Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...