Homeಅಂತರಾಷ್ಟ್ರೀಯಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ, ಆದರೆ ಮೋದಿ ಮೌನ: ಕಾಂಗ್ರೆಸ್

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಿರಂತರ ದೌರ್ಜನ್ಯ, ಆದರೆ ಮೋದಿ ಮೌನ: ಕಾಂಗ್ರೆಸ್

- Advertisement -
- Advertisement -

ಅಮೆರಿಕದ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬರನ್ನು ಕೈಕೋಳ ಹಾಕಿ ನೆಲಕ್ಕೆ ಒತ್ತಿಹಿಡಿದು ದೌರ್ಜನ್ಯ ಮಾಡುತ್ತಿರುವ ವಿಡಿಯೋ ಬಹಿರಂಗವಾದ ನಂತರ ಕಾಂಗ್ರೆಸ್ ಮಂಗಳವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದಲ್ಲಿ ಭಾರತೀಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತಕ್ಷಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮಾತನಾಡಬೇಕು ಎಂದು ಪಕ್ಷವು ಒತ್ತಾಯಿಸಿದೆ.

ಅಮೆರಿಕದ ನ್ಯೂಯಾರ್ಕ್ ವಿಮಾನ ನಿಲ್ದಾಣದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನನ್ನು ಕೈಕೋಳ ಹಾಕಿ ನೆಲಕ್ಕೆ ಒತ್ತಿಹಿಡಿದು ದೌರ್ಜನ್ಯ ಮಾಡಲಾಗಿದೆ ಎಂಬ ವಿಡಿಯೋ ಮತ್ತು ಚಿತ್ರಗಳನ್ನು ಕಾಂಗ್ರೆಸ್ ನಾಯಕರು ಹಂಚಿಕೊಂಡಿದ್ದಾರೆ.

ಭಾರತೀಯ ಯುವಕನನ್ನು ಕೈಕೋಳ ಹಾಕಿ ಗಡೀಪಾರು ಮಾಡಲಾಗುತ್ತಿದೆ ಎಂಬ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ನ್ಯೂಯಾರ್ಕ್‌ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ ಎಂದು ಪತ್ರಿಕೆಗಳು ವರದಿ ಮಾಡಿವೆ.

“ನ್ಯೂವಾರ್ಕ್ ಲಿಬರ್ಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತೀಯ ಪ್ರಜೆಯೊಬ್ಬರು ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಳುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ನಮಗೆ ಬಂದಿವೆ. ಈ ನಿಟ್ಟಿನಲ್ಲಿ ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಭಾರತೀಯ ಕಾನ್ಸುಲೇಟ್ ಎಕ್ಸ್‌ನಲ್ಲಿ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಸರ್ಕಾರವು ಭಾರತ ಮತ್ತು ಭಾರತೀಯರ ಗೌರವವನ್ನು ರಕ್ಷಿಸುವಲ್ಲಿ ನಿರಂತರವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

“ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿದೇಶಿ ರಾಷ್ಟ್ರದ ಮುಖ್ಯಸ್ಥರೊಬ್ಬರು ಭಾರತದ ಅನುಪಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಿಸಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ಭಾರತದ ಮೇಲೆ ಒತ್ತಡ ಹೇರುವ ಮೂಲಕ ಕದನ ವಿರಾಮವನ್ನು ಖಚಿತಪಡಿಸಿಕೊಂಡಿರುವುದಾಗಿ ನಿರಂತರವಾಗಿ ಹೇಳಿಕೊಳ್ಳುತ್ತಿದ್ದಾರೆ” ಎಂದು ರಮೇಶ್ ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

“ಕಳೆದ ಒಂದು ವರ್ಷದಿಂದ, ಅಮೆರಿಕದಲ್ಲಿ ವಾಸಿಸುವ ಭಾರತೀಯ ನಾಗರಿಕರು ಮತ್ತು ವಿದ್ಯಾರ್ಥಿಗಳನ್ನು ಪದೇ ಪದೇ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ. ಆದರೆ ಪ್ರಧಾನಿ ಮೋದಿ ಮೌನವಾಗಿದ್ದಾರೆ ಅಥವಾ ಅವರು ಮಾತನಾಡುವ ಧೈರ್ಯವನ್ನು ಒಟ್ಟುಗೂಡಿಸಲು ಸಾಧ್ಯವಾಗುತ್ತಿಲ್ಲ ಎಂದು ಭಾವಿಸಬೇಕಿದೆ” ಎಂದು ರಮೇಶ್ ಹೇಳಿದ್ದಾರೆ.

