Homeಮುಖಪುಟರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

- Advertisement -
- Advertisement -

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದದಲ್ಲಿ ರಷ್ಯಾ ಸೇನೆಗೆ ನೆರವು ಸಿಬ್ಬಂದಿಯಾಗಿ ತೆರಳಿರುವ ಹಲವಾರು ಕೇರಳಿಗರು, ಭಾರೀ ಮೊತ್ತದ ವೇತನದ ಆಮಿಷಕ್ಕೆ ಒಳಗಾಗಿ ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿ, ರಷ್ಯಾದ ಖಾಯಂ ನಿವಾಸಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಕೇರಳಿಗರ ವ್ಯವಹಾರಗಳ ಇಲಾಖೆ (NORKA) ತಿಳಿಸಿದೆ.

ತವರಿನಲ್ಲಿ ಗಳಿಸುತ್ತಿದ್ದಕ್ಕಿಂತ ಹೆಚ್ಚಿನ ಮೊತ್ತವಾದ ಸುಮಾರು 2.5 ಲಕ್ಷ ರೂಪಾಯಿ ಮಾಸಿಕ ವೇತನದ ಆಹ್ವಾನ ದೊರೆತಿದ್ದರಿಂದ ರಷ್ಯಾ ಸೇನೆಯ ನೆರವು ಸಿಬ್ಬಂದಿಯಾಗಿ ತೆರಳಿರುವ ಈ ಕೇರಳಿಗರು, ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿದ್ದಾರೆ ಎಂದು NORKAದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್ ಕೊಲಸ್ಸೆರಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ರಷ್ಯಾದ ಖಾಯಂ ನಿವಾಸತ್ವ ಪಡೆದುಕೊಂಡ ಬಳಿಕ, ಸೇನೆಗೆ ಸೇರ್ಪಡೆಯಾಗಲು ಇವರೆಲ್ಲ (ಕೇರಳಿಗರು) ಲಿಖಿತ ಸಮ್ಮತಿ ನೀಡಿದ್ದಾರೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿದು ಬಂದಿದೆ ಎಂದು ಅಜಿತ್ ಕೊಲಶ್ಶೇರಿ ಮಾಹಿತಿ ನೀಡಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತ್ರಿಶೂರ್ ಜಿಲ್ಲೆಯ 36 ವರ್ಷದ ಸಂದೀಪ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಅವರಲ್ಲಿ (ಕೇರಳಿಗರು) ಕೆಲವರು ಭಾರತಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಲವರ ಮನೆಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕಳೆದ ವಾರ ಪಿಣರಾಯಿ ವಿಜಯನ್ ಅವರು ರಷ್ಯಾದ ಸೇನಾ ಶಿಬಿರಗಳಿಂದ ಕೇರಳಿಗರನ್ನು ಮರಳಿ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಕೇರಳದಿಂದ ಇನ್ನೂ ಎಷ್ಟು ಮಂದಿ ಇದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ನಾಲ್ವರು ಹಿಂತಿರುಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಕೇರಳಕ್ಕೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಏಕೆಂದರೆ ಅಲ್ಲಿ ತಿಂಗಳಿಗೆ 2.5 ಲಕ್ಷ ರೂ. ವೇತನ ಸಿಗುತ್ತಿದ್ದೆ. ಊರಿನಲ್ಲಿ ಅವರೆಲ್ಲ ಎಲೆಕ್ಟ್ರಿಷಿಯನ್, ಪ್ಲಂಬಿಂಗ್, ಅಡುಗೆ ಕೆಲಸದಂತಹ ಉದ್ಯೋಗ ಮಾಡುತಿದ್ದರು. ಇದು ಕೇರಳ ಮಟ್ಟಿಗೆ ತುಂಬಾ ಅಸಹಜ ವಲಸೆಯಾಗಿದೆ” ಎಂದು ಕೊಲಸ್ಸೆರಿ ಹೇಳಿದ್ದಾರೆ.

