Homeಮುಖಪುಟವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ವಿಶ್ವ ಕುಸ್ತಿ ಸಂಸ್ಥೆ (ಯುಡಬ್ಲ್ಯುಡಬ್ಲ್ಯು)]ಯು ಗುರುವಾರ (ಆಗಸ್ಟ್ 24) ಯು ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

”ಕೇಂದ್ರ ಸರ್ಕಾರವು ರಾಷ್ಟ್ರೀಯ ಕುಸ್ತಿಪಟುಗಳನ್ನು ಕಡೆಗಣಿಸಿದೆ. ರಾಷ್ಟ್ರೀಯ ಹಿತಾಸಕ್ತಿಗಿಂತ ರಾಜಕೀಯವನ್ನು ಇರಿಸುತ್ತಿದೆಯೇ ”ಎಂಬ ಅನುಮಾನವನ್ನು ಹುಟ್ಟುಹಾಕಿದೆ ” ಎಂದು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಸಂಸ್ಥೆಯಲ್ಲಿ ಚುನಾವಣೆ ಸರಿಯಾದ ಸಮಯಕ್ಕೆ ನಡೆಯದ ಕಾರಣ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿದೆ. ಜೂನ್ 2023 ರಲ್ಲಿ ಚುನಾವಣೆಗಳು ನಡೆಯಬೇಕಿತ್ತು, ಆದರೆ ಅವುಗಳನ್ನು ಮುಂದೂಡಲಾಯಿತು ಹಾಗಾಗಿ ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.

ಈ ಬೆಳವಣಿಗೆಯು, ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಧ್ವಜದ ಅಡಿಯಲ್ಲಿ ಭಾರತೀಯ ಕುಸ್ತಿಪಟುಗಳು ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಮತ್ತು ಬದಲಿಗೆ ‘ತಟಸ್ಥ ಕ್ರೀಡಾಪಟುಗಳು’ ಎಂದು ಭಾಗವಹಿಸಬೇಕಾಗುತ್ತದೆ. ಅಲ್ಲದೆ, ಭಾರತೀಯ ಅಥ್ಲೀಟ್ ವಿಜೇತರ ವೇದಿಕೆಗೆ ಬಂದರೆ, ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ಹೇಳಿಕೆ

ಈ ಬಗ್ಗೆ ಎಕ್ಸಾನಲ್ಲಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ”ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.ಎಂದು ತಿಳಿದು ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದು ಇಡೀ ರಾಷ್ಟ್ರಕ್ಕೆ ತೀವ್ರ ಮುಜುಗರ ತಂದಿದೆ ಎಂದು ಹೇಳಿರುವ ಅವರು, ”ಕೇಂದ್ರ ಸರಕಾರವು ನಮ್ಮ ಕುಸ್ತಿಪಟುಗಳನ್ನು ನಾಚಿಕೆಗೇಡಿನ ದುರಹಂಕಾರದಿಂದ ನಡೆಸಿಕೊಳ್ಳುತ್ತಿದೆ. ನಮ್ಮ ಕುಸ್ತಿಪಟು ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಅದನ್ನು ಧಿಕ್ಕರಿಸುವ ಮೂಲಕ ನಮ್ಮ ಕುಸ್ತಿಪಟುಗಳನ್ನು ನಿರಾಸೆಗೊಳಿಸಿದೆ” ಎಂದು ಬರೆದಿದ್ದಾರೆ.

”ಕೇಂದ್ರ ಮತ್ತು ಬಿಜೆಪಿ ನಮ್ಮ ಅದಮ್ಯ ಸಹೋದರಿಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ಕೋಮುವಾದದಿಂದ ಕಿರುಕುಳ ನೀಡುತ್ತಲೇ ಇವೆ” ಎಂದು ಅವರು ಹೇಳಿದ್ದಾರೆ.

”ಭಾರತದ ಹೆಣ್ಣುಮಕ್ಕಳ ಘನತೆಗಾಗಿ ನಿಲ್ಲಲು ಸಾಧ್ಯವಾಗದವರ ವಿರುದ್ಧ ನಿಲ್ಲಬೇಕು ಮತ್ತು ಅವರನ್ನು ಶಿಕ್ಷಿಸಬೇಕು. ಲೆಕ್ಕಚುಕ್ತಾ ಮಾಡುವ ದಿನವು ತುಂಬಾ ದೂರವಿಲ್ಲ” ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.

ಈ ಅಮಾನತ್ತಿಗೆ ಕಾರಣ ಬಿಜೆಪಿ ಒಬ್ಬ ಸಂಸದ ಮತ್ತು ಅವರನ್ನು ಕೇಸರಿ ಪಕ್ಷದ ವರಿಷ್ಠರು ಬೆಂಬಲಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

”ಒಂದೆಡೆ, ತುಂಬಾ ಸಂತೋಷವಿದೆ; ನಮ್ಮ ಹೃದಯವು ಸಂತೋಷದಿಂದ ತುಂಬಿದೆ. ನಮ್ಮ ಚಾಂಪಿಯನ್‌ಗಳಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು. ಮತ್ತೊಂದೆಡೆ, ಬಿಜೆಪಿಯ ಸಂಸದರಿಂದ ನಮಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಮಾನವಾಗಿದೆ. ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಒಕ್ಕೂಟವನ್ನು ಹೊರಹಾಕಿದೆ. ಇದು ಎಂತಹ ನಾಚಿಕೆಗೇಡಿನ ಸಂಗತಿ! ನಮಗೆ ಅಸಹ್ಯವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...