Homeಮುಖಪುಟರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

- Advertisement -
- Advertisement -

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದದಲ್ಲಿ ರಷ್ಯಾ ಸೇನೆಗೆ ನೆರವು ಸಿಬ್ಬಂದಿಯಾಗಿ ತೆರಳಿರುವ ಹಲವಾರು ಕೇರಳಿಗರು, ಭಾರೀ ಮೊತ್ತದ ವೇತನದ ಆಮಿಷಕ್ಕೆ ಒಳಗಾಗಿ ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿ, ರಷ್ಯಾದ ಖಾಯಂ ನಿವಾಸಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಕೇರಳಿಗರ ವ್ಯವಹಾರಗಳ ಇಲಾಖೆ (NORKA) ತಿಳಿಸಿದೆ.

ತವರಿನಲ್ಲಿ ಗಳಿಸುತ್ತಿದ್ದಕ್ಕಿಂತ ಹೆಚ್ಚಿನ ಮೊತ್ತವಾದ ಸುಮಾರು 2.5 ಲಕ್ಷ ರೂಪಾಯಿ ಮಾಸಿಕ ವೇತನದ ಆಹ್ವಾನ ದೊರೆತಿದ್ದರಿಂದ ರಷ್ಯಾ ಸೇನೆಯ ನೆರವು ಸಿಬ್ಬಂದಿಯಾಗಿ ತೆರಳಿರುವ ಈ ಕೇರಳಿಗರು, ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿದ್ದಾರೆ ಎಂದು NORKAದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್ ಕೊಲಸ್ಸೆರಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ರಷ್ಯಾದ ಖಾಯಂ ನಿವಾಸತ್ವ ಪಡೆದುಕೊಂಡ ಬಳಿಕ, ಸೇನೆಗೆ ಸೇರ್ಪಡೆಯಾಗಲು ಇವರೆಲ್ಲ (ಕೇರಳಿಗರು) ಲಿಖಿತ ಸಮ್ಮತಿ ನೀಡಿದ್ದಾರೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿದು ಬಂದಿದೆ ಎಂದು ಅಜಿತ್ ಕೊಲಶ್ಶೇರಿ ಮಾಹಿತಿ ನೀಡಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತ್ರಿಶೂರ್ ಜಿಲ್ಲೆಯ 36 ವರ್ಷದ ಸಂದೀಪ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಅವರಲ್ಲಿ (ಕೇರಳಿಗರು) ಕೆಲವರು ಭಾರತಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಲವರ ಮನೆಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕಳೆದ ವಾರ ಪಿಣರಾಯಿ ವಿಜಯನ್ ಅವರು ರಷ್ಯಾದ ಸೇನಾ ಶಿಬಿರಗಳಿಂದ ಕೇರಳಿಗರನ್ನು ಮರಳಿ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಕೇರಳದಿಂದ ಇನ್ನೂ ಎಷ್ಟು ಮಂದಿ ಇದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ನಾಲ್ವರು ಹಿಂತಿರುಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಕೇರಳಕ್ಕೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಏಕೆಂದರೆ ಅಲ್ಲಿ ತಿಂಗಳಿಗೆ 2.5 ಲಕ್ಷ ರೂ. ವೇತನ ಸಿಗುತ್ತಿದ್ದೆ. ಊರಿನಲ್ಲಿ ಅವರೆಲ್ಲ ಎಲೆಕ್ಟ್ರಿಷಿಯನ್, ಪ್ಲಂಬಿಂಗ್, ಅಡುಗೆ ಕೆಲಸದಂತಹ ಉದ್ಯೋಗ ಮಾಡುತಿದ್ದರು. ಇದು ಕೇರಳ ಮಟ್ಟಿಗೆ ತುಂಬಾ ಅಸಹಜ ವಲಸೆಯಾಗಿದೆ” ಎಂದು ಕೊಲಸ್ಸೆರಿ ಹೇಳಿದ್ದಾರೆ.

