Homeಮುಖಪುಟಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

- Advertisement -
- Advertisement -

ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಖಲಿಸ್ತಾನಿ ಪ್ರತಿಭಟನಾಕಾರರು ಭಾರತೀಯ ಧ್ವಜವನ್ನು ಕೆಳಗಿಳಿಸಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬ್ರಿಟಿಷ್ ಸರ್ಕಾರದ “ಉದಾಸೀನತೆ”ಯೇ ಕಾರಣ ಎಂದು ಆರೋಪಿಸಿದೆ. ಈ ಸಂಬಂಧ ಭಾನುವಾರ ರಾತ್ರಿ ಕೇಂದ್ರ ಸರ್ಕಾರ, ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಕರೆಸಿ ವಿಚಾರಣೆ ನಡೆಸಿದೆ.

ವಾರಿಸ್ ಪಂಜಾಬ್ ಡಿ (WPD) ಗುಂಪಿನ ಮೇಲೆ ಪಂಜಾಬ್‌ನಲ್ಲಿ ಭದ್ರತಾ ಪಡೆಗಳ ದಮನದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು, ಖಲಿಸ್ತಾನಿ ಘೋಷಣೆಗಳನ್ನು ಕೂಗಿದ್ದಲ್ಲದೇ ಹೈಕಮಿಷನ್ ಕಚೇರಿ ಪ್ರವೇಶಕ್ಕೂ ಪ್ರಯತ್ನಿಸಿದರು ಅದು ಸಫಲವಾಗಲಿಲ್ಲ. ಬಳಿಕ ಒಬ್ಬ ಸಿಖ್ ವ್ಯಕ್ತಿ ರಸ್ತೆಯಿಂದ ನೇರವಾಗಿ ಭಾರತೀಯ ಹೈಕಮಿಷನ್ ಕಚೇರಿಯ ಬಾಲ್ಕನಿಗೆ ಏರಿದರು. ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದಾನೆ.

ಈ ವಿಚಾರವಾಗಿ ಕೇಮದ್ರ ಸರ್ಕಾರವು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ. ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.

ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ. ಭಾರತೀಯ ರಾಜತಾಂತ್ರಿಕರ ಭದ್ರತೆಗೆ ಬ್ರಿಟಿಷ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ಭಾರತ ಅಸಮಧಾನ ಹೊರ ಹಾಕಿದೆ.

ಇದನ್ನೂ ಓದಿ: ಖಲಿಸ್ತಾನಿ ನಾಯಕನ ಬಂಧನ; ಪಂಜಾಬ್‌ನಲ್ಲಿ ಇಂಟರ್‌ನೆಟ್ ಬಂದ್

ಈ ಘಟನೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾನುವಾರ ರಾತ್ರಿ ಗಮನಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಲೇ ಕ್ರಮ ವಹಿಸಿದೆ. ಹೈಕಮಿಷನ್ ಆವರಣಕ್ಕೆ ಖಾಲಿಸ್ತಾನಿಗಳ ಪ್ರವೇಶಕ್ಕೆ ಅನುಮತಿಸಿದ ಬ್ರಿಟಿಷ್ ಭದ್ರತೆಯ ವಿಫಲತೆ ಬಗ್ಗೆ ವಿವರಣೆ ಕೇಳಲಾಗಿದೆ. ಈ ಕುರಿತ ಸಚಿವಾಲಯದ ಹೇಳಿಕೆಯೊಂದನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ.

ತ್ರಿವರ್ಣ ಧ್ವಜ ಕೆಳಗಿಳಿಸಿದ ಘಟನೆಯಲ್ಲಿ ಭಾಗಿಯಾದವರನ್ನು ಗುರುತಿಸಿ ಬಂಧಿಸಬೇಕು. ಅವರೆಲ್ಲರನ್ನು ವಿಚಾರಣೆಗೆ ಒಳಪಡಿಸಬೇಕು. ಮುಂದೆಂದೂ ಇಂತಹ ಪ್ರತಿಭಟನೆಗಳು/ಘಟನೆ ಮರುಕಳಿಸದಂತೆ ಅತ್ಯಗತ್ಯ ಮತ್ತು ಸೂಕ್ತ ಭದ್ರತಾ ಕ್ರಮಗಳನ್ನು ಯುಕೆ ಸರ್ಕಾರ ಕೈಗೊಳ್ಳಬೇಕೆಂದು ಭಾರತವು ನಿರೀಕ್ಷಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೈಕಮಿಷನ್ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯ ಸದಸ್ಯರ ಮೂಲಕ ತ್ರಿವರ್ಣ ಧ್ವಜವನ್ನು ಸೂಕ್ತವಾಗಿ ಕಚೇರಿ ಒಳಗೆ ಒಯ್ಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಕರಿತು ಲಂಡನ್‌ನಲ್ಲಿರುವ ವಿದೇಶಿ ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ (FCDO) ಕಚೇರಿಯು ಎಲ್ಲಿಸ್ ಅವರು ಟ್ವೀಟ್ ಮಾಡಿದ್ದಾರೆ.

”ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಇಂದು ನಡೆದ ದಾಳಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ಮಿಷನ್ ಮತ್ತು ಅದರ ಸಿಬ್ಬಂದಿಯ ಸಮಗ್ರತೆಯ ವಿರುದ್ಧ ಇದು ಸಹಿಸಿಕೊಳ್ಳುವಂತಥದ್ದಲ್ಲ. ಬ್ರಿಟಿಷ್ ಸರ್ಕಾರವು ಯಾವಾಗಲೂ ಭಾರತೀಯ ಹೈಕಮಿಷನ್ ಕಚೇರಿಗೆ ನೀಡುವ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಟ್ವೀಟ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಲಂಡನ್‌ನಲ್ಲಿ (UK) ಇರುವ ಭಾರತೀಯ ರಾಜತಾಂತ್ರಿಕ ಕಚೇರಿಗಳ ವಿಚಾರದಲ್ಲಿ ಅಲ್ಲಿನ ಬ್ರೀಟಿಷ್ ಸರ್ಕಾರ ಅಗತ್ಯ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ಸರಿಯಲ್ಲ ಎಂದು ಭಾರತ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಈ ಹಿಂದೆ 2019ರಲ್ಲಿ ಕಾಶ್ಮೀರಿ ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳ ರಾಯಭಾರಿ ಕಚೇರಿಯನ್ನು ಸುತ್ತುವರೆದು ಮೊಟ್ಟೆ ಸೇರಿದಂತೆ ಇನ್ನಿತರ ವಸ್ತು ಎಸೆದಿದ್ದರು. ಇವತ್ತಿನ ಘಟನೆ ಅದಕ್ಕಿಂತಲೂ ಕೆಟ್ಟದಾಗಿದೆ ಎಂದು ಹಳೆಯ ಘಟನೆಯೊಂದನ್ನು ಇಲ್ಲಿ ವಿವರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...