ಭಾರತೀಯರನ್ನು ಮಾನವ ಕಳ್ಳಸಾಗಾಣಿಕೆ ಮಾಡಿದ ಆರೋಪದ ಮೇಲೆ ಹಲವು ಪ್ರವಾಸಿ ಏಜೆಂಟ್‌ಗಳ ವಿರುದ್ದಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೇರಳದ ಕೆಲವರು ಸೇರಿದಂತೆ ಹಲವಾರು ಭಾರತೀಯರನ್ನುರಷ್ಯಾ ಸೇನೆಯೊಂದಿಗೆ ಕೆಲಸ ಮಾಡಲು, ಅಲ್ಲಿಗೆ ಕಳ್ಳಸಾಗಾಣಿಕೆ ಮಾಡಿದ ಆರೋಪ ಈ ಏಜೆಂಟ್‌ಗಳ ವಿರುದ್ದ ಇದೆ. ಉಕ್ರೇನ್ ವಿರುದ್ಧದ ರಷ್ಯಾದ ಯುದ್ಧದಲ್ಲಿ ಇಬ್ಬರು ಭಾರತೀಯ ಯುವಕರು ಸಾವನ್ನಪ್ಪಿದ ನಂತರ ಏಜೆಂಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಫಾತಕಾರಿ ವಿಷಯವೆಂದರೆ, ಮಾರ್ಚ್ ತಿಂಗಳಲ್ಲಿ ಉದ್ಯೋಗ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದರೂ, ಸೇನೆಯ ಕೆಲಸಕ್ಕೆ ಸೇರಲು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಂಡಿರುವ ಕೆಲವರು ಏಪ್ರಿಲ್‌ನಲ್ಲಿ ಅಲ್ಲಿಗೆ ಪ್ರಯಾಣಿಸಿದ್ದಾರೆ.

ಈ ಪೈಕಿ ಕೆಲವರು ನಮ್ಮ ಜೊತೆ ಮಾತನಾಡಿದ್ದು, “ನಮಗೆ ಸೇನಾ ಶಿಬಿರದಲ್ಲಿ ನಿಯೋಜಿಸುವ ಮಾಹಿತಿ ನೀಡಲಾಗಿತ್ತಾದರೂ, ಯುದ್ಧಭೂಮಿಯಲ್ಲಿ ಸೈನ್ಯದಲ್ಲಿ ಕೆಲಸ ಮಾಡುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ರಷ್ಯಾದಿಂದ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಕೇರಳಿಗರಲ್ಲಿ ಒಬ್ಬರಾದ ಸಂತೋಷ್, ತಾನು ಮತ್ತು ಇತರ ಇಬ್ಬರು ಮೂರು ತಿಂಗಳವರೆಗೆ ಮಾನ್ಯವಾಗಿರುವ ಖಾಸಗಿ ವೀಸಾದಲ್ಲಿ ರಷ್ಯಾಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

“ಶಿಬಿರಗಳಲ್ಲಿ ಸೇನೆಗೆ ನೆರವು ಸಿಬ್ಬಂದಿಯಾಗಿ ಸೇವೆಗೆ ಸೇರಲು, ನಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದ ನಂತರ ನಾವು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಳ್ಳಬೇಕಾಗಿತ್ತು. ಆದರೆ, ಸಂದೀಪ್ ಸಾವಿನ ನಂತರ ನಾವು ಭಾರತಕ್ಕೆ ಮರಳಲು ನಿರ್ಧರಿಸಿದ್ದೇವೆ. ಇದಕ್ಕಾಗಿ ನಾವು ಮೊದಲು ಸೇನೆಯೊಂದಿಗಿನ ನಮ್ಮ ಒಪ್ಪಂದವನ್ನು ರದ್ದುಗೊಳಿಸಬೇಕಿದೆ. ನಂತರ ಖಾಯಂ ನಿವಾಸತ್ವ ರದ್ದುಗೊಳಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಭಾರತೀಯ ರಾಯಭಾರ ಕಚೇರಿ ನಮಗೆ ಸಹಾಯ ಮಾಡುತ್ತಿದೆ” ಎಂದು ಸಂತೋಷ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಸಂದೀಪ್ ಅವರ ಕುಟುಂಬವು ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ಮಾಡಲು ಕಾಯುತ್ತಿದೆ. ಈ ಕುರಿತು ಮಾತನಾಡಿರುವ ಸಂದೀಪ್ ಸಂಬಂಧಿ ಸರನ್ “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂದೀಪ್ ಅವರ ದೇಹವನ್ನು ಇನ್ನಷ್ಟೇ ಪಡೆಯಬೇಕಿದೆ. ಯುದ್ಧಭೂಮಿಯಿಂದ ಸಂದೀಪ್ ದೇಹ ರಸ್ತೆ ಮಾರ್ಗದ ಮೂಲಕ ಮಾತ್ರ ರಾಜಧಾನಿ ಮಾಸ್ಕೋಗೆ ತರಲು ಸಾಧ್ಯವಿದೆ ಎಂದು ನಮಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

Courtesy : indianexpress.com

ಇದನ್ನೂ ಓದಿ : ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Is Russians are mad to offer 2.5 kakhs pm just to logistics work in their Army. Going for earning heptic money and something happens blaming Indian Government. Government has to make Law that no Indian should go to other country for Army related jobs.

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...