Homeಮುಖಪುಟಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

ಖಲಿಸ್ತಾನಿ ಪ್ರತಿಭಟನಾಕಾರರಿಂದ ಲಂಡನ್​ನಲ್ಲಿನ ಹೈಕಮಿಷನ್​ ಕಚೇರಿ ಎದುರು, ಭಾರತದ ತ್ರಿವರ್ಣ ಧ್ವಜ ಕೆಳಕ್ಕೆ

- Advertisement -
- Advertisement -

ಲಂಡನ್​ನಲ್ಲಿರುವ ಭಾರತೀಯ ಹೈಕಮಿಷನ್​ನಲ್ಲಿ ಖಲಿಸ್ತಾನಿ ಪ್ರತಿಭಟನಾಕಾರರು ಭಾರತೀಯ ಧ್ವಜವನ್ನು ಕೆಳಗಿಳಿಸಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬ್ರಿಟಿಷ್ ಸರ್ಕಾರದ “ಉದಾಸೀನತೆ”ಯೇ ಕಾರಣ ಎಂದು ಆರೋಪಿಸಿದೆ. ಈ ಸಂಬಂಧ ಭಾನುವಾರ ರಾತ್ರಿ ಕೇಂದ್ರ ಸರ್ಕಾರ, ಬ್ರಿಟಿಷ್ ಡೆಪ್ಯೂಟಿ ಹೈ ಕಮಿಷನರ್ ಕ್ರಿಸ್ಟಿನಾ ಸ್ಕಾಟ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಕರೆಸಿ ವಿಚಾರಣೆ ನಡೆಸಿದೆ.

ವಾರಿಸ್ ಪಂಜಾಬ್ ಡಿ (WPD) ಗುಂಪಿನ ಮೇಲೆ ಪಂಜಾಬ್‌ನಲ್ಲಿ ಭದ್ರತಾ ಪಡೆಗಳ ದಮನದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು, ಖಲಿಸ್ತಾನಿ ಘೋಷಣೆಗಳನ್ನು ಕೂಗಿದ್ದಲ್ಲದೇ ಹೈಕಮಿಷನ್ ಕಚೇರಿ ಪ್ರವೇಶಕ್ಕೂ ಪ್ರಯತ್ನಿಸಿದರು ಅದು ಸಫಲವಾಗಲಿಲ್ಲ. ಬಳಿಕ ಒಬ್ಬ ಸಿಖ್ ವ್ಯಕ್ತಿ ರಸ್ತೆಯಿಂದ ನೇರವಾಗಿ ಭಾರತೀಯ ಹೈಕಮಿಷನ್ ಕಚೇರಿಯ ಬಾಲ್ಕನಿಗೆ ಏರಿದರು. ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದಾನೆ.

ಈ ವಿಚಾರವಾಗಿ ಕೇಮದ್ರ ಸರ್ಕಾರವು, ದೆಹಲಿಯಲ್ಲಿರುವ ಬ್ರಿಟಿಷ್ ಹೈಕಮಿಷನ್‌ನ ಉಪ ಮುಖ್ಯಸ್ಥರನ್ನು ಕರೆಸಿ ತನ್ನ ಕಠಿಣ ನಿಲುವಿನ ಬಗ್ಗೆ ಎಚ್ಚರಿಸಿದೆ. ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಮಾತುಕತೆ ನಡೆಸಿದೆ.

ಧ್ವಜವನ್ನು ಕೆಳಗಿಳಿಸಿರುವ ಘಟನೆ ಕುರಿತು ದೆಹಲಿಯಲ್ಲಿರುವ ಹೈಕಮಿಷನ್​ನ ಅಧಿಕಾರಿಯನ್ನು ಎಂಇಎಗೆ ಕರೆಸಲಾಗಿದೆ. ಪ್ರತಿಭಟನಾಕಾರರಿಗೆ ಹೈಕಮಿಷನ್ ಆವರಣ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಭದ್ರತಾ ಲೋಪದ ಕುರಿತು ವಿವರಣೆ ಕೇಳಲಾಗಿದೆ. ಭಾರತೀಯ ರಾಜತಾಂತ್ರಿಕರ ಭದ್ರತೆಗೆ ಬ್ರಿಟಿಷ್ ಸರ್ಕಾರದ ಉದಾಸೀನತೆ ಸ್ವೀಕಾರಾರ್ಹವಲ್ಲ ಎಂದು ಭಾರತ ಅಸಮಧಾನ ಹೊರ ಹಾಕಿದೆ.

