Homeಕರ್ನಾಟಕ'ಇಂಡಿಯಾ ಮಿತ್ರಪಕ್ಷಗಳು ಪರಸ್ಪರ ಸಹಕರಿಸಲಿಲ್ಲ..'; 'ಮಹಾ' ಸೋಲಿನ ಕುರಿತು ಪರಮೇಶ್ವರ್ ಪ್ರತಿಕ್ರಿಯೆ

‘ಇಂಡಿಯಾ ಮಿತ್ರಪಕ್ಷಗಳು ಪರಸ್ಪರ ಸಹಕರಿಸಲಿಲ್ಲ..’; ‘ಮಹಾ’ ಸೋಲಿನ ಕುರಿತು ಪರಮೇಶ್ವರ್ ಪ್ರತಿಕ್ರಿಯೆ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಮಹಾ ವಿಕಾಸ್ ಅಘಾಡಿಯೊಳಗೆ (ಎಂವಿಎ) ಪರಸ್ಪರ ಆರೋಪ-ಪ್ರತ್ಯಾರೋಪ ಪ್ರಾರಂಭವಾದಾಗಿದೆ.

ಗೃಹ ಸಚಿವ, ಕಾಂಗ್ರೆಸ್‌ನ ಚುನಾವಣಾ ಉಸ್ತುವಾರಿಗಳಲ್ಲಿ ಒಬ್ಬರಾದ ಜಿ ಪರಮೇಶ್ವರ್ ಅವರು ಭಾನುವಾರ ಪ್ರತಿಕ್ರಿಯಿಸಿ, ಮುಜುಗರದ ಸೋಲಿಗೆ ಮಿತ್ರ ಪಕ್ಷಗಳ ನಡುವಿನ ಸಹಕಾರ ಮತ್ತು ಸಂಘಟಿತ ಪ್ರಯತ್ನದ ಕೊರತೆ ಕಾರಣ ಎಂದು ಹೇಳಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಿವಸೇನೆಗೆ (ಯುಬಿಟಿ) ಸಂಪೂರ್ಣ ಬೆಂಬಲ ನೀಡಿಲ್ಲ, ಉದ್ಧವ್ ಠಾಕ್ರೆ ಅವರ ಪಕ್ಷದ ವಿಧಾನವೂ ಅದೇ ಆಗಿದೆ. ಎನ್‌ಸಿಪಿ (ಶರದ್ ಪವಾರ್ ಬಣ) ದೊಂದಿಗೆ ಇದೇ ರೀತಿಯ ಸಹಯೋಗದ ಕೊರತೆಯು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.

“ಹಲವು ಸ್ಥಳಗಳಲ್ಲಿ, ನಾವು ಅವರಿಗಾಗಿ ಕೆಲಸ ಮಾಡಿಲ್ಲ, ಅವರು ನಮಗಾಗಿ ಕೆಲಸ ಮಾಡಲಿಲ್ಲ. ನಾವು ಮೈತ್ರಿಯಲ್ಲಿದ್ದಾಗ, ಶಿವಸೇನೆ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಮತ್ತು ಶಿವಸೇನೆ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ಶರದ್ ಪವಾರ್ ಅವರ ಪಕ್ಷದಿಂದ ಸಹ ಅದೇ ಸಮಸ್ಯೆ ಸಂಭವಿಸಿದೆ” ಎಂದು ಹೇಳಿದರು.

ಶನಿವಾರ ನಡೆದ ಮತ ಎಣಿಕೆಯ ನಂತರ ಕಾಂಗ್ರೆಸ್-ಎನ್‌ಸಿಪಿ (ಎಸ್‌ಪಿ)-ಶಿವಸೇನೆ (ಯುಬಿಟಿ) ಮೈತ್ರಿ ಹೀನಾಯ ಸೋಲು ಕಂಡಿದ್ದು, ಕೇವಲ 49 ಸ್ಥಾನಗಳನ್ನು ಪಡೆದುಕೊಂಡಿದೆ. ಉದ್ಧವ್ ಠಾಕ್ರೆ ಅವರ ಶಿವಸೇನೆ 20 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 16 ಮತ್ತು ಶರದ್ ಪವಾರ್ ಅವರ ಎನ್‌ಸಿಪಿ 10 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.

“ಕಾಂಗ್ರೆಸ್ ವಿದರ್ಭದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿತ್ತು. ನಾವು 50 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಿರೀಕ್ಷಿಸಿದ್ದೇವೆ. ಆದರೆ ಅಲ್ಲಿ ಕೇವಲ 8 ಸ್ಥಾನಗಳನ್ನು ಗಳಿಸಿದ್ದೇವೆ. 105 ಸ್ಥಾನಗಳಲ್ಲಿ, ನಾವು 60-70 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ನಿರೀಕ್ಷಿಸಿದ್ದೇವು. ಆದರೆ, ನಾವು ನಿರೀಕ್ಷಿಸಿದ್ದನ್ನು ಸಾಧಿಸಲಿಲ್ಲ” ಎಂದು ಅವರು ಹೇಳಿದರು.

“ನಮ್ಮ ನಾಯಕರಲ್ಲಿ ನಾವು ಚರ್ಚಿಸಿದ್ದು ಏನೆಂದರೆ, ನಮ್ಮ ದೇಶದಲ್ಲಿ ಇವಿಎಂಗಳು ಇರುವವರೆಗೆ ಕಾಂಗ್ರೆಸ್ ಅಥವಾ ಯಾವುದೇ ಪಕ್ಷ ಅಧಿಕಾರಕ್ಕೆ ಬರುವುದು ತುಂಬಾ ಕಷ್ಟ. ಅವರು (ಬಿಜೆಪಿ) ಇವಿಎಂಗಳನ್ನು ಹ್ಯಾಕ್ ಮಾಡುವಲ್ಲಿ ಪರಿಣತರು; ಅವರನ್ನು ಎಲ್ಲಿ ಬೇಕಾದರೂ ಕುಶಲತೆಯಿಂದ ನಿರ್ವಹಿಸುತ್ತಾರೆ” ಎಂದು ಪರಮೇಶ್ವರ ಹೇಳಿದರು.

ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ ಒಳಗೊಂಡ ಮಹಾಯುತಿ ಮೈತ್ರಿಕೂಟವು 288 ಸ್ಥಾನಗಳಲ್ಲಿ 233 ಸ್ಥಾನಗಳನ್ನು ಗಳಿಸುವ ಮೂಲಕ ಪ್ರಚಂಡ ಗೆಲುವು ಸಾಧಿಸಿತು.

ಇದನ್ನೂ ಓದಿ; ಗಾಜಾದಲ್ಲಿ ಇಸ್ರೇಲಿ ದಾಳಿ: 48 ಗಂಟೆಗಳಲ್ಲಿ 120 ಪ್ಯಾಲೆಸ್ತೀನಿಯರನ್ನು ಕೊಂದ ನೆತನ್ಯಾಹು ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...