Homeಕರ್ನಾಟಕಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಬೆಂಗಳೂರು-ಪುಣೆ

ಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಬೆಂಗಳೂರು-ಪುಣೆ

- Advertisement -
- Advertisement -

ಬ್ರಿಟನ್ ರಾಜಧಾನಿ ಲಂಡನ್ 2023ರಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ವಾಹನ ಸಂಚಾರ ನಗರವಾಗಿದ್ದು, ಪೀಕ್ ಅವರ್‌ನಲ್ಲಿ ಗಂಟೆಗೆ ಸರಾಸರಿ 14 ಕಿ.ಮೀ ವೇಗವನ್ನು ಹೊಂದಿದೆ ಎಂದು ವರದಿಯೊಂದು ತಿಳಿಸಿದೆ. ಭಾರತದ ಎರಡು ನಗರಗಳಾದ ಬೆಂಗಳೂರು ಮತ್ತು ಪುಣೆ ಕೂಡ ಕೆಟ್ಟ ಟ್ರಾಫಿಕ್ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿವೆ ಎಂದು ಆಮ್ಸ್ಟರ್‌ಡ್ಯಾಮ್ ಮೂಲದ ಸ್ಥಳ ತಂತ್ರಜ್ಞಾನ ತಜ್ಞ ಸಂಸ್ಥೆ ಟಾಮ್‌ಟಾಮ್ ವರದಿ ಹೇಳಿದೆ.

ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ ಆರು ಖಂಡಗಳಲ್ಲಿ 55 ದೇಶಗಳಾದ್ಯಂತ 387 ನಗರಗಳನ್ನು ಅವುಗಳ ಸರಾಸರಿ ಪ್ರಯಾಣದ ಸಮಯ, ಇಂಧನ ವೆಚ್ಚಗಳು ಮತ್ತು ಕಾರ್ಬನ್ ಹೊರಸೂಸುವಿಕೆಯಿಂದ ಮೌಲ್ಯಮಾಪನ ಮಾಡಿದೆ. ಇದು 600 ಮಿಲಿಯನ್‌ಗಿಂತಲೂ (60 ಕೋಟಿ) ಹೆಚ್ಚು ಇನ್-ಕಾರ್ ನ್ಯಾವಿಗೇಷನ್ ಸಿಸ್ಟಮ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳ ಡೇಟಾವನ್ನು ಆಧರಿಸಿದೆ.

ಹೆಚ್ಚು ಸಂಚಾರ ದಟ್ಟಣೆ ಇರುವ ನಗರಗಳಲ್ಲಿ ಬೆಂಗಳೂರು, ಪುಣೆ

ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ನಗರಗಳಾದ ಬೆಂಗಳೂರು (6) ಮತ್ತು ಪುಣೆ (7) ಎರಡು ಭಾರತೀಯ ನಗರಗಳಾಗಿದ್ದು, 2023ರಲ್ಲಿ ವಿಶ್ವದ ಹತ್ತು ಕೆಟ್ಟ ಟ್ರಾಫಿಕ್ ಪೀಡಿತ ನಗರಗಳಲ್ಲಿ ಸ್ಥಾನ ಪಡೆದುಕೊಂಡಿವೆ. 2023 ರಲ್ಲಿ ಬೆಂಗಳೂರಿನ ಪ್ರತಿ 10 ಕಿಮೀಗೆ ಸವಾರಿಗೆ ಸರಾಸರಿ ಪ್ರಯಾಣದ ಸಮಯ 28 ನಿಮಿಷ 10 ಸೆಕೆಂಡ್‌ಗಳಾಗಿದ್ದರೆ, ಪುಣೆಯಲ್ಲಿ ಇದು 27 ನಿಮಿಷ 50 ಸೆಕೆಂಡುಗಳು ಎಂದು ಟಾಮ್‌ಟಾಮ್ ವರದಿ ತಿಳಿಸಿದೆ.

ಭಾರತದ ಐಟಿ ರಾಜಧಾನಿಯಾಗಿರುವ ಬೆಂಗಳೂರು, ಐರ್ಲೆಂಡ್‌ನ ರಾಜಧಾನಿ ಡಬ್ಲಿನ್ ನಂತರ 2023 ರಲ್ಲಿ ಎರಡನೇ ಅತಿ ಹೆಚ್ಚು ಜನದಟ್ಟಣೆಯ ನಗರ ಎಂದು ಹೆಸರಿಸಲ್ಪಟ್ಟಿದೆ. ಕಳೆದ ವರ್ಷ ಬೆಂಗಳೂರಿನ ಮೂಲಕ ಪ್ರಯಾಣಿಸಲು ಕೆಟ್ಟ ದಿನವೆಂದರೆ ಸೆಪ್ಟೆಂಬರ್ 27, ಆಗ 10 ಕಿಮೀ ಓಡಿಸಲು ಸರಾಸರಿ ಪ್ರಯಾಣದ ಸಮಯ 32 ನಿಮಿಷಗಳು ಎಂದು ವರದಿ ಹೇಳಿದೆ. ಕಳೆದ ವರ್ಷ ಆರನೇ ಅತಿ ಹೆಚ್ಚು ಜನದಟ್ಟಣೆಯ ನಗರವಾಗಿದ್ದ ಪುಣೆಯಲ್ಲಿ ಸೆಪ್ಟೆಂಬರ್ 8 ರಂದು 10 ಕಿ.ಮೀ ದೂರವನ್ನು ಕ್ರಮಿಸಲು ಸುಮಾರು 34 ನಿಮಿಷಗಳನ್ನು ತೆಗೆದುಕೊಂಡಿತು.

