Homeಅಂತರಾಷ್ಟ್ರೀಯಪಾಸ್‌ಪೋರ್ಟ್‌ನಲ್ಲಿ 'ಅರುಣಾಚಲ ಪ್ರದೇಶ' ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಪಾಸ್‌ಪೋರ್ಟ್‌ನಲ್ಲಿ ‘ಅರುಣಾಚಲ ಪ್ರದೇಶ’ ಉಲ್ಲೇಖ : ಚೀನಾ ಏರ್ಪೋರ್ಟ್‌ನಲ್ಲಿ ಭಾರತೀಯ ಮಹಿಳೆಗೆ ಕಿರುಕುಳ

ಆರೋಪ ಅಲ್ಲಗಳೆದ ಚೀನಾ, ಅರುಣಾಚಲ ಪ್ರದೇಶ ನಮ್ಮ ಅವಿಭಾಜ್ಯ ಅಂಗ ಎಂದ ಭಾರತ

- Advertisement -
- Advertisement -

ಪಾಸ್‌ಪೋರ್ಟ್‌ನಲ್ಲಿ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಉಲ್ಲೇಖಿಸಿದ್ದಕ್ಕೆ ಭಾರತೀಯ ಮೂಲದ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ನವೆಂಬರ್ 21ರಂದು ಅರುಣಾಚಲ ಪ್ರದೇಶ ಮೂಲದ, ಪ್ರಸ್ತುತ ಲಂಡನ್‌ನಲ್ಲಿ ವಾಸವಿರುವ ಪೇಮಾ ವಾಂಗ್ ಥೋಂಗ್‌ಡಾಕ್ ಎಂಬ ಮಹಿಳೆ ಲಂಡನ್‌ನಿಂದ ಜಪಾನ್‌ಗೆ ಚೀನಾ ಮೂಲಕ ಪ್ರಯಾಣಿಸುತ್ತಿದ್ದರು. ಅವರು ಶಾಂಘೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ, ಇಮಿಗ್ರೇಷನ್ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದು ಸುಮಾರು 18 ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆಯ ಪಾಸ್‌ಪೋರ್ಟ್‌ನಲ್ಲಿ ಆಕೆಯ ಜನ್ಮಸ್ಥಳ ಅರುಣಾಚಲ ಪ್ರದೇಶ ಎಂದು ಬರೆಯಲಾಗಿತ್ತು. ಚೀನಾ ಅರುಣಾಚಲ ಪ್ರದೇಶವನ್ನು ತನ್ನ ಭೂಭಾಗ (ಝಾಂಗ್ನಾನ್ ಅಥವಾ ದಕ್ಷಿಣ ಟಿಬೆಟ್) ಎಂದು ವಾದಿಸುತ್ತಿದೆ. ಆದ್ದರಿಂದ ಮಹಿಳೆಯ ಪಾಸ್‌ಪೋರ್ಟ್ ‘ಅಮಾನ್ಯ’ ಎಂದ ಅಧಿಕಾರಿಗಳು, “ನೀನು ಚೀನಾದವಳು, ಭಾರತೀಯಳಲ್ಲ” ಎಂದು ಅಪಮಾನಿಸಿದ್ದಾರೆ ಎಂಬುವುದಾಗಿ ವರದಿಯಾಗಿದೆ.

ಮಹಿಳೆಗೆ 18 ಗಂಟೆಗಳ ಕಾಲ ಆಹಾರ ಕೊಟ್ಟಿಲ್ಲ. ಶೌಚಾಲಯಕ್ಕೆ ತೆರಳಲು ಮಾತ್ರ ಅನುಮತಿಸಿದ್ದರು. ಜಪಾನ್‌ಗೆ ಹೋಗುವ ವಿಮಾನ ಹತ್ತಲು ಬಿಟ್ಟಿಲ್ಲ. ಹೊಸ ಟಿಕೆಟ್ ಖರೀದಿಸಲು ಹೆಚ್ಚುವರಿ ಹಣ ಖರ್ಚು ಮಾಡಿಸಿದರು ಎಂದು ಆರೋಪಿಸಲಾಗಿದೆ.

