Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

- Advertisement -
- Advertisement -

ಟೊಕಿಯೊ ಒಲಿಂಪಿಕ್ಸ್‌‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ವಿಶ್ವದ ಎರಡನೆ ಶೇಯಾಂಕದಲ್ಲಿರುವ ಆಸ್ಟ್ರೇಲಿಯಾವನ್ನು 1-0 ಅಂತರದಲ್ಲಿ ಸೋಲಿಸಿ ಸೆಮಿಫೈನಲ್‌ ತಲುಪಿದೆ. ಈ ಮೂಲಕ ಒಲಿಂಪಿಕ್‌ ಇತಿಹಾಸದಲ್ಲೇ ಭಾರತೀಯ ಮಹಿಳಾ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದೆ. ಸೆಮಿಫೈನಲ್‌ ಆಗಸ್ಟ್‌ 4 ರ ಬುಧವಾರ ನಡೆಲಿದೆ.

ಭಾರತೀಯ ಮಹಿಳಾ ಹಾಕಿ ತಂಡ ಪದಕ್ಕೆ ಮುತ್ತಿಡಲು ಇನ್ನು ಒಂದು ಪಂದ್ಯಗಳು ಬಾಕಿಯಿದ್ದು, ಒಂದು ಪಂದ್ಯ ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದೆ.

ಭಾನುವಾರ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತ ಪುರುಷರ ತಂಡ ಗ್ರೇಟ್‌ ಬ್ರಿಟನ್‌ ತಂಡವನ್ನು 3-1 ಅಂತರದಲ್ಲಿ ಸೋಲಿಸಿ ಸೆಮಿಫೈನಲ್‌ ತಲುಪಿದೆ. ಸೆಮಿಫೈನಲ್‌ ನಾಳೆ ಬೆಳಿಗ್ಗೆ 7 ಗಂಟೆಗೆ ನಡೆಯಲಿದ್ದು, ಭಾರತವು ಬೆಲ್ಜಿಯಂ ವಿರುದ್ದ ಹೋರಾಡಲಿದೆ.

ಇದನ್ನೂ ಓದಿ: ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಸಮಿಫೈನಲ್ ತಲುಪಿದ್ದ ದೇಶದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಚೈನೀಸ್ ತೈಪೈನ ಥಾಯಿ ತ್ಸು ಯಿಂಗ್‌‌ ವಿರುದ್ದ ಶನಿವಾರ ಸೋತಿದ್ದರು. ನಂತರ ಭಾನುವಾರ ಕಂಚಿನ ಪದಕಕ್ಕಾಗಿ ಸೆಣಸಿದ್ದ ಸಿಂಧು ಚೀನಾದ ಹಿ ಬಿಂಗ್‌ಜಾವ್‌‌ ಅವರ ವಿರುದ್ದ 21-13, 21-15 ಅಂತರದಲ್ಲಿ ನೇರ ಸುತ್ತಿನಲ್ಲಿ ಜಯಭೇರಿ ಬಾರಿಸಿದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೆ ಪದಕವನ್ನು ತಂದುಕೊಟ್ಟಿದ್ದಾರೆ.

ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸಿಂಧು, ಒಲಿಂಪಿಕ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

ಶನಿವಾರ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಸೋಮವಾರ(ಇಂದು) ಸಂಜೆ 4:30 ಕ್ಕೆ ನಡೆಯಲಿದೆ. ಫೈನಲ್‌ನಲ್ಲಿ ಒಟ್ಟು 12 ಮಂದಿ ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಸತೀಶ್ ಕುಮಾರ್ ಅವರು ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರ ವಿರುದ್ದ 5-0 ಅಂಕದಲ್ಲಿ ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಪಿವಿ ಸಿಂಧು ಎರಡನೆ ಪದಕ ಗೆದ್ದುಕೊಂಡಿದ್ದಾರೆ. ಭಾರತಕ್ಕೆ ಮತ್ತೊಂದು ಪದಕ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...