ಇದನ್ನೂ ಓದಿ: ಖಲಿಸ್ತಾನಿ ನಾಯಕನ ಬಂಧನ; ಪಂಜಾಬ್‌ನಲ್ಲಿ ಇಂಟರ್‌ನೆಟ್ ಬಂದ್

ಈ ಘಟನೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾನುವಾರ ರಾತ್ರಿ ಗಮನಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೂಡಲೇ ಕ್ರಮ ವಹಿಸಿದೆ. ಹೈಕಮಿಷನ್ ಆವರಣಕ್ಕೆ ಖಾಲಿಸ್ತಾನಿಗಳ ಪ್ರವೇಶಕ್ಕೆ ಅನುಮತಿಸಿದ ಬ್ರಿಟಿಷ್ ಭದ್ರತೆಯ ವಿಫಲತೆ ಬಗ್ಗೆ ವಿವರಣೆ ಕೇಳಲಾಗಿದೆ. ಈ ಕುರಿತ ಸಚಿವಾಲಯದ ಹೇಳಿಕೆಯೊಂದನ್ನು ರಾತ್ರಿ ಬಿಡುಗಡೆ ಮಾಡಲಾಗಿದೆ.

ತ್ರಿವರ್ಣ ಧ್ವಜ ಕೆಳಗಿಳಿಸಿದ ಘಟನೆಯಲ್ಲಿ ಭಾಗಿಯಾದವರನ್ನು ಗುರುತಿಸಿ ಬಂಧಿಸಬೇಕು. ಅವರೆಲ್ಲರನ್ನು ವಿಚಾರಣೆಗೆ ಒಳಪಡಿಸಬೇಕು. ಮುಂದೆಂದೂ ಇಂತಹ ಪ್ರತಿಭಟನೆಗಳು/ಘಟನೆ ಮರುಕಳಿಸದಂತೆ ಅತ್ಯಗತ್ಯ ಮತ್ತು ಸೂಕ್ತ ಭದ್ರತಾ ಕ್ರಮಗಳನ್ನು ಯುಕೆ ಸರ್ಕಾರ ಕೈಗೊಳ್ಳಬೇಕೆಂದು ಭಾರತವು ನಿರೀಕ್ಷಿಸುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹೈಕಮಿಷನ್ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯ ಸದಸ್ಯರ ಮೂಲಕ ತ್ರಿವರ್ಣ ಧ್ವಜವನ್ನು ಸೂಕ್ತವಾಗಿ ಕಚೇರಿ ಒಳಗೆ ಒಯ್ಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆ ಕರಿತು ಲಂಡನ್‌ನಲ್ಲಿರುವ ವಿದೇಶಿ ಕಾಮನ್‌ವೆಲ್ತ್ ಮತ್ತು ಅಭಿವೃದ್ಧಿ (FCDO) ಕಚೇರಿಯು ಎಲ್ಲಿಸ್ ಅವರು ಟ್ವೀಟ್ ಮಾಡಿದ್ದಾರೆ.

”ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ಇಂದು ನಡೆದ ದಾಳಿಯಿಂದ ದಿಗ್ಭ್ರಮೆಗೊಂಡಿದ್ದೇನೆ. ಮಿಷನ್ ಮತ್ತು ಅದರ ಸಿಬ್ಬಂದಿಯ ಸಮಗ್ರತೆಯ ವಿರುದ್ಧ ಇದು ಸಹಿಸಿಕೊಳ್ಳುವಂತಥದ್ದಲ್ಲ. ಬ್ರಿಟಿಷ್ ಸರ್ಕಾರವು ಯಾವಾಗಲೂ ಭಾರತೀಯ ಹೈಕಮಿಷನ್ ಕಚೇರಿಗೆ ನೀಡುವ ಭದ್ರತೆಯನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಟ್ವೀಟ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಲಂಡನ್‌ನಲ್ಲಿ (UK) ಇರುವ ಭಾರತೀಯ ರಾಜತಾಂತ್ರಿಕ ಕಚೇರಿಗಳ ವಿಚಾರದಲ್ಲಿ ಅಲ್ಲಿನ ಬ್ರೀಟಿಷ್ ಸರ್ಕಾರ ಅಗತ್ಯ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ಸರಿಯಲ್ಲ ಎಂದು ಭಾರತ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ಈ ಹಿಂದೆ 2019ರಲ್ಲಿ ಕಾಶ್ಮೀರಿ ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪುಗಳ ರಾಯಭಾರಿ ಕಚೇರಿಯನ್ನು ಸುತ್ತುವರೆದು ಮೊಟ್ಟೆ ಸೇರಿದಂತೆ ಇನ್ನಿತರ ವಸ್ತು ಎಸೆದಿದ್ದರು. ಇವತ್ತಿನ ಘಟನೆ ಅದಕ್ಕಿಂತಲೂ ಕೆಟ್ಟದಾಗಿದೆ ಎಂದು ಹಳೆಯ ಘಟನೆಯೊಂದನ್ನು ಇಲ್ಲಿ ವಿವರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...