ಭಾರತೀಯರನ್ನು ಮಾನವ ಕಳ್ಳಸಾಗಾಣಿಕೆ ಮಾಡಿದ ಆರೋಪದ ಮೇಲೆ ಹಲವು ಪ್ರವಾಸಿ ಏಜೆಂಟ್‌ಗಳ ವಿರುದ್ದಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೇರಳದ ಕೆಲವರು ಸೇರಿದಂತೆ ಹಲವಾರು ಭಾರತೀಯರನ್ನುರಷ್ಯಾ ಸೇನೆಯೊಂದಿಗೆ ಕೆಲಸ ಮಾಡಲು, ಅಲ್ಲಿಗೆ ಕಳ್ಳಸಾಗಾಣಿಕೆ ಮಾಡಿದ ಆರೋಪ ಈ ಏಜೆಂಟ್‌ಗಳ ವಿರುದ್ದ ಇದೆ. ಉಕ್ರೇನ್ ವಿರುದ್ಧದ ರಷ್ಯಾದ ಯುದ್ಧದಲ್ಲಿ ಇಬ್ಬರು ಭಾರತೀಯ ಯುವಕರು ಸಾವನ್ನಪ್ಪಿದ ನಂತರ ಏಜೆಂಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಫಾತಕಾರಿ ವಿಷಯವೆಂದರೆ, ಮಾರ್ಚ್ ತಿಂಗಳಲ್ಲಿ ಉದ್ಯೋಗ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದರೂ, ಸೇನೆಯ ಕೆಲಸಕ್ಕೆ ಸೇರಲು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಂಡಿರುವ ಕೆಲವರು ಏಪ್ರಿಲ್‌ನಲ್ಲಿ ಅಲ್ಲಿಗೆ ಪ್ರಯಾಣಿಸಿದ್ದಾರೆ.

ಈ ಪೈಕಿ ಕೆಲವರು ನಮ್ಮ ಜೊತೆ ಮಾತನಾಡಿದ್ದು, “ನಮಗೆ ಸೇನಾ ಶಿಬಿರದಲ್ಲಿ ನಿಯೋಜಿಸುವ ಮಾಹಿತಿ ನೀಡಲಾಗಿತ್ತಾದರೂ, ಯುದ್ಧಭೂಮಿಯಲ್ಲಿ ಸೈನ್ಯದಲ್ಲಿ ಕೆಲಸ ಮಾಡುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ರಷ್ಯಾದಿಂದ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಕೇರಳಿಗರಲ್ಲಿ ಒಬ್ಬರಾದ ಸಂತೋಷ್, ತಾನು ಮತ್ತು ಇತರ ಇಬ್ಬರು ಮೂರು ತಿಂಗಳವರೆಗೆ ಮಾನ್ಯವಾಗಿರುವ ಖಾಸಗಿ ವೀಸಾದಲ್ಲಿ ರಷ್ಯಾಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

“ಶಿಬಿರಗಳಲ್ಲಿ ಸೇನೆಗೆ ನೆರವು ಸಿಬ್ಬಂದಿಯಾಗಿ ಸೇವೆಗೆ ಸೇರಲು, ನಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದ ನಂತರ ನಾವು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಳ್ಳಬೇಕಾಗಿತ್ತು. ಆದರೆ, ಸಂದೀಪ್ ಸಾವಿನ ನಂತರ ನಾವು ಭಾರತಕ್ಕೆ ಮರಳಲು ನಿರ್ಧರಿಸಿದ್ದೇವೆ. ಇದಕ್ಕಾಗಿ ನಾವು ಮೊದಲು ಸೇನೆಯೊಂದಿಗಿನ ನಮ್ಮ ಒಪ್ಪಂದವನ್ನು ರದ್ದುಗೊಳಿಸಬೇಕಿದೆ. ನಂತರ ಖಾಯಂ ನಿವಾಸತ್ವ ರದ್ದುಗೊಳಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಭಾರತೀಯ ರಾಯಭಾರ ಕಚೇರಿ ನಮಗೆ ಸಹಾಯ ಮಾಡುತ್ತಿದೆ” ಎಂದು ಸಂತೋಷ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಸಂದೀಪ್ ಅವರ ಕುಟುಂಬವು ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ಮಾಡಲು ಕಾಯುತ್ತಿದೆ. ಈ ಕುರಿತು ಮಾತನಾಡಿರುವ ಸಂದೀಪ್ ಸಂಬಂಧಿ ಸರನ್ “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂದೀಪ್ ಅವರ ದೇಹವನ್ನು ಇನ್ನಷ್ಟೇ ಪಡೆಯಬೇಕಿದೆ. ಯುದ್ಧಭೂಮಿಯಿಂದ ಸಂದೀಪ್ ದೇಹ ರಸ್ತೆ ಮಾರ್ಗದ ಮೂಲಕ ಮಾತ್ರ ರಾಜಧಾನಿ ಮಾಸ್ಕೋಗೆ ತರಲು ಸಾಧ್ಯವಿದೆ ಎಂದು ನಮಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

Courtesy : indianexpress.com

ಇದನ್ನೂ ಓದಿ : ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Is Russians are mad to offer 2.5 kakhs pm just to logistics work in their Army. Going for earning heptic money and something happens blaming Indian Government. Government has to make Law that no Indian should go to other country for Army related jobs.

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...