Homeಮುಖಪುಟವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ವಿಶ್ವ ಕುಸ್ತಿ ಸಂಸ್ಥೆ (ಯುಡಬ್ಲ್ಯುಡಬ್ಲ್ಯು)]ಯು ಗುರುವಾರ (ಆಗಸ್ಟ್ 24) ಯು ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

”ಕೇಂದ್ರ ಸರ್ಕಾರವು ರಾಷ್ಟ್ರೀಯ ಕುಸ್ತಿಪಟುಗಳನ್ನು ಕಡೆಗಣಿಸಿದೆ. ರಾಷ್ಟ್ರೀಯ ಹಿತಾಸಕ್ತಿಗಿಂತ ರಾಜಕೀಯವನ್ನು ಇರಿಸುತ್ತಿದೆಯೇ ”ಎಂಬ ಅನುಮಾನವನ್ನು ಹುಟ್ಟುಹಾಕಿದೆ ” ಎಂದು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಸಂಸ್ಥೆಯಲ್ಲಿ ಚುನಾವಣೆ ಸರಿಯಾದ ಸಮಯಕ್ಕೆ ನಡೆಯದ ಕಾರಣ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿದೆ. ಜೂನ್ 2023 ರಲ್ಲಿ ಚುನಾವಣೆಗಳು ನಡೆಯಬೇಕಿತ್ತು, ಆದರೆ ಅವುಗಳನ್ನು ಮುಂದೂಡಲಾಯಿತು ಹಾಗಾಗಿ ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.

ಈ ಬೆಳವಣಿಗೆಯು, ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಧ್ವಜದ ಅಡಿಯಲ್ಲಿ ಭಾರತೀಯ ಕುಸ್ತಿಪಟುಗಳು ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಮತ್ತು ಬದಲಿಗೆ ‘ತಟಸ್ಥ ಕ್ರೀಡಾಪಟುಗಳು’ ಎಂದು ಭಾಗವಹಿಸಬೇಕಾಗುತ್ತದೆ. ಅಲ್ಲದೆ, ಭಾರತೀಯ ಅಥ್ಲೀಟ್ ವಿಜೇತರ ವೇದಿಕೆಗೆ ಬಂದರೆ, ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ಹೇಳಿಕೆ

ಈ ಬಗ್ಗೆ ಎಕ್ಸಾನಲ್ಲಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ”ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.ಎಂದು ತಿಳಿದು ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದು ಇಡೀ ರಾಷ್ಟ್ರಕ್ಕೆ ತೀವ್ರ ಮುಜುಗರ ತಂದಿದೆ ಎಂದು ಹೇಳಿರುವ ಅವರು, ”ಕೇಂದ್ರ ಸರಕಾರವು ನಮ್ಮ ಕುಸ್ತಿಪಟುಗಳನ್ನು ನಾಚಿಕೆಗೇಡಿನ ದುರಹಂಕಾರದಿಂದ ನಡೆಸಿಕೊಳ್ಳುತ್ತಿದೆ. ನಮ್ಮ ಕುಸ್ತಿಪಟು ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಅದನ್ನು ಧಿಕ್ಕರಿಸುವ ಮೂಲಕ ನಮ್ಮ ಕುಸ್ತಿಪಟುಗಳನ್ನು ನಿರಾಸೆಗೊಳಿಸಿದೆ” ಎಂದು ಬರೆದಿದ್ದಾರೆ.

”ಕೇಂದ್ರ ಮತ್ತು ಬಿಜೆಪಿ ನಮ್ಮ ಅದಮ್ಯ ಸಹೋದರಿಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ಕೋಮುವಾದದಿಂದ ಕಿರುಕುಳ ನೀಡುತ್ತಲೇ ಇವೆ” ಎಂದು ಅವರು ಹೇಳಿದ್ದಾರೆ.

”ಭಾರತದ ಹೆಣ್ಣುಮಕ್ಕಳ ಘನತೆಗಾಗಿ ನಿಲ್ಲಲು ಸಾಧ್ಯವಾಗದವರ ವಿರುದ್ಧ ನಿಲ್ಲಬೇಕು ಮತ್ತು ಅವರನ್ನು ಶಿಕ್ಷಿಸಬೇಕು. ಲೆಕ್ಕಚುಕ್ತಾ ಮಾಡುವ ದಿನವು ತುಂಬಾ ದೂರವಿಲ್ಲ” ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.

ಈ ಅಮಾನತ್ತಿಗೆ ಕಾರಣ ಬಿಜೆಪಿ ಒಬ್ಬ ಸಂಸದ ಮತ್ತು ಅವರನ್ನು ಕೇಸರಿ ಪಕ್ಷದ ವರಿಷ್ಠರು ಬೆಂಬಲಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

”ಒಂದೆಡೆ, ತುಂಬಾ ಸಂತೋಷವಿದೆ; ನಮ್ಮ ಹೃದಯವು ಸಂತೋಷದಿಂದ ತುಂಬಿದೆ. ನಮ್ಮ ಚಾಂಪಿಯನ್‌ಗಳಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು. ಮತ್ತೊಂದೆಡೆ, ಬಿಜೆಪಿಯ ಸಂಸದರಿಂದ ನಮಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಮಾನವಾಗಿದೆ. ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಒಕ್ಕೂಟವನ್ನು ಹೊರಹಾಕಿದೆ. ಇದು ಎಂತಹ ನಾಚಿಕೆಗೇಡಿನ ಸಂಗತಿ! ನಮಗೆ ಅಸಹ್ಯವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...