Homeಮುಖಪುಟಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

- Advertisement -
- Advertisement -

ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಖಲಿಸ್ತಾನಿ ಪ್ರತಿಭಟನಾಕಾರರು ಭಾರತೀಯ ಧ್ವಜವನ್ನು ಕೆಳಗಿಳಿಸಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬ್ರಿಟಿಷ್ ಸರ್ಕಾರದ “ಉದಾಸೀನತೆ”ಯೇ ಕಾರಣ ಎಂದು ಆರೋಪಿಸಿದೆ. ಈ ಸಂಬಂಧ ಭಾನುವಾರ ರಾತ್ರಿ ಕೇಂದ್ರ ಸರ್ಕಾರ, ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಕರೆಸಿ ವಿಚಾರಣೆ ನಡೆಸಿದೆ.

ವಾರಿಸ್ ಪಂಜಾಬ್ ಡಿ (WPD) ಗುಂಪಿನ ಮೇಲೆ ಪಂಜಾಬ್‌ನಲ್ಲಿ ಭದ್ರತಾ ಪಡೆಗಳ ದಮನದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು, ಖಲಿಸ್ತಾನಿ ಘೋಷಣೆಗಳನ್ನು ಕೂಗಿದ್ದಲ್ಲದೇ ಹೈಕಮಿಷನ್ ಕಚೇರಿ ಪ್ರವೇಶಕ್ಕೂ ಪ್ರಯತ್ನಿಸಿದರು ಅದು ಸಫಲವಾಗಲಿಲ್ಲ. ಬಳಿಕ ಒಬ್ಬ ಸಿಖ್ ವ್ಯಕ್ತಿ ರಸ್ತೆಯಿಂದ ನೇರವಾಗಿ ಭಾರತೀಯ ಹೈಕಮಿಷನ್ ಕಚೇರಿಯ ಬಾಲ್ಕನಿಗೆ ಏರಿದರು. ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದಾನೆ.

ಈ ವಿಚಾರವಾಗಿ ಕೇಮದ್ರ ಸರ್ಕಾರವು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ. ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.

ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ. ಭಾರತೀಯ ರಾಜತಾಂತ್ರಿಕರ ಭದ್ರತೆಗೆ ಬ್ರಿಟಿಷ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ಭಾರತ ಅಸಮಧಾನ ಹೊರ ಹಾಕಿದೆ.

ಇದನ್ನೂ ಓದಿ: ಖಲಿಸ್ತಾನಿ ನಾಯಕನ ಬಂಧನ; ಪಂಜಾಬ್‌ನಲ್ಲಿ ಇಂಟರ್‌ನೆಟ್ ಬಂದ್

ಈ ಘಟನೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾನುವಾರ ರಾತ್ರಿ ಗಮನಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಲೇ ಕ್ರಮ ವಹಿಸಿದೆ. ಹೈಕಮಿಷನ್ ಆವರಣಕ್ಕೆ ಖಾಲಿಸ್ತಾನಿಗಳ ಪ್ರವೇಶಕ್ಕೆ ಅನುಮತಿಸಿದ ಬ್ರಿಟಿಷ್ ಭದ್ರತೆಯ ವಿಫಲತೆ ಬಗ್ಗೆ ವಿವರಣೆ ಕೇಳಲಾಗಿದೆ. ಈ ಕುರಿತ ಸಚಿವಾಲಯದ ಹೇಳಿಕೆಯೊಂದನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ.

ತ್ರಿವರ್ಣ ಧ್ವಜ ಕೆಳಗಿಳಿಸಿದ ಘಟನೆಯಲ್ಲಿ ಭಾಗಿಯಾದವರನ್ನು ಗುರುತಿಸಿ ಬಂಧಿಸಬೇಕು. ಅವರೆಲ್ಲರನ್ನು ವಿಚಾರಣೆಗೆ ಒಳಪಡಿಸಬೇಕು. ಮುಂದೆಂದೂ ಇಂತಹ ಪ್ರತಿಭಟನೆಗಳು/ಘಟನೆ ಮರುಕಳಿಸದಂತೆ ಅತ್ಯಗತ್ಯ ಮತ್ತು ಸೂಕ್ತ ಭದ್ರತಾ ಕ್ರಮಗಳನ್ನು ಯುಕೆ ಸರ್ಕಾರ ಕೈಗೊಳ್ಳಬೇಕೆಂದು ಭಾರತವು ನಿರೀಕ್ಷಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೈಕಮಿಷನ್ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯ ಸದಸ್ಯರ ಮೂಲಕ ತ್ರಿವರ್ಣ ಧ್ವಜವನ್ನು ಸೂಕ್ತವಾಗಿ ಕಚೇರಿ ಒಳಗೆ ಒಯ್ಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಕರಿತು ಲಂಡನ್‌ನಲ್ಲಿರುವ ವಿದೇಶಿ ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ (FCDO) ಕಚೇರಿಯು ಎಲ್ಲಿಸ್ ಅವರು ಟ್ವೀಟ್ ಮಾಡಿದ್ದಾರೆ.

”ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಇಂದು ನಡೆದ ದಾಳಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ಮಿಷನ್ ಮತ್ತು ಅದರ ಸಿಬ್ಬಂದಿಯ ಸಮಗ್ರತೆಯ ವಿರುದ್ಧ ಇದು ಸಹಿಸಿಕೊಳ್ಳುವಂತಥದ್ದಲ್ಲ. ಬ್ರಿಟಿಷ್ ಸರ್ಕಾರವು ಯಾವಾಗಲೂ ಭಾರತೀಯ ಹೈಕಮಿಷನ್ ಕಚೇರಿಗೆ ನೀಡುವ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಟ್ವೀಟ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಲಂಡನ್‌ನಲ್ಲಿ (UK) ಇರುವ ಭಾರತೀಯ ರಾಜತಾಂತ್ರಿಕ ಕಚೇರಿಗಳ ವಿಚಾರದಲ್ಲಿ ಅಲ್ಲಿನ ಬ್ರೀಟಿಷ್ ಸರ್ಕಾರ ಅಗತ್ಯ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ಸರಿಯಲ್ಲ ಎಂದು ಭಾರತ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಈ ಹಿಂದೆ 2019ರಲ್ಲಿ ಕಾಶ್ಮೀರಿ ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳ ರಾಯಭಾರಿ ಕಚೇರಿಯನ್ನು ಸುತ್ತುವರೆದು ಮೊಟ್ಟೆ ಸೇರಿದಂತೆ ಇನ್ನಿತರ ವಸ್ತು ಎಸೆದಿದ್ದರು. ಇವತ್ತಿನ ಘಟನೆ ಅದಕ್ಕಿಂತಲೂ ಕೆಟ್ಟದಾಗಿದೆ ಎಂದು ಹಳೆಯ ಘಟನೆಯೊಂದನ್ನು ಇಲ್ಲಿ ವಿವರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...