Homeಮುಖಪುಟಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ...

ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಆರೋಪದಡಿ ಮಹಾರಾಷ್ಟ್ರ ಮೂಲದ ಬಿಲ್ಡರ್‌‌ ಅವಿನಾಶ್ ಭೋಸಲೆ ಅವರ ಆಸ್ತಿಯಿಂದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡಿದೆ. ಇದಾಗಿ ಕೆಲವೇ ದಿನಗಳ ನಂತರ, ಜಾರಿ ನಿರ್ದೇಶನಾಲಯ ಬುಧವಾರ ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಅವಿನಾಶ್ ಭೋಸಲೆ ಮತ್ತು ಮತ್ತೊಬ್ಬ ಬಿಲ್ಡರ್‌‌ ಸಂಜಯ್ ಛಾಬ್ರಿಯಾ ಅವರಿಂದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳ ಒಕ್ಕೂಟಕ್ಕೆ 34,000 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ (ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಪ್ರಕರಣದಲ್ಲಿ ರೇಡಿಯಸ್ ಡೆವಲಪರ್ಸ್‌ನ ಸಂಜಯ್ ಛಾಬ್ರಿಯಾ ಮತ್ತು ಎಬಿಐಎಲ್ ಇನ್‌ಫ್ರಾಸ್ಟ್ರಕ್ಚರ್‌ನ ಅವಿನಾಶ್ ಭೋಸಲೆ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕಳೆದ ವಾರ ಪುಣೆಯ ಅವಿನಾಶ್ ಭೋಸಲೆ ಆಸ್ತಿಯಲ್ಲಿ ಹೆಲಿಕಾಪ್ಟರ್ ಅನ್ನು ಪತ್ತೆ ಮಾಡಿದ್ದರು.

ಇಂದು ಸಂಜಯ್ ಛಾಬ್ರಿಯಾ ಅವರ ಮುಂಬೈನ ಸಾಂತಾಕ್ರೂಜ್‌ನಲ್ಲಿರುವ 116.5 ಕೋಟಿ ರೂ. ಮೌಲ್ಯದ ಜಮೀನು, ಬೆಂಗಳೂರಿನಲ್ಲಿರುವ 115 ಕೋಟಿ ರೂ. ಮೌಲ್ಯದ ಲ್ಯಾಂಡ್‌ ಪಾರ್ಸೆಲ್‌ನಲ್ಲಿರುವ ಕಂಪನಿಯ 25% ಈಕ್ವಿಟಿ ಷೇರುಗಳು, 3 ಕೋಟಿ ರೂ. ಮೌಲ್ಯದ ಸಾಂತಾಕ್ರೂಜ್‌ನಲ್ಲಿರುವ ಮತ್ತೊಂದು ಫ್ಲಾಟ್, ದೆಹಲಿ ವಿಮಾನ ನಿಲ್ದಾಣದಲ್ಲಿ ಛಾಬ್ರಿಯಾ ಅವರಿಗೆ ಸೇರಿದ 13.67 ಕೋಟಿ ರೂ. ಮೌಲ್ಯದ ಹೋಟೆಲ್‌‌ನ ಲಾಭ ಮತ್ತು 3.10 ಕೋಟಿ ರೂ. ಮೌಲ್ಯದ ಸಂಜಯ್ ಛಾಬ್ರಿಯಾ ಅವರ ಮೂರು ಅತ್ಯಾಧುನಿಕ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ಇದಲ್ಲದೆ, ಅವಿನಾಶ್ ಭೋಸಲೆ ಅವರ 102.8 ಕೋಟಿ ರೂ. ಮೌಲ್ಯದ ಮುಂಬೈನ ಡ್ಯೂಪ್ಲೆಕ್ಸ್ ಫ್ಲಾಟ್ ರೂಪದ ಆಸ್ತಿ, ಪುಣೆಯ 14.65 ಕೋಟಿ ರೂ. ಮೌಲ್ಯದ ಜಮೀನು, ಪುಣೆಯಲ್ಲೆ ಇರುವ 29.24 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನು, 15.52 ಕೋಟಿ ರೂ. ಮೌಲ್ಯದ ನಾಗ್ಪುರದ ಜಮೀನು ಮತ್ತು ನಾಗ್ಪುರದಲ್ಲೆ ಇರುವ 1.45 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನನ್ನು ಕೂಡಾ ಈ ಜಪ್ತಿಯಲ್ಲಿ ಲಗತ್ತಿಸಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಇಬ್ಬರು ಆರೋಪಿಗಳ ವಿರುದ್ಧ 2002ರ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (PMLA) ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಎರಡು ತಾತ್ಕಾಲಿಕ ಜಪ್ತಿ ಆದೇಶಗಳನ್ನು ಹೊರಡಿಸಿದೆ. ಈ ಇತ್ತೀಚಿನ ಜಪ್ತಿಯಿಂದ ಒಟ್ಟು ಜಪ್ತಿಯಾದ ಆಸ್ತಿಯ ಮೌಲ್ಯ 1,827 ಕೋಟಿ ರೂ.ಗೆ ಏರಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಜಾರಿ ನಿರ್ದೇಶನಾಲಯ ಜೂನ್‌ನಲ್ಲಿ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರನ್ನು ಬಂಧಿಸಿತ್ತು. ಪ್ರಸ್ತುತ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...