Homeಮುಖಪುಟಪಾಂಗೋಂಗ್ ತ್ಸೋ ಎಲ್‌ಎಸಿ ಬಳಿ ಭಾರತದ ಪಡೆಗಳಿಂದ ಫೈರಿಂಗ್: ಚೀನಾ ಆರೋಪ

ಪಾಂಗೋಂಗ್ ತ್ಸೋ ಎಲ್‌ಎಸಿ ಬಳಿ ಭಾರತದ ಪಡೆಗಳಿಂದ ಫೈರಿಂಗ್: ಚೀನಾ ಆರೋಪ

ಇದೇ ಸ್ಥಳದಲ್ಲಿ ಆಗಸ್ಟ್ 29-31 ರ ರಾತ್ರಿ ಚೀನಾದ ಪಡೆಗಳು ಎರಡು ಬಾರಿ ಪ್ರಚೋದನಕಾರಿ ದಾಳಿ ನಡೆಸಲು ಮುಂದಾಗಿತ್ತು. ಆಗ ಭಾರತದ ಪಡೆಗಳು ಅದನ್ನು ಹಿಮ್ಮೆಟ್ಟಿಸಿದ್ದವು ಎಂದು ಭಾರತ ಸರ್ಕಾರ ಹೇಳಿತ್ತು.

- Advertisement -
- Advertisement -

ಭಾರತದ ರಕ್ಷಣಾ ಸಚಿವರಾದ ರಾಜನಾಥ್‌ಸಿಂಗ್‌ರವರು ಚೀನಾದ ವಿದೇಶಾಂಗ ಸಚಿವರೊಂದಿಗೆ ಮಾತುಕತೆ ನಡೆಸಿದ ಮೂರು ದಿನಗಳಲ್ಲಿಯೇ ಮತ್ತೆ ಗಡಿ ಬಿಕ್ಕಟ್ಟು ಉದ್ಭವಿಸಿದೆ. ಪೂರ್ವ ಲಡಾಖ್‌ನ ಪಾಂಗೋಂಗ್ ಸರೋವರದ ದಕ್ಷಿಣ ದಂಡೆಯ ನೈಜ ನಿಯಂತ್ರಣ ರೇಖೆ ದಾಟಿರುವ ಭಾರತೀಯ ಸೇನೆಯು ಸೋಮವಾರ ರಾತ್ರಿ ಎಚ್ಚರಿಕೆಯ ಫೈರಿಂಗ್ ನಡೆಸಿದೆ ಎಂದು ಚೀನಾ ಆರೋಪಿಸಿದೆ.

ಇದಕ್ಕೆ ಪ್ರತಿಯಾಗಿ ಚೀನಾವು ಪ್ರತಿ ಎಚ್ಚರಿಕೆ ನೀಡಿದ್ದು, ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಹೇಳಿದೆ. ಈ ಕುರಿತು ಚೀನಾ ಲಿಬರೇಷನ್ ಆರ್ಮಿಯ ಪಶ್ಚಿಮ ಕಮಾಂಡರ್ ಕರ್ನಲ್ ಝಾಂಗ್ ಸುಯಿಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಭಾರತವು ಇನ್ನು ತನ್ನ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.

ಮೇ ತಿಂಗಳಿನಲ್ಲಿ ಗಡಿ ಸಮಸ್ಯೆ ಉದ್ಬವವಾದಾಗಿನಿಂದ ಹಲವು ಮಾತುಕತೆಗಳು ನಡೆದರೂ ದೊಡ್ಡ ಮಟ್ಟದಲ್ಲಿ ಸೆಪ್ಟಂಬರ್ 5 ರಂದು ಮಾಸ್ಕೋದಲ್ಲಿ ನಡೆಸ ಶಾಂಘೈ ಸಹಕಾರ ಸಭೆಯಲ್ಲಿ ಭಾರತ ಚೀನಾ ಈ ಕುರಿತು ಮಾತುಕತೆ ನಡೆಸಿದ್ದವು. ಆದರೆ ಮೂರೇ ದಿನದಲ್ಲಿ ಮತ್ತೆ ಗಡಿ ಉದ್ವಿಗ್ನತೆ ಆರಂಭವಾಗಿದ್ದು ಆತಂಕ ಮೂಡಿಸಿದೆ.

ನೈಜ ನಿಯಂತ್ರಣ ರೇಖೆ ದಾಟಿ ಭಾರತದ ಪಡೆಗಳಿಂದ ಏಕಾಏಕಿ ದಾಳಿ ನಡೆಸಲಾಯಿತು. ಇದನ್ನು ತಡೆಯಲು ಚೀನಾ ಸಹ ಪ್ರತಿ ದಾಳಿ ನಡೆಸಿದೆ. ಭಾರತದ ನಡೆಯು ಗಡಿ ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳುವ ಪರಸ್ಪರ ಒಪ್ಪಂದದ ಗಂಭೀರ ಉಲ್ಲಂಘನೆಯಾಗಿದೆ ಎಂದು ಚೀನಾ ಆರೋಪಿಸಿದೆ.

ಇದು ತೀವ್ರ ಗಂಭೀರ ನಡೆಯಾಗಿದೆ. ಈ ಕೂಡಲೇ ಭಾರತದ ಮುಂಚೂಣಿ ಪಡೆಗಳು ಹಿಂದೆ ಸರಿಯುವಂತೆ ನಿರ್ದೇಶನ ನೀಡಬೇಕೆಂದು ಭಾರತದ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಫೈರಿಂಗ್‌ಗೆ ಕಾರಣರಾದವರ ಮೇಲೆ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು. ಇದು ಮತ್ತೆ ಪುನಾರಾವರ್ತನೆ ಆಗದಂತೆ ತಡೆಯಬೇಕು ಎಂದು ಚೀನಾದ ಹೇಳಿಕೆಯಲ್ಲಿ ಉಲ್ಲೇಖಿಸಲಾಗದೆ.

ಇದೇ ಸ್ಥಳದಲ್ಲಿ ಆಗಸ್ಟ್ 29-31 ರ ರಾತ್ರಿ ಚೀನಾದ ಪಡೆಗಳು ಎರಡು ಬಾರಿ ಪ್ರಚೋದನಕಾರಿ ದಾಳಿ ನಡೆಸಲು ಮುಂದಾಗಿತ್ತು. ಆಗ ಭಾರತದ ಪಡೆಗಳು ಅದನ್ನು ಹಿಮ್ಮೆಟ್ಟಿಸಿದ್ದವು ಎಂದು ಭಾರತ ಸರ್ಕಾರ ಹೇಳಿತ್ತು.


ಇದನ್ನೂ ಓದಿ: ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...