ದೆಹಲಿ, ಮುಂಬೈನ್ನೂ ಟ್ರಾಫಿಕ್‌ ಸಮಸ್ಯೆ

ದೆಹಲಿ (44) ಮತ್ತು ಮುಂಬೈ (52) ಸಹ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್‌ನಲ್ಲಿವೆ. 2023 ರ ವರದಿಯ ಪ್ರಕಾರ ದೆಹಲಿಯಲ್ಲಿ 10 ಕಿಮೀ ವಾಹನ ಓಡಿಸಲು ಸರಾಸರಿ 21 ನಿಮಿಷ 40 ಸೆಕೆಂಡುಗಳು ಮತ್ತು ಮುಂಬೈನಲ್ಲಿ 21 ನಿಮಿಷ 20 ಸೆಕೆಂಡುಗಳು ತೆಗೆದುಕೊಂಡಿತು ಎಂದು ವರದಿ ತೋರಿಸಿದೆ.

ಲಂಡನ್, ಡಬ್ಲಿನ್, ಟೊರೊಂಟೊ ಕೆಟ್ಟ ಟ್ರಾಫಿಕ್ ನಗರಗಳು

ಟಾಮ್‌ಟಾಮ್ ವರದಿಯ ಪ್ರಕಾರ, ಲಂಡನ್‌ನ ಪ್ರತಿ 10 ಕಿ.ಮೀ.ಗೆ 37 ನಿಮಿಷಗಳ ಸರಾಸರಿ ಪ್ರಯಾಣದ ಸಮಯವನ್ನು ಹೊಂದಿದ್ದು, 2023 ರಲ್ಲಿ ಟ್ರಾಫಿಕ್‌ನಿಂದ ಹೆಚ್ಚು ಹಾನಿಗೊಳಗಾದ ನಗರವಾಗಿದೆ. ಡಬ್ಲಿನ್ ಕಳೆದ ವರ್ಷ 29 ನಿಮಿಷ 30 ಸೆಕೆಂಡ್‌ಗಳ ಪ್ರತಿ 10 ಕಿ.ಮೀ ಸರಾಸರಿ ಪ್ರಯಾಣದ ಸಮಯವನ್ನು ಹೊಂದಿತ್ತು ಮತ್ತು ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದ್ದರೆ, ಕೆನಡಾದ ಟೊರೊಂಟೊ, 10 ಕಿ.ಮೀ ಪ್ರಯಾಣಿಸಲು 29 ನಿಮಿಷಗಳನ್ನು ತೆಗೆದುಕೊಂಡರೆ ಮೂರನೇ ಎಂದು ಹೆಸರಿಸಲಾಯಿತು.

ಲಂಡನ್ ಮತ್ತು ಡಬ್ಲಿನ್‌ನಲ್ಲಿ, ಸುಮಾರು 9 ಕಿ.ಮೀ. ಪ್ರಯಾಣದ ಸಮಯವು 2022ಕ್ಕೆ ಹೋಲಿಸಿದರೆ 1 ನಿಮಿಷ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

2023 ರಲ್ಲಿ ಸರಾಸರಿ ವೇಗ ಕಡಿಮೆ

ಟ್ರಾಫಿಕ್ ಇಂಡೆಕ್ಸ್‌ನಲ್ಲಿ ವಿಶ್ಲೇಷಿಸಲಾದ 387 ನಗರಗಳಲ್ಲಿ 228 ರಲ್ಲಿ ಸರಾಸರಿ ವೇಗವು 2022 ಕ್ಕೆ ಹೋಲಿಸಿದರೆ 2023ರಲ್ಲಿ ಕಡಿಮೆಯಾಗಿದೆ. 82 ನಗರಗಳಲ್ಲಿ ಸರಾಸರಿ ವೇಗವು ಬದಲಾಗದೆ ಉಳಿದಿವೆ. ಆದರೆ, 77 ನಗರಗಳು 2022 ಕ್ಕಿಂತ ಹೆಚ್ಚಿನ ಸರಾಸರಿ ವೇಗ ಮತ್ತು ಕಡಿಮೆ ಪ್ರಯಾಣದ ಸಮಯವನ್ನು ಹೊಂದಿವೆ.

ದನ್ನೂ ಓದಿ; ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...