Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...