Homeಮುಖಪುಟಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ 'ಕಳಪೆ ನೀತಿ ನಿರೂಪಣೆ' ಕಾರಣ: ಜೈರಾಮ್ ರಮೇಶ್

ಭಾರತದ ವಾಯುಮಾಲಿನ್ಯ ಬಿಕ್ಕಟ್ಟಿಗೆ ಮೋದಿ ಸರ್ಕಾರದ ‘ಕಳಪೆ ನೀತಿ ನಿರೂಪಣೆ’ ಕಾರಣ: ಜೈರಾಮ್ ರಮೇಶ್

- Advertisement -
- Advertisement -

ಮೋದಿ ಸರ್ಕಾರವು “ಕಳಪೆ ನೀತಿ ನಿರೂಪಣೆ”ಯಿದ ವಾಯುಮಾಲಿನ್ಯವನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದು, “ಗಂಭೀರ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟುನ್ನು ಎದುರಿಸಲು ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಸ್ಥಳೀಯ ಸಂಸ್ಥೆಗಳು ಮತ್ತು ರಾಜ್ಯ ಸರ್ಕಾರಗಳನ್ನು ಸಜ್ಜುಗೊಳಿಸಬೇಕು” ಎಂದು ಭಾನುವಾರ ಆಗ್ರಹಿಸಿದ್ದಾರೆ.

“ಭಾರತದಲ್ಲಿನ ಕೇವಲ 10 ನಗರಗಳಲ್ಲಿ ಪ್ರತಿ ವರ್ಷ ಸುಮಾರು 34,000 ಸಾವುಗಳು ಸಮಭವಿಸಿವೆ. ಈ ತಿಂಗಳ ಆರಂಭದಲ್ಲಿನ ಎಲ್ಲ ಸಾವುಗಳಲ್ಲಿ 7.2 ರಷ್ಟು ವಾಯುಮಾಲಿನ್ಯಕ್ಕೆ ಸಂಬಂಧಿಸಿವೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂವಹನದ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.

ದೆಹಲಿಯ ವಿಜ್ಞಾನ ಮತ್ತು ಪರಿಸರ ಕೇಂದ್ರದ ಹೊಸ ಅಧ್ಯಯನವು ರಾಷ್ಟ್ರೀಯ ಶುದ್ಧ ಗಾಳಿ ಕಾರ್ಯಕ್ರಮವನ್ನು (ಎನ್‌ಸಿಎಪಿ) ಮೌಲ್ಯಮಾಪನ ಮಾಡಿದೆ ಮತ್ತು ಈ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಿಗೆ ಕಾರಣವಾದ ನೀತಿ ಅವ್ಯವಸ್ಥೆಯನ್ನು ಬೆಳಕಿಗೆ ತಂದಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“15 ನೇ ಹಣಕಾಸು ಆಯೋಗದ ಅನುದಾನ ಸೇರಿದಂತೆ ‘ಎನ್‌ಸಿಎಪಿ’ಯ ಪ್ರಸ್ತುತ ಬಜೆಟ್ ಸುಮಾರು 10,500 ಕೋಟಿ ರೂ ಆಗಿದೆ. ಇದು 131 ನಗರಗಳಲ್ಲಿ ಹರಡಿದೆ! ಆದ್ದರಿಂದ ಕಾರ್ಯಕ್ರಮವು ಹತಾಶವಾಗಿ ಕಡಿಮೆ ಹಣವನ್ನು ಹೊಂದಿದೆ. ಈ ಅಲ್ಪ ಮೊತ್ತದಲ್ಲಿ ಕೇವಲ 64% ನಿಧಿಗಳು ಮಾತ್ರ ಬಳಸಲಾಗಿದೆ” ಎಂದು ರಮೇಶ್ ಹೇಳಿದರು.

