Homeಮುಖಪುಟರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

- Advertisement -
- Advertisement -

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದದಲ್ಲಿ ರಷ್ಯಾ ಸೇನೆಗೆ ನೆರವು ಸಿಬ್ಬಂದಿಯಾಗಿ ತೆರಳಿರುವ ಹಲವಾರು ಕೇರಳಿಗರು, ಭಾರೀ ಮೊತ್ತದ ವೇತನದ ಆಮಿಷಕ್ಕೆ ಒಳಗಾಗಿ ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿ, ರಷ್ಯಾದ ಖಾಯಂ ನಿವಾಸಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಕೇರಳಿಗರ ವ್ಯವಹಾರಗಳ ಇಲಾಖೆ (NORKA) ತಿಳಿಸಿದೆ.

ತವರಿನಲ್ಲಿ ಗಳಿಸುತ್ತಿದ್ದಕ್ಕಿಂತ ಹೆಚ್ಚಿನ ಮೊತ್ತವಾದ ಸುಮಾರು 2.5 ಲಕ್ಷ ರೂಪಾಯಿ ಮಾಸಿಕ ವೇತನದ ಆಹ್ವಾನ ದೊರೆತಿದ್ದರಿಂದ ರಷ್ಯಾ ಸೇನೆಯ ನೆರವು ಸಿಬ್ಬಂದಿಯಾಗಿ ತೆರಳಿರುವ ಈ ಕೇರಳಿಗರು, ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿದ್ದಾರೆ ಎಂದು NORKAದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್ ಕೊಲಸ್ಸೆರಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ರಷ್ಯಾದ ಖಾಯಂ ನಿವಾಸತ್ವ ಪಡೆದುಕೊಂಡ ಬಳಿಕ, ಸೇನೆಗೆ ಸೇರ್ಪಡೆಯಾಗಲು ಇವರೆಲ್ಲ (ಕೇರಳಿಗರು) ಲಿಖಿತ ಸಮ್ಮತಿ ನೀಡಿದ್ದಾರೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿದು ಬಂದಿದೆ ಎಂದು ಅಜಿತ್ ಕೊಲಶ್ಶೇರಿ ಮಾಹಿತಿ ನೀಡಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತ್ರಿಶೂರ್ ಜಿಲ್ಲೆಯ 36 ವರ್ಷದ ಸಂದೀಪ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಅವರಲ್ಲಿ (ಕೇರಳಿಗರು) ಕೆಲವರು ಭಾರತಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಲವರ ಮನೆಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕಳೆದ ವಾರ ಪಿಣರಾಯಿ ವಿಜಯನ್ ಅವರು ರಷ್ಯಾದ ಸೇನಾ ಶಿಬಿರಗಳಿಂದ ಕೇರಳಿಗರನ್ನು ಮರಳಿ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಕೇರಳದಿಂದ ಇನ್ನೂ ಎಷ್ಟು ಮಂದಿ ಇದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ನಾಲ್ವರು ಹಿಂತಿರುಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಕೇರಳಕ್ಕೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಏಕೆಂದರೆ ಅಲ್ಲಿ ತಿಂಗಳಿಗೆ 2.5 ಲಕ್ಷ ರೂ. ವೇತನ ಸಿಗುತ್ತಿದ್ದೆ. ಊರಿನಲ್ಲಿ ಅವರೆಲ್ಲ ಎಲೆಕ್ಟ್ರಿಷಿಯನ್, ಪ್ಲಂಬಿಂಗ್, ಅಡುಗೆ ಕೆಲಸದಂತಹ ಉದ್ಯೋಗ ಮಾಡುತಿದ್ದರು. ಇದು ಕೇರಳ ಮಟ್ಟಿಗೆ ತುಂಬಾ ಅಸಹಜ ವಲಸೆಯಾಗಿದೆ” ಎಂದು ಕೊಲಸ್ಸೆರಿ ಹೇಳಿದ್ದಾರೆ.

