Homeಕರ್ನಾಟಕಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಬೆಂಗಳೂರು-ಪುಣೆ

ಹೆಚ್ಚು ಟ್ರಾಫಿಕ್ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಬೆಂಗಳೂರು-ಪುಣೆ

- Advertisement -
- Advertisement -

ಬ್ರಿಟನ್ ರಾಜಧಾನಿ ಲಂಡನ್ 2023ರಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ವಾಹನ ಸಂಚಾರ ನಗರವಾಗಿದ್ದು, ಪೀಕ್ ಅವರ್‌ನಲ್ಲಿ ಗಂಟೆಗೆ ಸರಾಸರಿ 14 ಕಿ.ಮೀ ವೇಗವನ್ನು ಹೊಂದಿದೆ ಎಂದು ವರದಿಯೊಂದು ತಿಳಿಸಿದೆ. ಭಾರತದ ಎರಡು ನಗರಗಳಾದ ಬೆಂಗಳೂರು ಮತ್ತು ಪುಣೆ ಕೂಡ ಕೆಟ್ಟ ಟ್ರಾಫಿಕ್ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿವೆ ಎಂದು ಆಮ್ಸ್ಟರ್‌ಡ್ಯಾಮ್ ಮೂಲದ ಸ್ಥಳ ತಂತ್ರಜ್ಞಾನ ತಜ್ಞ ಸಂಸ್ಥೆ ಟಾಮ್‌ಟಾಮ್ ವರದಿ ಹೇಳಿದೆ.

ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್ ಆರು ಖಂಡಗಳಲ್ಲಿ 55 ದೇಶಗಳಾದ್ಯಂತ 387 ನಗರಗಳನ್ನು ಅವುಗಳ ಸರಾಸರಿ ಪ್ರಯಾಣದ ಸಮಯ, ಇಂಧನ ವೆಚ್ಚಗಳು ಮತ್ತು ಕಾರ್ಬನ್ ಹೊರಸೂಸುವಿಕೆಯಿಂದ ಮೌಲ್ಯಮಾಪನ ಮಾಡಿದೆ. ಇದು 600 ಮಿಲಿಯನ್‌ಗಿಂತಲೂ (60 ಕೋಟಿ) ಹೆಚ್ಚು ಇನ್-ಕಾರ್ ನ್ಯಾವಿಗೇಷನ್ ಸಿಸ್ಟಮ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳ ಡೇಟಾವನ್ನು ಆಧರಿಸಿದೆ.

ಹೆಚ್ಚು ಸಂಚಾರ ದಟ್ಟಣೆ ಇರುವ ನಗರಗಳಲ್ಲಿ ಬೆಂಗಳೂರು, ಪುಣೆ

ಅತಿ ಹೆಚ್ಚು ಸಂಚಾರ ದಟ್ಟಣೆ ಇರುವ ನಗರಗಳಾದ ಬೆಂಗಳೂರು (6) ಮತ್ತು ಪುಣೆ (7) ಎರಡು ಭಾರತೀಯ ನಗರಗಳಾಗಿದ್ದು, 2023ರಲ್ಲಿ ವಿಶ್ವದ ಹತ್ತು ಕೆಟ್ಟ ಟ್ರಾಫಿಕ್ ಪೀಡಿತ ನಗರಗಳಲ್ಲಿ ಸ್ಥಾನ ಪಡೆದುಕೊಂಡಿವೆ. 2023 ರಲ್ಲಿ ಬೆಂಗಳೂರಿನ ಪ್ರತಿ 10 ಕಿಮೀಗೆ ಸವಾರಿಗೆ ಸರಾಸರಿ ಪ್ರಯಾಣದ ಸಮಯ 28 ನಿಮಿಷ 10 ಸೆಕೆಂಡ್‌ಗಳಾಗಿದ್ದರೆ, ಪುಣೆಯಲ್ಲಿ ಇದು 27 ನಿಮಿಷ 50 ಸೆಕೆಂಡುಗಳು ಎಂದು ಟಾಮ್‌ಟಾಮ್ ವರದಿ ತಿಳಿಸಿದೆ.

ಭಾರತದ ಐಟಿ ರಾಜಧಾನಿಯಾಗಿರುವ ಬೆಂಗಳೂರು, ಐರ್ಲೆಂಡ್‌ನ ರಾಜಧಾನಿ ಡಬ್ಲಿನ್ ನಂತರ 2023 ರಲ್ಲಿ ಎರಡನೇ ಅತಿ ಹೆಚ್ಚು ಜನದಟ್ಟಣೆಯ ನಗರ ಎಂದು ಹೆಸರಿಸಲ್ಪಟ್ಟಿದೆ. ಕಳೆದ ವರ್ಷ ಬೆಂಗಳೂರಿನ ಮೂಲಕ ಪ್ರಯಾಣಿಸಲು ಕೆಟ್ಟ ದಿನವೆಂದರೆ ಸೆಪ್ಟೆಂಬರ್ 27, ಆಗ 10 ಕಿಮೀ ಓಡಿಸಲು ಸರಾಸರಿ ಪ್ರಯಾಣದ ಸಮಯ 32 ನಿಮಿಷಗಳು ಎಂದು ವರದಿ ಹೇಳಿದೆ. ಕಳೆದ ವರ್ಷ ಆರನೇ ಅತಿ ಹೆಚ್ಚು ಜನದಟ್ಟಣೆಯ ನಗರವಾಗಿದ್ದ ಪುಣೆಯಲ್ಲಿ ಸೆಪ್ಟೆಂಬರ್ 8 ರಂದು 10 ಕಿ.ಮೀ ದೂರವನ್ನು ಕ್ರಮಿಸಲು ಸುಮಾರು 34 ನಿಮಿಷಗಳನ್ನು ತೆಗೆದುಕೊಂಡಿತು.