ಎನ್‌ಸಿಎಪಿ ಅಡಿಯಲ್ಲಿ 131 ನಗರಗಳ ಪೈಕಿ ಹೆಚ್ಚಿನವುಗಳು ತಮ್ಮ ವಾಯು ಮಾಲಿನ್ಯವನ್ನು ಪತ್ತೆಹಚ್ಚಲು ಡೇಟಾವನ್ನು ಹೊಂದಿಲ್ಲ. ದತ್ತಾಂಶವನ್ನು ಹೊಂದಿರುವ 46 ನಗರಗಳಲ್ಲಿ ಕೇವಲ ಎಂಟು ನಗರಗಳು ಮಾತ್ರ ಎನ್‌ಸಿಎಪಿಯ ಕಡಿಮೆ ಗುರಿಯನ್ನು ತಲುಪಿವೆ. ಆದರೆ, 22 ನಗರಗಳು ವಾಸ್ತವವಾಗಿ ವಾಯುಮಾಲಿನ್ಯವು ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ.

“ಸರ್ಕಾರವು ಮುಂದೆ ಸಾಗಬೇಕಾದ ಸ್ಪಷ್ಟ ಕ್ರಮಗಳಿವೆ; ವಾಯು ಮಾಲಿನ್ಯ (ನಿಯಂತ್ರಣ ಮತ್ತು ತಡೆಗಟ್ಟುವಿಕೆ) ಕಾಯಿದೆಯು 1981 ರಲ್ಲಿ ಅಸ್ತಿತ್ವಕ್ಕೆ ಬಂದಿತು ಮತ್ತು ರಾಷ್ಟ್ರೀಯ ಸುತ್ತುವರಿದ ವಾಯು ಗುಣಮಟ್ಟ ಮಾನದಂಡಗಳನ್ನು (NAAQS) ನವೆಂಬರ್ 2009 ರಲ್ಲಿ ಜಾರಿಗೆ ತರಲಾಯಿತು. ಆದಾಗ್ಯೂ, ಕಳೆದ ಒಂದು ದಶಕದಲ್ಲಿ, ವಾಯು ಮಾಲಿನ್ಯದ ಸಾರ್ವಜನಿಕ ಆರೋಗ್ಯದ ಪರಿಣಾಮಗಳು, ಅನಾರೋಗ್ಯ ಮತ್ತು ಮರಣ ಎರಡರಲ್ಲೂ ಎಲ್ಲವೂ ತುಂಬಾ ಸ್ಪಷ್ಟವಾಗಿವೆ” ಎಂದು ಅವರು ಹೇಳಿದರು.

ಇದೀಗ ವಾಯುಮಾಲಿನ್ಯ (ನಿಯಂತ್ರಣ ಮತ್ತು ತಡೆಗಟ್ಟುವಿಕೆ) ಕಾಯಿದೆ ಮತ್ತು ಎನ್‌ಎಎಕ್ಯೂಎಸ್ ಎರಡರ ಮರುಪರಿಶೀಲನೆ ಮತ್ತು ಸಂಪೂರ್ಣ ಪುನರುಜ್ಜೀವನದ ಸಮಯವಾಗಿದೆ ಎಂದು ರಮೇಶ್ ಹೇಳಿದರು.

“ನಮ್ಮ ನಗರಗಳಿಗೆ ಕನಿಷ್ಠ 10-20 ಪಟ್ಟು ಹೆಚ್ಚು ಹಣದ ಅಗತ್ಯವಿದೆ; ಎನ್‌ಸಿಎಪಿ ಅನ್ನು 25,000 ಕೋಟಿ ರೂ.ಗಳ ಕಾರ್ಯಕ್ರಮವನ್ನಾಗಿ ಮಾಡಬೇಕು ಎನ್‌ಸಿಎಪಿ ‘ಪಿಎಂ 2.5’ ಹಂತಗಳ ಮಾಪನವನ್ನು ಅಳವಡಿಸಿಕೊಳ್ಳಬೇಕು. ಏಕೆಂದರೆ, ಕಾರ್ಯಕ್ಷಮತೆಯ ಮಾನದಂಡವು ಎನ್‌ಸಿಎಪಿ ಹೊರಸೂಸುವಿಕೆಯ ಪ್ರಮುಖ ಮೂಲಗಳತ್ತ ತನ್ನ ಗಮನವನ್ನು ಮರುಹೊಂದಿಸಬೇಕು” ಎಂದು ಅವರು ಹೇಳಿದರು.