ಅದಾಗ್ಯೂ, ಭಾರತ ಮತ್ತು ಭಾರತೀಯರ ಗೌರವವನ್ನು ರಕ್ಷಿಸುವುದು ಭಾರತದ ಪ್ರಧಾನಿಯು ಪ್ರಮುಖ ಜವಾಬ್ದಾರಿಯಾಗಿದೆ ಎಂದು ರಮೇಶ್ ಪ್ರತಿಪಾದಿಸಿದ್ದಾರೆ.

“ಪ್ರಧಾನಿ ಮೋದಿ ತಕ್ಷಣ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಬೇಕು ಮತ್ತು ಅಮೆರಿಕದಲ್ಲಿ ಭಾರತೀಯರ ವಿರುದ್ಧ ನಡೆಯುತ್ತಿರುವ ದೌರ್ಜನ್ಯ ಮತ್ತು ತೊಂದರೆಗಳ ಬಗ್ಗೆ ಮಧ್ಯಪ್ರವೇಶಿಸಲು ಮನವಿ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಎಕ್ಸ್‌ನಲ್ಲಿ ಘಟನೆಯ ವೀಡಿಯೊವನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದು, ಅದನ್ನು ಭಾರತೀಯ-ಅಮೆರಿಕನ್ ಸಾಮಾಜಿಕ ಉದ್ಯಮಿ ಕುನಾಲ್ ಜೈನ್ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ವಿವಾದಿತ ವೀಡಿಯೊದಲ್ಲಿ ಭಾರತೀಯ ಯುವಕನನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಪೊಲೀಸರು ನೆಲಕ್ಕೆ ಒತ್ತಿಹಿಡಿದು ಕೈಕೋಳ ಹಾಕಿರುವುದು ಕಾಣುತ್ತದೆ.

“ನಿನ್ನೆ ರಾತ್ರಿ ನ್ಯೂಯಾರ್ಕ್ ವಿಮಾನ ನಿಲ್ದಾಣದಿಂದ ಒಬ್ಬ ಯುವ ಭಾರತೀಯ ವಿದ್ಯಾರ್ಥಿಯನ್ನು ಕೈಕೋಳ ಹಾಕಿ, ಕೂಗಾಡುತ್ತಾ, ಅಪರಾಧಿಯಂತೆ ನಡೆಸಿಕೊಳ್ಳುವುದನ್ನು ನಾನು ನೋಡಿದೆ. ಆ ವಿದ್ಯಾರ್ಥಿ ತನ್ನ ಕನಸುಗಳನ್ನು ಬೆನ್ನಟ್ಟುತ್ತಾ ಬಂದವರು, ಅವರು ಯಾರಿಗೂ ಹಾನಿ ಮಾಡಲಿಲ್ಲ. ಒಬ್ಬ ಅನಿವಾಸಿ ಭಾರತೀಯನಾಗಿ, ನಾನು ಅಸಹಾಯಕನಾಗಿದ್ದು, ಹೃದಯ ಮುರಿದ ಭಾವನೆಯಿದೆ. ಇದು ಮಾನವ ದುರಂತ” ಎಂದು ಜೈನ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಜೈನ್ ಅವರ ಪೋಸ್ಟ್ ಅನ್ನು ಟ್ಯಾಗ್ ಮಾಡಿದ ಪವನ್ ಖೇರಾ, “ಇದು ತುಂಬಾ ನೋವಿನ ವಿಚಾರ, ಜೊತೆಗೆ ತುಂಬಾ ಅವಮಾನಕರ ಮತ್ತು ನೋಡಲು ತುಂಬಾ ದುಃಖಕರವಾಗಿದೆ. ಒಂದು ದೇಶವಾಗಿ, ನಾವು ಈ ಅವಮಾನವನ್ನು ಏಕೆ ಸಹಿಸಿಕೊಳ್ಳಬೇಕು?” ಎಂದು ಕೇಳಿದ್ದಾರೆ.

“ದೇವಯಾನಿ ಖೋಬ್ರಗಡೆ ವಿಷಯದ ಸಮಯದಲ್ಲಿ ನಾವು ಅಮೆರಿಕಕ್ಕೆ ನಮ್ಮ ಬಲವನ್ನು ತೋರಿಸಿದ ದಿನಗಳಿಂದ ಈಗ ನಮ್ಮ ನಾಗರಿಕರನ್ನು ಪ್ರಾಣಿಗಳಂತೆ ನಡೆಸಿಕೊಳ್ಳುವುದನ್ನು ನೋಡುವವರೆಗೆ ನಡೆಯುತ್ತಿದೆ. ಜಗತ್ತಿನಲ್ಲಿ ನಮ್ಮ ಬಗ್ಗೆ ಯಾವುದೇ ಸದ್ಭಾವನೆ ಉಳಿದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಬೆಂಗಳೂರು ಕಾಲ್ತುಳಿತ: ಮುಚ್ಚಿದ ಲಕೋಟೆಯಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...