Homeಮುಖಪುಟರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

- Advertisement -
- Advertisement -

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದದಲ್ಲಿ ರಷ್ಯಾ ಸೇನೆಗೆ ನೆರವು ಸಿಬ್ಬಂದಿಯಾಗಿ ತೆರಳಿರುವ ಹಲವಾರು ಕೇರಳಿಗರು, ಭಾರೀ ಮೊತ್ತದ ವೇತನದ ಆಮಿಷಕ್ಕೆ ಒಳಗಾಗಿ ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿ, ರಷ್ಯಾದ ಖಾಯಂ ನಿವಾಸಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಕೇರಳಿಗರ ವ್ಯವಹಾರಗಳ ಇಲಾಖೆ (NORKA) ತಿಳಿಸಿದೆ.

ತವರಿನಲ್ಲಿ ಗಳಿಸುತ್ತಿದ್ದಕ್ಕಿಂತ ಹೆಚ್ಚಿನ ಮೊತ್ತವಾದ ಸುಮಾರು 2.5 ಲಕ್ಷ ರೂಪಾಯಿ ಮಾಸಿಕ ವೇತನದ ಆಹ್ವಾನ ದೊರೆತಿದ್ದರಿಂದ ರಷ್ಯಾ ಸೇನೆಯ ನೆರವು ಸಿಬ್ಬಂದಿಯಾಗಿ ತೆರಳಿರುವ ಈ ಕೇರಳಿಗರು, ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿದ್ದಾರೆ ಎಂದು NORKAದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್ ಕೊಲಸ್ಸೆರಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ರಷ್ಯಾದ ಖಾಯಂ ನಿವಾಸತ್ವ ಪಡೆದುಕೊಂಡ ಬಳಿಕ, ಸೇನೆಗೆ ಸೇರ್ಪಡೆಯಾಗಲು ಇವರೆಲ್ಲ (ಕೇರಳಿಗರು) ಲಿಖಿತ ಸಮ್ಮತಿ ನೀಡಿದ್ದಾರೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿದು ಬಂದಿದೆ ಎಂದು ಅಜಿತ್ ಕೊಲಶ್ಶೇರಿ ಮಾಹಿತಿ ನೀಡಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತ್ರಿಶೂರ್ ಜಿಲ್ಲೆಯ 36 ವರ್ಷದ ಸಂದೀಪ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಅವರಲ್ಲಿ (ಕೇರಳಿಗರು) ಕೆಲವರು ಭಾರತಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಲವರ ಮನೆಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕಳೆದ ವಾರ ಪಿಣರಾಯಿ ವಿಜಯನ್ ಅವರು ರಷ್ಯಾದ ಸೇನಾ ಶಿಬಿರಗಳಿಂದ ಕೇರಳಿಗರನ್ನು ಮರಳಿ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಕೇರಳದಿಂದ ಇನ್ನೂ ಎಷ್ಟು ಮಂದಿ ಇದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ನಾಲ್ವರು ಹಿಂತಿರುಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಕೇರಳಕ್ಕೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಏಕೆಂದರೆ ಅಲ್ಲಿ ತಿಂಗಳಿಗೆ 2.5 ಲಕ್ಷ ರೂ. ವೇತನ ಸಿಗುತ್ತಿದ್ದೆ. ಊರಿನಲ್ಲಿ ಅವರೆಲ್ಲ ಎಲೆಕ್ಟ್ರಿಷಿಯನ್, ಪ್ಲಂಬಿಂಗ್, ಅಡುಗೆ ಕೆಲಸದಂತಹ ಉದ್ಯೋಗ ಮಾಡುತಿದ್ದರು. ಇದು ಕೇರಳ ಮಟ್ಟಿಗೆ ತುಂಬಾ ಅಸಹಜ ವಲಸೆಯಾಗಿದೆ” ಎಂದು ಕೊಲಸ್ಸೆರಿ ಹೇಳಿದ್ದಾರೆ.