ಎನ್‌ಸಿಎಪಿ ಗಾಳಿಯ ಗುಣಮಟ್ಟ ನಿಯಂತ್ರಣಕ್ಕಾಗಿ ಪ್ರಾದೇಶಿಕ/ಏರ್‌ಶೆಡ್ ವಿಧಾನವನ್ನು ಅಳವಡಿಸಿಕೊಳ್ಳಬೇಕು. ಪುರಸಭೆ ಮತ್ತು ರಾಜ್ಯ ಅಧಿಕಾರಿಗಳು ನ್ಯಾಯವ್ಯಾಪ್ತಿಯಲ್ಲಿ ಸಹಕರಿಸಲು ಅಗತ್ಯವಿರುವ ಆಡಳಿತ ಯೋಜನೆ ಮತ್ತು ಸಂಪನ್ಮೂಲಗಳನ್ನು ಹೊಂದಿರಬೇಕು ಎಂದು ರಮೇಶ್ ಹೇಳಿದರು.

“ಎನ್‌ಸಿಎಪಿಗೆ ಕಾನೂನು ಬೆಂಬಲ, ಜಾರಿ ಕಾರ್ಯವಿಧಾನ ಮತ್ತು ದೇಶದ ಪ್ರತಿ ನಗರಕ್ಕೆ ಗಂಭೀರ ದತ್ತಾಂಶ ಮಾನಿಟರಿಂಗ್ ಸಾಮರ್ಥ್ಯವನ್ನು ನೀಡಬೇಕು, ಪ್ರಸ್ತುತ ಗಮನವನ್ನು ಕೇವಲ ‘ಸಾಧನೆ ಮಾಡದ’ ನಗರಗಳ ಮೇಲೆ ಮಾತ್ರ ನೀಡಬೇಕು” ಎಂದು ಅವರು ವಾದಿಸಿದರು.

“ಕಲ್ಲಿದ್ದಲು ವಿದ್ಯುತ್ ಸ್ಥಾವರಗಳಿಗೆ ವಾಯು ಮಾಲಿನ್ಯ ನಿಯಮಾವಳಿಗಳನ್ನು ತಕ್ಷಣವೇ ಜಾರಿಗೊಳಿಸಬೇಕು. ಎಲ್ಲಾ ವಿದ್ಯುತ್ ಸ್ಥಾವರಗಳು 2024 ರ ಅಂತ್ಯದೊಳಗೆ ಫ್ಲೋರೈಡ್ ಗ್ಯಾಸ್ ಡಿಸಲ್ಫ್ರೈಸರ್ (ಎಫ್ಜಿಡಿ) ಅನ್ನು ಅಳವಡಿಸಬೇಕು” ಎಂದು ಸಲಹೆ ನಿಡಿದರು.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಸ್ವಾತಂತ್ರ್ಯವನ್ನು ಮರುಸ್ಥಾಪಿಸಬೇಕು ಮತ್ತು ಕಳೆದ 10 ವರ್ಷಗಳಲ್ಲಿ ಮಾಡಿದ “ಜನವಿರೋಧಿ ಪರಿಸರ ಕಾನೂನು ತಿದ್ದುಪಡಿಗಳನ್ನು” ಹಿಂಪಡೆಯಬೇಕು ಎಂದು ರಮೇಶ್ ಒತ್ತಾಯಿಸಿದರು.

“ಮುಂಬರುವ ಕೇಂದ್ರ ಬಜೆಟ್ ಈ ಗಂಭೀರ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಭಾರತದ ಸ್ಥಳೀಯ ಸಂಸ್ಥೆಗಳು, ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವನ್ನು ಸಂಪನ್ಮೂಲ ಮತ್ತು ಸಜ್ಜುಗೊಳಿಸಲು ಮುಂದಿನ ಹಾದಿಯನ್ನು ಒದಗಿಸಬೇಕು” ಎಂದು ಅವರು ಹೇಳಿದರು.

ಇದನ್ನೂ ಓದಿ; ಕೇರಳ: ನಿಪಾ ವೈರಸ್ ಸೋಂಕಿತ 14 ವರ್ಷದ ಬಾಲಕ ಹೃದಯ ಸ್ತಂಭನದಿಂದ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...