Homeಮುಖಪುಟಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ...

ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಆರೋಪದಡಿ ಮಹಾರಾಷ್ಟ್ರ ಮೂಲದ ಬಿಲ್ಡರ್‌‌ ಅವಿನಾಶ್ ಭೋಸಲೆ ಅವರ ಆಸ್ತಿಯಿಂದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡಿದೆ. ಇದಾಗಿ ಕೆಲವೇ ದಿನಗಳ ನಂತರ, ಜಾರಿ ನಿರ್ದೇಶನಾಲಯ ಬುಧವಾರ ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಅವಿನಾಶ್ ಭೋಸಲೆ ಮತ್ತು ಮತ್ತೊಬ್ಬ ಬಿಲ್ಡರ್‌‌ ಸಂಜಯ್ ಛಾಬ್ರಿಯಾ ಅವರಿಂದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳ ಒಕ್ಕೂಟಕ್ಕೆ 34,000 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ (ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಪ್ರಕರಣದಲ್ಲಿ ರೇಡಿಯಸ್ ಡೆವಲಪರ್ಸ್‌ನ ಸಂಜಯ್ ಛಾಬ್ರಿಯಾ ಮತ್ತು ಎಬಿಐಎಲ್ ಇನ್‌ಫ್ರಾಸ್ಟ್ರಕ್ಚರ್‌ನ ಅವಿನಾಶ್ ಭೋಸಲೆ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕಳೆದ ವಾರ ಪುಣೆಯ ಅವಿನಾಶ್ ಭೋಸಲೆ ಆಸ್ತಿಯಲ್ಲಿ ಹೆಲಿಕಾಪ್ಟರ್ ಅನ್ನು ಪತ್ತೆ ಮಾಡಿದ್ದರು.

ಇಂದು ಸಂಜಯ್ ಛಾಬ್ರಿಯಾ ಅವರ ಮುಂಬೈನ ಸಾಂತಾಕ್ರೂಜ್‌ನಲ್ಲಿರುವ 116.5 ಕೋಟಿ ರೂ. ಮೌಲ್ಯದ ಜಮೀನು, ಬೆಂಗಳೂರಿನಲ್ಲಿರುವ 115 ಕೋಟಿ ರೂ. ಮೌಲ್ಯದ ಲ್ಯಾಂಡ್‌ ಪಾರ್ಸೆಲ್‌ನಲ್ಲಿರುವ ಕಂಪನಿಯ 25% ಈಕ್ವಿಟಿ ಷೇರುಗಳು, 3 ಕೋಟಿ ರೂ. ಮೌಲ್ಯದ ಸಾಂತಾಕ್ರೂಜ್‌ನಲ್ಲಿರುವ ಮತ್ತೊಂದು ಫ್ಲಾಟ್, ದೆಹಲಿ ವಿಮಾನ ನಿಲ್ದಾಣದಲ್ಲಿ ಛಾಬ್ರಿಯಾ ಅವರಿಗೆ ಸೇರಿದ 13.67 ಕೋಟಿ ರೂ. ಮೌಲ್ಯದ ಹೋಟೆಲ್‌‌ನ ಲಾಭ ಮತ್ತು 3.10 ಕೋಟಿ ರೂ. ಮೌಲ್ಯದ ಸಂಜಯ್ ಛಾಬ್ರಿಯಾ ಅವರ ಮೂರು ಅತ್ಯಾಧುನಿಕ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ಇದಲ್ಲದೆ, ಅವಿನಾಶ್ ಭೋಸಲೆ ಅವರ 102.8 ಕೋಟಿ ರೂ. ಮೌಲ್ಯದ ಮುಂಬೈನ ಡ್ಯೂಪ್ಲೆಕ್ಸ್ ಫ್ಲಾಟ್ ರೂಪದ ಆಸ್ತಿ, ಪುಣೆಯ 14.65 ಕೋಟಿ ರೂ. ಮೌಲ್ಯದ ಜಮೀನು, ಪುಣೆಯಲ್ಲೆ ಇರುವ 29.24 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನು, 15.52 ಕೋಟಿ ರೂ. ಮೌಲ್ಯದ ನಾಗ್ಪುರದ ಜಮೀನು ಮತ್ತು ನಾಗ್ಪುರದಲ್ಲೆ ಇರುವ 1.45 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನನ್ನು ಕೂಡಾ ಈ ಜಪ್ತಿಯಲ್ಲಿ ಲಗತ್ತಿಸಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಇಬ್ಬರು ಆರೋಪಿಗಳ ವಿರುದ್ಧ 2002ರ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (PMLA) ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಎರಡು ತಾತ್ಕಾಲಿಕ ಜಪ್ತಿ ಆದೇಶಗಳನ್ನು ಹೊರಡಿಸಿದೆ. ಈ ಇತ್ತೀಚಿನ ಜಪ್ತಿಯಿಂದ ಒಟ್ಟು ಜಪ್ತಿಯಾದ ಆಸ್ತಿಯ ಮೌಲ್ಯ 1,827 ಕೋಟಿ ರೂ.ಗೆ ಏರಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಜಾರಿ ನಿರ್ದೇಶನಾಲಯ ಜೂನ್‌ನಲ್ಲಿ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರನ್ನು ಬಂಧಿಸಿತ್ತು. ಪ್ರಸ್ತುತ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...