ದೆಹಲಿ, ಮುಂಬೈನ್ನೂ ಟ್ರಾಫಿಕ್‌ ಸಮಸ್ಯೆ

ದೆಹಲಿ (44) ಮತ್ತು ಮುಂಬೈ (52) ಸಹ ಟಾಮ್‌ಟಾಮ್ ಟ್ರಾಫಿಕ್ ಇಂಡೆಕ್ಸ್‌ನಲ್ಲಿವೆ. 2023 ರ ವರದಿಯ ಪ್ರಕಾರ ದೆಹಲಿಯಲ್ಲಿ 10 ಕಿಮೀ ವಾಹನ ಓಡಿಸಲು ಸರಾಸರಿ 21 ನಿಮಿಷ 40 ಸೆಕೆಂಡುಗಳು ಮತ್ತು ಮುಂಬೈನಲ್ಲಿ 21 ನಿಮಿಷ 20 ಸೆಕೆಂಡುಗಳು ತೆಗೆದುಕೊಂಡಿತು ಎಂದು ವರದಿ ತೋರಿಸಿದೆ.

ಲಂಡನ್, ಡಬ್ಲಿನ್, ಟೊರೊಂಟೊ ಕೆಟ್ಟ ಟ್ರಾಫಿಕ್ ನಗರಗಳು

ಟಾಮ್‌ಟಾಮ್ ವರದಿಯ ಪ್ರಕಾರ, ಲಂಡನ್‌ನ ಪ್ರತಿ 10 ಕಿ.ಮೀ.ಗೆ 37 ನಿಮಿಷಗಳ ಸರಾಸರಿ ಪ್ರಯಾಣದ ಸಮಯವನ್ನು ಹೊಂದಿದ್ದು, 2023 ರಲ್ಲಿ ಟ್ರಾಫಿಕ್‌ನಿಂದ ಹೆಚ್ಚು ಹಾನಿಗೊಳಗಾದ ನಗರವಾಗಿದೆ. ಡಬ್ಲಿನ್ ಕಳೆದ ವರ್ಷ 29 ನಿಮಿಷ 30 ಸೆಕೆಂಡ್‌ಗಳ ಪ್ರತಿ 10 ಕಿ.ಮೀ ಸರಾಸರಿ ಪ್ರಯಾಣದ ಸಮಯವನ್ನು ಹೊಂದಿತ್ತು ಮತ್ತು ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದಿದ್ದರೆ, ಕೆನಡಾದ ಟೊರೊಂಟೊ, 10 ಕಿ.ಮೀ ಪ್ರಯಾಣಿಸಲು 29 ನಿಮಿಷಗಳನ್ನು ತೆಗೆದುಕೊಂಡರೆ ಮೂರನೇ ಎಂದು ಹೆಸರಿಸಲಾಯಿತು.

ಲಂಡನ್ ಮತ್ತು ಡಬ್ಲಿನ್‌ನಲ್ಲಿ, ಸುಮಾರು 9 ಕಿ.ಮೀ. ಪ್ರಯಾಣದ ಸಮಯವು 2022ಕ್ಕೆ ಹೋಲಿಸಿದರೆ 1 ನಿಮಿಷ ಹೆಚ್ಚಾಗಿದೆ ಎಂದು ವರದಿ ಹೇಳಿದೆ.

2023 ರಲ್ಲಿ ಸರಾಸರಿ ವೇಗ ಕಡಿಮೆ

ಟ್ರಾಫಿಕ್ ಇಂಡೆಕ್ಸ್‌ನಲ್ಲಿ ವಿಶ್ಲೇಷಿಸಲಾದ 387 ನಗರಗಳಲ್ಲಿ 228 ರಲ್ಲಿ ಸರಾಸರಿ ವೇಗವು 2022 ಕ್ಕೆ ಹೋಲಿಸಿದರೆ 2023ರಲ್ಲಿ ಕಡಿಮೆಯಾಗಿದೆ. 82 ನಗರಗಳಲ್ಲಿ ಸರಾಸರಿ ವೇಗವು ಬದಲಾಗದೆ ಉಳಿದಿವೆ. ಆದರೆ, 77 ನಗರಗಳು 2022 ಕ್ಕಿಂತ ಹೆಚ್ಚಿನ ಸರಾಸರಿ ವೇಗ ಮತ್ತು ಕಡಿಮೆ ಪ್ರಯಾಣದ ಸಮಯವನ್ನು ಹೊಂದಿವೆ.

ದನ್ನೂ ಓದಿ; ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...