ್ರೀಯಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ:  ಇಂದು ಶವ ಪರೀಕ್ಷೆ

- Advertisement -
- Advertisement -

ಟೊರೊಂಟೊ: ಡಿಸೆಂಬರ್ 6ರ ಮುಂಜಾನೆ ಕೆನಡಾದ ಅಲ್ಬರ್ಟಾ ಪ್ರಾಂತ್ಯದ ರಾಜಧಾನಿ ಎಡ್ಮಂಟನ್‌ನಲ್ಲಿ ಹರಿಯಾಣದ ವಿದ್ಯಾರ್ಥಿ ಹರ್ಷನ್‌ದೀಪ್ ಸಿಂಗ್ ಅಂತಾಲ್ ನನ್ನು ಶುಕ್ರವಾರದಂದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ನಗರದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಹತ್ಯೆ ನಡೆದಿದೆ. ಇದಕ್ಕೆ ಸಂಬಂಧಿಸಿ ಎಡ್ಮಂಟನ್ ಪೋಲಿಸ್ ಸರ್ವಿಸ್ (ಇಪಿಎಸ್)  ಇಬ್ಬರನ್ನು ಬಂಧಿಸಿದೆ.

ತನ್ನ ಪ್ರಜೆಯ ಆಘಾತಕಾರಿ ಹತ್ಯೆಗೆ ಭಾರತ ಸಂತಾಪ ವ್ಯಕ್ತಪಡಿಸಿದೆ.

ನಾವು ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ ಮತ್ತು ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಸಹಾಯವನ್ನು ಒದಗಿಸುತ್ತೇವೆ ಎಂದು ಭಾನುವಾರದ ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ವ್ಯಾಂಕೋವರ್‌ನಲ್ಲಿರುವ ಭಾರತದ ದೂತಾವಾಸವು ಹೇಳಿದೆ.

ಶನಿವಾರ ಕೆನಡಾ ಪೊಲೀಸರು (ಇಪಿಎಸ್) ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಮತ್ತು ಅವರನ್ನು ಇವಾನ್ ರೈನ್ (30), ಮತ್ತು ಜುಡಿತ್ ಸಾಲ್ಟಿಯಾಕ್ಸ್(30) ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯರಾತ್ರಿ 12:30ಕ್ಕೆ (ಸ್ಥಳೀಯ ಕಾಲಮಾನ) ಡೌನ್‌ಟೌನ್ ಬ್ರಾಂಚ್ ನ ಗಸ್ತು ಅಧಿಕಾರಿಗಳಿಗೆ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಗುಂಡಿನ ಸದ್ದು ಕೇಳಿ ಅಲ್ಲಿಗೆ ಆಗಮಿಸಿದರು. ಅಲ್ಲಿ 20 ವರ್ಷದ  ಭದ್ರತಾ ಸಿಬ್ಬಂದಿ ಹರ್ಷನದೀಪ್ ಸಿಂಗ್‌ ಹತ್ಯೆಯಾಗಿರುವುದನ್ನು ಪತ್ತೆ ಮಾಡಿದರು. ತಕ್ಷಣ ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಸಾಗಿಸಿದರಾದರೂ ಸಿಂಗ್ ದಾರಿ ಮಧ್ಯೆ ಸಾವನ್ನಪ್ಪಿದನು ಎಂದು ಇಪಿಎಸ್‌ನ ಪ್ರಕಟಣೆ ತಿಳಿಸಿದೆ.

ಸಿಂಗ್ ಸಾವಿನಲ್ಲಿ ಬೇರೆ ಯಾರೋ ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ನಂಬುವುದಿಲ್ಲ ಮತ್ತು ಬಂಧಿತರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಂದು ( ಸೋಮವಾರ) ಶವ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಅದು ಹೇಳಿದೆ.

ಇಪಿಎಸ್ ನ ನರಹತ್ಯೆಗೆ ಸಂಬಂಧಿಸಿ ಸಿಬ್ಬಂದಿ ಸಾರ್ಜೆಂಟ್ ರಾಬ್ ಬಿಲಾವೆ ಅವರು, “ಸಾಮಾನ್ಯವಾಗಿ” ಮರಣವು ಕೊಲೆ ಎಂದು ದೃಢೀಕರಿಸದ ಹೊರತು ಸತ್ತವರ ಹೆಸರನ್ನು ಬಿಡುಗಡೆ ಮಾಡುವುದಿಲ್ಲ. ಆದರೆ ಈ ನಿದರ್ಶನದಲ್ಲಿ ತನಿಖಾ ಉದ್ದೇಶಕ್ಕಾಗಿ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ನಿವಾರಿಸುವ ಪ್ರಯತ್ನದ ಭಾಗವಾಗಿ ಸಿಂಗ್ ಅವರ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದಿದ್ದಾರೆ.