ಭಾರತೀಯರನ್ನು ಮಾನವ ಕಳ್ಳಸಾಗಾಣಿಕೆ ಮಾಡಿದ ಆರೋಪದ ಮೇಲೆ ಹಲವು ಪ್ರವಾಸಿ ಏಜೆಂಟ್‌ಗಳ ವಿರುದ್ದಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೇರಳದ ಕೆಲವರು ಸೇರಿದಂತೆ ಹಲವಾರು ಭಾರತೀಯರನ್ನುರಷ್ಯಾ ಸೇನೆಯೊಂದಿಗೆ ಕೆಲಸ ಮಾಡಲು, ಅಲ್ಲಿಗೆ ಕಳ್ಳಸಾಗಾಣಿಕೆ ಮಾಡಿದ ಆರೋಪ ಈ ಏಜೆಂಟ್‌ಗಳ ವಿರುದ್ದ ಇದೆ. ಉಕ್ರೇನ್ ವಿರುದ್ಧದ ರಷ್ಯಾದ ಯುದ್ಧದಲ್ಲಿ ಇಬ್ಬರು ಭಾರತೀಯ ಯುವಕರು ಸಾವನ್ನಪ್ಪಿದ ನಂತರ ಏಜೆಂಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಫಾತಕಾರಿ ವಿಷಯವೆಂದರೆ, ಮಾರ್ಚ್ ತಿಂಗಳಲ್ಲಿ ಉದ್ಯೋಗ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದರೂ, ಸೇನೆಯ ಕೆಲಸಕ್ಕೆ ಸೇರಲು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಂಡಿರುವ ಕೆಲವರು ಏಪ್ರಿಲ್‌ನಲ್ಲಿ ಅಲ್ಲಿಗೆ ಪ್ರಯಾಣಿಸಿದ್ದಾರೆ.

ಈ ಪೈಕಿ ಕೆಲವರು ನಮ್ಮ ಜೊತೆ ಮಾತನಾಡಿದ್ದು, “ನಮಗೆ ಸೇನಾ ಶಿಬಿರದಲ್ಲಿ ನಿಯೋಜಿಸುವ ಮಾಹಿತಿ ನೀಡಲಾಗಿತ್ತಾದರೂ, ಯುದ್ಧಭೂಮಿಯಲ್ಲಿ ಸೈನ್ಯದಲ್ಲಿ ಕೆಲಸ ಮಾಡುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ರಷ್ಯಾದಿಂದ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಕೇರಳಿಗರಲ್ಲಿ ಒಬ್ಬರಾದ ಸಂತೋಷ್, ತಾನು ಮತ್ತು ಇತರ ಇಬ್ಬರು ಮೂರು ತಿಂಗಳವರೆಗೆ ಮಾನ್ಯವಾಗಿರುವ ಖಾಸಗಿ ವೀಸಾದಲ್ಲಿ ರಷ್ಯಾಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

“ಶಿಬಿರಗಳಲ್ಲಿ ಸೇನೆಗೆ ನೆರವು ಸಿಬ್ಬಂದಿಯಾಗಿ ಸೇವೆಗೆ ಸೇರಲು, ನಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದ ನಂತರ ನಾವು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಳ್ಳಬೇಕಾಗಿತ್ತು. ಆದರೆ, ಸಂದೀಪ್ ಸಾವಿನ ನಂತರ ನಾವು ಭಾರತಕ್ಕೆ ಮರಳಲು ನಿರ್ಧರಿಸಿದ್ದೇವೆ. ಇದಕ್ಕಾಗಿ ನಾವು ಮೊದಲು ಸೇನೆಯೊಂದಿಗಿನ ನಮ್ಮ ಒಪ್ಪಂದವನ್ನು ರದ್ದುಗೊಳಿಸಬೇಕಿದೆ. ನಂತರ ಖಾಯಂ ನಿವಾಸತ್ವ ರದ್ದುಗೊಳಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಭಾರತೀಯ ರಾಯಭಾರ ಕಚೇರಿ ನಮಗೆ ಸಹಾಯ ಮಾಡುತ್ತಿದೆ” ಎಂದು ಸಂತೋಷ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಸಂದೀಪ್ ಅವರ ಕುಟುಂಬವು ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ಮಾಡಲು ಕಾಯುತ್ತಿದೆ. ಈ ಕುರಿತು ಮಾತನಾಡಿರುವ ಸಂದೀಪ್ ಸಂಬಂಧಿ ಸರನ್ “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂದೀಪ್ ಅವರ ದೇಹವನ್ನು ಇನ್ನಷ್ಟೇ ಪಡೆಯಬೇಕಿದೆ. ಯುದ್ಧಭೂಮಿಯಿಂದ ಸಂದೀಪ್ ದೇಹ ರಸ್ತೆ ಮಾರ್ಗದ ಮೂಲಕ ಮಾತ್ರ ರಾಜಧಾನಿ ಮಾಸ್ಕೋಗೆ ತರಲು ಸಾಧ್ಯವಿದೆ ಎಂದು ನಮಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

Courtesy : indianexpress.com

ಇದನ್ನೂ ಓದಿ : ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Is Russians are mad to offer 2.5 kakhs pm just to logistics work in their Army. Going for earning heptic money and something happens blaming Indian Government. Government has to make Law that no Indian should go to other country for Army related jobs.

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...