Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...