Homeಮುಖಪುಟವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ವಿಶ್ವ ಕುಸ್ತಿ ಸಂಸ್ಥೆ (ಯುಡಬ್ಲ್ಯುಡಬ್ಲ್ಯು)]ಯು ಗುರುವಾರ (ಆಗಸ್ಟ್ 24) ಯು ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

”ಕೇಂದ್ರ ಸರ್ಕಾರವು ರಾಷ್ಟ್ರೀಯ ಕುಸ್ತಿಪಟುಗಳನ್ನು ಕಡೆಗಣಿಸಿದೆ. ರಾಷ್ಟ್ರೀಯ ಹಿತಾಸಕ್ತಿಗಿಂತ ರಾಜಕೀಯವನ್ನು ಇರಿಸುತ್ತಿದೆಯೇ ”ಎಂಬ ಅನುಮಾನವನ್ನು ಹುಟ್ಟುಹಾಕಿದೆ ” ಎಂದು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಸಂಸ್ಥೆಯಲ್ಲಿ ಚುನಾವಣೆ ಸರಿಯಾದ ಸಮಯಕ್ಕೆ ನಡೆಯದ ಕಾರಣ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿದೆ. ಜೂನ್ 2023 ರಲ್ಲಿ ಚುನಾವಣೆಗಳು ನಡೆಯಬೇಕಿತ್ತು, ಆದರೆ ಅವುಗಳನ್ನು ಮುಂದೂಡಲಾಯಿತು ಹಾಗಾಗಿ ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.

ಈ ಬೆಳವಣಿಗೆಯು, ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಧ್ವಜದ ಅಡಿಯಲ್ಲಿ ಭಾರತೀಯ ಕುಸ್ತಿಪಟುಗಳು ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಮತ್ತು ಬದಲಿಗೆ ‘ತಟಸ್ಥ ಕ್ರೀಡಾಪಟುಗಳು’ ಎಂದು ಭಾಗವಹಿಸಬೇಕಾಗುತ್ತದೆ. ಅಲ್ಲದೆ, ಭಾರತೀಯ ಅಥ್ಲೀಟ್ ವಿಜೇತರ ವೇದಿಕೆಗೆ ಬಂದರೆ, ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ಹೇಳಿಕೆ

ಈ ಬಗ್ಗೆ ಎಕ್ಸಾನಲ್ಲಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ”ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.ಎಂದು ತಿಳಿದು ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದು ಇಡೀ ರಾಷ್ಟ್ರಕ್ಕೆ ತೀವ್ರ ಮುಜುಗರ ತಂದಿದೆ ಎಂದು ಹೇಳಿರುವ ಅವರು, ”ಕೇಂದ್ರ ಸರಕಾರವು ನಮ್ಮ ಕುಸ್ತಿಪಟುಗಳನ್ನು ನಾಚಿಕೆಗೇಡಿನ ದುರಹಂಕಾರದಿಂದ ನಡೆಸಿಕೊಳ್ಳುತ್ತಿದೆ. ನಮ್ಮ ಕುಸ್ತಿಪಟು ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಅದನ್ನು ಧಿಕ್ಕರಿಸುವ ಮೂಲಕ ನಮ್ಮ ಕುಸ್ತಿಪಟುಗಳನ್ನು ನಿರಾಸೆಗೊಳಿಸಿದೆ” ಎಂದು ಬರೆದಿದ್ದಾರೆ.

”ಕೇಂದ್ರ ಮತ್ತು ಬಿಜೆಪಿ ನಮ್ಮ ಅದಮ್ಯ ಸಹೋದರಿಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ಕೋಮುವಾದದಿಂದ ಕಿರುಕುಳ ನೀಡುತ್ತಲೇ ಇವೆ” ಎಂದು ಅವರು ಹೇಳಿದ್ದಾರೆ.

”ಭಾರತದ ಹೆಣ್ಣುಮಕ್ಕಳ ಘನತೆಗಾಗಿ ನಿಲ್ಲಲು ಸಾಧ್ಯವಾಗದವರ ವಿರುದ್ಧ ನಿಲ್ಲಬೇಕು ಮತ್ತು ಅವರನ್ನು ಶಿಕ್ಷಿಸಬೇಕು. ಲೆಕ್ಕಚುಕ್ತಾ ಮಾಡುವ ದಿನವು ತುಂಬಾ ದೂರವಿಲ್ಲ” ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.

ಈ ಅಮಾನತ್ತಿಗೆ ಕಾರಣ ಬಿಜೆಪಿ ಒಬ್ಬ ಸಂಸದ ಮತ್ತು ಅವರನ್ನು ಕೇಸರಿ ಪಕ್ಷದ ವರಿಷ್ಠರು ಬೆಂಬಲಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

”ಒಂದೆಡೆ, ತುಂಬಾ ಸಂತೋಷವಿದೆ; ನಮ್ಮ ಹೃದಯವು ಸಂತೋಷದಿಂದ ತುಂಬಿದೆ. ನಮ್ಮ ಚಾಂಪಿಯನ್‌ಗಳಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು. ಮತ್ತೊಂದೆಡೆ, ಬಿಜೆಪಿಯ ಸಂಸದರಿಂದ ನಮಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಮಾನವಾಗಿದೆ. ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಒಕ್ಕೂಟವನ್ನು ಹೊರಹಾಕಿದೆ. ಇದು ಎಂತಹ ನಾಚಿಕೆಗೇಡಿನ ಸಂಗತಿ! ನಮಗೆ ಅಸಹ್ಯವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...