ಅಂತಾಲ್ ಅವರು ಒಂದೂವರೆ ವರ್ಷಗಳ ಹಿಂದೆ ಅಂತರರಾಷ್ಟ್ರೀಯ ವಿದ್ಯಾರ್ಥಿಯಾಗಿ ಕೆನಡಾಕ್ಕೆ ಬಂದರು. ಆತನು ದಯೆಯುಳ್ಳ ಮತ್ತು ಕಠಿಣ ಪರಿಶ್ರಮದ ಯುವಕನಾಗಿದ್ದನು. ಈ ಅವಿವೇಕದ ಹತ್ಯೆಯು ಅವನ ಕುಟುಂಬ, ಸ್ನೇಹಿತರು ಮತ್ತು ಪ್ರೀತಿಪಾತ್ರರನ್ನು ಛಿದ್ರಗೊಳಿಸಿದೆ ಮತ್ತು ಈ ಅಘಾತಕಾರಿ ನಷ್ಟವನ್ನು ನಿಭಾಯಿಸಲು ಸಂತ್ರಸ್ತನ ಕುಟುಂಬ ಹೆಣಗಾಡುತ್ತಿದೆ ಎಂದು ಸಂತ್ರಸ್ತನ ಕುಟುಂಬಕ್ಕಾಗಿ ಆನ್‌ಲೈನ್ ಹಣ ಸಂಗ್ರಹಿಸುತ್ತಿರುವ ನಿಧಿಸಂಗ್ರಹಣೆಗಾರನೊಬ್ಬ ಹೇಳಿದ್ದಾನೆ.

ಸಿಂಗ್ ತನ್ನ ಹೆತ್ತವರನ್ನು ಮತ್ತು ಸಹೋದರಿಯನ್ನು ಅಗಲಿದ್ದಾರೆ.  ಕುಟುಂಬವು ಹರಿಯಾಣದ ಅಂಬಾಲಾದ ಪಿಂಡ್ ಮಾತೆಹ್ರಿ ಜತ್ತನ್‌ನಲ್ಲಿ ನೆಲೆಸಿದೆ ಎಂದು ವರದಿ ಮಾಡಲಾಗಿದೆ.

ಈ ಹತ್ಯೆಯಿಂದ ಸಮುದಾಯವು ಹೇಗೆ ಬೆಚ್ಚಿಬಿದ್ದಿದೆ ಎಂಬುದಕ್ಕೆ ನಿಧಿಸಂಗ್ರಹಕಾರನು ಈಗಾಗಲೇ ಭಾನುವಾರ ಸಂಜೆಯ ವೇಳೆಗೆ ಕೆನಡಾದ ಡಾಲರ್ 120,000 (ಸುಮಾರು ₹ 75 ಲಕ್ಷ) ಸಂಗ್ರಹಿಸಿದ್ದೆ ಸಾಕ್ಷಿಯಾಗಿದೆ.

ಬಂಧಿತರಲ್ಲಿ ಒಬ್ಬಾತ ಅಪರಾಧದ ಇತಿಹಾಸವನ್ನು ಹೊಂದಿದ್ದಾನೆ ಎಂದು ಔಟ್ಲೆಟ್ ವೆಸ್ಟರ್ನ್ ಸ್ಟ್ಯಾಂಡರ್ಡ್ ಉಲ್ಲೇಖಿಸಿದೆ. ಪಾತಾಕಿ ರೇನ್ ನ ಕ್ರಿಮಿನಲ್ ಇತಿಹಾಸ ನೋಡಿದರೆ ಆತನ ಬಿಡುಗಡೆ ಕುರಿತು ಪ್ರಶ್ನೆ ಉದ್ಭವಿಸುತ್ತದೆ ಮತ್ತು ಕೆನಡಾದ ನ್ಯಾಯ ವ್ಯವಸ್ಥೆಯ ಪರಿಣಾಮ ಬೀರುವಂತಹದ್ದು ಎಂದು ಅದು ಹೇಳಿದೆ.

ಇದನ್ನೂ ಓದಿ…ಮುಂದುವರಿದ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಸಾವು; ರಾಜ್ಯಗಳಿಂದ ಉತ್ತರ ಕೇಳಿದ ಎನ್‌ಎಚ್‌ಆರ್‌ಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...