Homeಮುಖಪುಟಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

- Advertisement -
- Advertisement -

ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಖಲಿಸ್ತಾನಿ ಪ್ರತಿಭಟನಾಕಾರರು ಭಾರತೀಯ ಧ್ವಜವನ್ನು ಕೆಳಗಿಳಿಸಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬ್ರಿಟಿಷ್ ಸರ್ಕಾರದ “ಉದಾಸೀನತೆ”ಯೇ ಕಾರಣ ಎಂದು ಆರೋಪಿಸಿದೆ. ಈ ಸಂಬಂಧ ಭಾನುವಾರ ರಾತ್ರಿ ಕೇಂದ್ರ ಸರ್ಕಾರ, ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಕರೆಸಿ ವಿಚಾರಣೆ ನಡೆಸಿದೆ.

ವಾರಿಸ್ ಪಂಜಾಬ್ ಡಿ (WPD) ಗುಂಪಿನ ಮೇಲೆ ಪಂಜಾಬ್‌ನಲ್ಲಿ ಭದ್ರತಾ ಪಡೆಗಳ ದಮನದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು, ಖಲಿಸ್ತಾನಿ ಘೋಷಣೆಗಳನ್ನು ಕೂಗಿದ್ದಲ್ಲದೇ ಹೈಕಮಿಷನ್ ಕಚೇರಿ ಪ್ರವೇಶಕ್ಕೂ ಪ್ರಯತ್ನಿಸಿದರು ಅದು ಸಫಲವಾಗಲಿಲ್ಲ. ಬಳಿಕ ಒಬ್ಬ ಸಿಖ್ ವ್ಯಕ್ತಿ ರಸ್ತೆಯಿಂದ ನೇರವಾಗಿ ಭಾರತೀಯ ಹೈಕಮಿಷನ್ ಕಚೇರಿಯ ಬಾಲ್ಕನಿಗೆ ಏರಿದರು. ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದಾನೆ.

ಈ ವಿಚಾರವಾಗಿ ಕೇಮದ್ರ ಸರ್ಕಾರವು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ. ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.

ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ. ಭಾರತೀಯ ರಾಜತಾಂತ್ರಿಕರ ಭದ್ರತೆಗೆ ಬ್ರಿಟಿಷ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ಭಾರತ ಅಸಮಧಾನ ಹೊರ ಹಾಕಿದೆ.

ಇದನ್ನೂ ಓದಿ: ಖಲಿಸ್ತಾನಿ ನಾಯಕನ ಬಂಧನ; ಪಂಜಾಬ್‌ನಲ್ಲಿ ಇಂಟರ್‌ನೆಟ್ ಬಂದ್

ಈ ಘಟನೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾನುವಾರ ರಾತ್ರಿ ಗಮನಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಲೇ ಕ್ರಮ ವಹಿಸಿದೆ. ಹೈಕಮಿಷನ್ ಆವರಣಕ್ಕೆ ಖಾಲಿಸ್ತಾನಿಗಳ ಪ್ರವೇಶಕ್ಕೆ ಅನುಮತಿಸಿದ ಬ್ರಿಟಿಷ್ ಭದ್ರತೆಯ ವಿಫಲತೆ ಬಗ್ಗೆ ವಿವರಣೆ ಕೇಳಲಾಗಿದೆ. ಈ ಕುರಿತ ಸಚಿವಾಲಯದ ಹೇಳಿಕೆಯೊಂದನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ.

ತ್ರಿವರ್ಣ ಧ್ವಜ ಕೆಳಗಿಳಿಸಿದ ಘಟನೆಯಲ್ಲಿ ಭಾಗಿಯಾದವರನ್ನು ಗುರುತಿಸಿ ಬಂಧಿಸಬೇಕು. ಅವರೆಲ್ಲರನ್ನು ವಿಚಾರಣೆಗೆ ಒಳಪಡಿಸಬೇಕು. ಮುಂದೆಂದೂ ಇಂತಹ ಪ್ರತಿಭಟನೆಗಳು/ಘಟನೆ ಮರುಕಳಿಸದಂತೆ ಅತ್ಯಗತ್ಯ ಮತ್ತು ಸೂಕ್ತ ಭದ್ರತಾ ಕ್ರಮಗಳನ್ನು ಯುಕೆ ಸರ್ಕಾರ ಕೈಗೊಳ್ಳಬೇಕೆಂದು ಭಾರತವು ನಿರೀಕ್ಷಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೈಕಮಿಷನ್ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯ ಸದಸ್ಯರ ಮೂಲಕ ತ್ರಿವರ್ಣ ಧ್ವಜವನ್ನು ಸೂಕ್ತವಾಗಿ ಕಚೇರಿ ಒಳಗೆ ಒಯ್ಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಕರಿತು ಲಂಡನ್‌ನಲ್ಲಿರುವ ವಿದೇಶಿ ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ (FCDO) ಕಚೇರಿಯು ಎಲ್ಲಿಸ್ ಅವರು ಟ್ವೀಟ್ ಮಾಡಿದ್ದಾರೆ.

”ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಇಂದು ನಡೆದ ದಾಳಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ಮಿಷನ್ ಮತ್ತು ಅದರ ಸಿಬ್ಬಂದಿಯ ಸಮಗ್ರತೆಯ ವಿರುದ್ಧ ಇದು ಸಹಿಸಿಕೊಳ್ಳುವಂತಥದ್ದಲ್ಲ. ಬ್ರಿಟಿಷ್ ಸರ್ಕಾರವು ಯಾವಾಗಲೂ ಭಾರತೀಯ ಹೈಕಮಿಷನ್ ಕಚೇರಿಗೆ ನೀಡುವ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಟ್ವೀಟ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಲಂಡನ್‌ನಲ್ಲಿ (UK) ಇರುವ ಭಾರತೀಯ ರಾಜತಾಂತ್ರಿಕ ಕಚೇರಿಗಳ ವಿಚಾರದಲ್ಲಿ ಅಲ್ಲಿನ ಬ್ರೀಟಿಷ್ ಸರ್ಕಾರ ಅಗತ್ಯ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ಸರಿಯಲ್ಲ ಎಂದು ಭಾರತ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಈ ಹಿಂದೆ 2019ರಲ್ಲಿ ಕಾಶ್ಮೀರಿ ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳ ರಾಯಭಾರಿ ಕಚೇರಿಯನ್ನು ಸುತ್ತುವರೆದು ಮೊಟ್ಟೆ ಸೇರಿದಂತೆ ಇನ್ನಿತರ ವಸ್ತು ಎಸೆದಿದ್ದರು. ಇವತ್ತಿನ ಘಟನೆ ಅದಕ್ಕಿಂತಲೂ ಕೆಟ್ಟದಾಗಿದೆ ಎಂದು ಹಳೆಯ ಘಟನೆಯೊಂದನ್ನು ಇಲ್ಲಿ ವಿವರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...