ಭಾರತೀಯರನ್ನು ಮಾನವ ಕಳ್ಳಸಾಗಾಣಿಕೆ ಮಾಡಿದ ಆರೋಪದ ಮೇಲೆ ಹಲವು ಪ್ರವಾಸಿ ಏಜೆಂಟ್‌ಗಳ ವಿರುದ್ದಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೇರಳದ ಕೆಲವರು ಸೇರಿದಂತೆ ಹಲವಾರು ಭಾರತೀಯರನ್ನುರಷ್ಯಾ ಸೇನೆಯೊಂದಿಗೆ ಕೆಲಸ ಮಾಡಲು, ಅಲ್ಲಿಗೆ ಕಳ್ಳಸಾಗಾಣಿಕೆ ಮಾಡಿದ ಆರೋಪ ಈ ಏಜೆಂಟ್‌ಗಳ ವಿರುದ್ದ ಇದೆ. ಉಕ್ರೇನ್ ವಿರುದ್ಧದ ರಷ್ಯಾದ ಯುದ್ಧದಲ್ಲಿ ಇಬ್ಬರು ಭಾರತೀಯ ಯುವಕರು ಸಾವನ್ನಪ್ಪಿದ ನಂತರ ಏಜೆಂಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಫಾತಕಾರಿ ವಿಷಯವೆಂದರೆ, ಮಾರ್ಚ್ ತಿಂಗಳಲ್ಲಿ ಉದ್ಯೋಗ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದರೂ, ಸೇನೆಯ ಕೆಲಸಕ್ಕೆ ಸೇರಲು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಂಡಿರುವ ಕೆಲವರು ಏಪ್ರಿಲ್‌ನಲ್ಲಿ ಅಲ್ಲಿಗೆ ಪ್ರಯಾಣಿಸಿದ್ದಾರೆ.

ಈ ಪೈಕಿ ಕೆಲವರು ನಮ್ಮ ಜೊತೆ ಮಾತನಾಡಿದ್ದು, “ನಮಗೆ ಸೇನಾ ಶಿಬಿರದಲ್ಲಿ ನಿಯೋಜಿಸುವ ಮಾಹಿತಿ ನೀಡಲಾಗಿತ್ತಾದರೂ, ಯುದ್ಧಭೂಮಿಯಲ್ಲಿ ಸೈನ್ಯದಲ್ಲಿ ಕೆಲಸ ಮಾಡುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ರಷ್ಯಾದಿಂದ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಕೇರಳಿಗರಲ್ಲಿ ಒಬ್ಬರಾದ ಸಂತೋಷ್, ತಾನು ಮತ್ತು ಇತರ ಇಬ್ಬರು ಮೂರು ತಿಂಗಳವರೆಗೆ ಮಾನ್ಯವಾಗಿರುವ ಖಾಸಗಿ ವೀಸಾದಲ್ಲಿ ರಷ್ಯಾಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

“ಶಿಬಿರಗಳಲ್ಲಿ ಸೇನೆಗೆ ನೆರವು ಸಿಬ್ಬಂದಿಯಾಗಿ ಸೇವೆಗೆ ಸೇರಲು, ನಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದ ನಂತರ ನಾವು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಳ್ಳಬೇಕಾಗಿತ್ತು. ಆದರೆ, ಸಂದೀಪ್ ಸಾವಿನ ನಂತರ ನಾವು ಭಾರತಕ್ಕೆ ಮರಳಲು ನಿರ್ಧರಿಸಿದ್ದೇವೆ. ಇದಕ್ಕಾಗಿ ನಾವು ಮೊದಲು ಸೇನೆಯೊಂದಿಗಿನ ನಮ್ಮ ಒಪ್ಪಂದವನ್ನು ರದ್ದುಗೊಳಿಸಬೇಕಿದೆ. ನಂತರ ಖಾಯಂ ನಿವಾಸತ್ವ ರದ್ದುಗೊಳಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಭಾರತೀಯ ರಾಯಭಾರ ಕಚೇರಿ ನಮಗೆ ಸಹಾಯ ಮಾಡುತ್ತಿದೆ” ಎಂದು ಸಂತೋಷ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಸಂದೀಪ್ ಅವರ ಕುಟುಂಬವು ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ಮಾಡಲು ಕಾಯುತ್ತಿದೆ. ಈ ಕುರಿತು ಮಾತನಾಡಿರುವ ಸಂದೀಪ್ ಸಂಬಂಧಿ ಸರನ್ “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂದೀಪ್ ಅವರ ದೇಹವನ್ನು ಇನ್ನಷ್ಟೇ ಪಡೆಯಬೇಕಿದೆ. ಯುದ್ಧಭೂಮಿಯಿಂದ ಸಂದೀಪ್ ದೇಹ ರಸ್ತೆ ಮಾರ್ಗದ ಮೂಲಕ ಮಾತ್ರ ರಾಜಧಾನಿ ಮಾಸ್ಕೋಗೆ ತರಲು ಸಾಧ್ಯವಿದೆ ಎಂದು ನಮಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

Courtesy : indianexpress.com

ಇದನ್ನೂ ಓದಿ : ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Is Russians are mad to offer 2.5 kakhs pm just to logistics work in their Army. Going for earning heptic money and something happens blaming Indian Government. Government has to make Law that no Indian should go to other country for Army related jobs.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...