ಕೊನೆಗೆ, ಶಾಂಘೈಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಧ್ಯಪ್ರವೇಶಿಸಿ ಮಹಿಳೆಯನ್ನು ಬಿಡುಗಡೆಗೊಳಿಸಿದೆ. ಭಾರತ ಸರ್ಕಾರ ಅರುಣಾಚಲ ಪ್ರದೇಶ ತನ್ನ ಭೂಭಾಗ ಎಂಬ ಚೀನಾದ ವಾದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ‘ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ’ ಎಂದು ಪುನರುಚ್ಚರಿಸಿದೆ. ಪ್ರಸ್ತುತ ಮಹಿಳೆ ಸುರಕ್ಷಿತವಾಗಿದ್ದಾರೆ. ತಲುಪುವಲ್ಲಿಗೆ ತಲುಪಿದ್ದಾರೆ ಎಂದು ವರದಿಗಳು ಹೇಳಿವೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ-ಭಾರತ

“ಮಾನ್ಯ ಪಾಸ್‌ಪೋರ್ಟ್ ಹೊಂದಿದ್ದ ಮತ್ತು ಶಾಂಘೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಜಪಾನ್‌ಗೆ ತೆರಳುತ್ತಿದ್ದ ಅರುಣಾಚಲ ಪ್ರದೇಶದ ಭಾರತೀಯ ಪ್ರಜೆಯನ್ನು ಅನಿಯಂತ್ರಿತವಾಗಿ ಬಂಧಿಸಿದ ಬಗ್ಗೆ ಚೀನಾದ ವಿದೇಶಾಂಗ ಸಚಿವಾಲಯದ ಹೇಳಿಕೆಗಳನ್ನು ನಾವು ನೋಡಿದ್ದೇವೆ. ಅರುಣಾಚಲ ಪ್ರದೇಶವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಇದು ಸ್ವಯಂ-ಸ್ಪಷ್ಟ ಸತ್ಯ. ಚೀನಾದ ಕಡೆಯಿಂದ ಬರುವ ಯಾವುದೇ ನಿರಾಕರಣೆ ಈ ನಿರ್ವಿವಾದ ವಾಸ್ತವವನ್ನು ಬದಲಾಯಿಸುವುದಿಲ್ಲ” ಎಂದು ಭಾರತೀಯ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಮುಂದುವರಿದು, “ಈ ವಿಷಯವನ್ನು ಭಾರತ ಸರ್ಕಾರ ಚೀನಾದೊಂದಿಗೆ ಅತ್ಯಂತ ಕಟುವಾಗಿ ಪ್ರಸ್ತಾಪಿಸಿದೆ. ಚೀನಾದ ಅಧಿಕಾರಿಗಳು ಇನ್ನೂ ತಮ್ಮ ಕೃತ್ಯಕ್ಕೆ ಸರಿಯಾದ ವಿವರಣೆ ನೀಡಲು ಸಾಧ್ಯವಾಗಿಲ್ಲ. ಅವರ ಈ ಕ್ರಮವು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ನಿಯಂತ್ರಿಸುವ ಹಲವು ಒಡಂಬಡಿಕೆಗಳನ್ನು (ಕನ್ವೆನ್ಷನ್‌ಗಳನ್ನು) ಉಲ್ಲಂಘಿಸಿದೆ. ಅಷ್ಟೇ ಅಲ್ಲ, ಚೀನಾ ತಾನೇ ಜಾರಿಗೊಳಿಸಿರುವ ನಿಯಮವನ್ನೂ ಮೀರಿದೆ. ಆ ನಿಯಮದ ಪ್ರಕಾರ ಎಲ್ಲ ದೇಶಗಳ ಪ್ರಜೆಗಳಿಗೂ 24 ಗಂಟೆಗಳವರೆಗೆ ವೀಸಾ ಇಲ್ಲದೆ ಟ್ರಾನ್ಸಿಟ್ (ಮಧ್ಯದಲ್ಲಿ ನಿಲುಗಡೆ) ಅನುಮತಿ ಇದೆ. ಆದರೂ ಚೀನಾದ ಅಧಿಕಾರಿಗಳು ಭಾರತೀಯ ಮಹಿಳೆಯನ್ನು 18 ಗಂಟೆಗಳ ಕಾಲ ತಡೆಹಿಡಿದು ತಮ್ಮ ಸ್ವಂತ ನಿಯಮವನ್ನೂ ಉಲ್ಲಂಘಿಸಿದ್ದಾರೆ” ಎಂದು ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...