Homeಮುಖಪುಟಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ...

ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣ: ಇಬ್ಬರು ಬಿಲ್ಡರ್‌ಗಳ 415 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಮತ್ತು ವಂಚನೆ ಆರೋಪದಡಿ ಮಹಾರಾಷ್ಟ್ರ ಮೂಲದ ಬಿಲ್ಡರ್‌‌ ಅವಿನಾಶ್ ಭೋಸಲೆ ಅವರ ಆಸ್ತಿಯಿಂದ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡಿದೆ. ಇದಾಗಿ ಕೆಲವೇ ದಿನಗಳ ನಂತರ, ಜಾರಿ ನಿರ್ದೇಶನಾಲಯ ಬುಧವಾರ ಭಾರತದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಅವಿನಾಶ್ ಭೋಸಲೆ ಮತ್ತು ಮತ್ತೊಬ್ಬ ಬಿಲ್ಡರ್‌‌ ಸಂಜಯ್ ಛಾಬ್ರಿಯಾ ಅವರಿಂದ 415 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳ ಒಕ್ಕೂಟಕ್ಕೆ 34,000 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟು ಮಾಡಿದ ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ (ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್) ಪ್ರಕರಣದಲ್ಲಿ ರೇಡಿಯಸ್ ಡೆವಲಪರ್ಸ್‌ನ ಸಂಜಯ್ ಛಾಬ್ರಿಯಾ ಮತ್ತು ಎಬಿಐಎಲ್ ಇನ್‌ಫ್ರಾಸ್ಟ್ರಕ್ಚರ್‌ನ ಅವಿನಾಶ್ ಭೋಸಲೆ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕಳೆದ ವಾರ ಪುಣೆಯ ಅವಿನಾಶ್ ಭೋಸಲೆ ಆಸ್ತಿಯಲ್ಲಿ ಹೆಲಿಕಾಪ್ಟರ್ ಅನ್ನು ಪತ್ತೆ ಮಾಡಿದ್ದರು.

ಇಂದು ಸಂಜಯ್ ಛಾಬ್ರಿಯಾ ಅವರ ಮುಂಬೈನ ಸಾಂತಾಕ್ರೂಜ್‌ನಲ್ಲಿರುವ 116.5 ಕೋಟಿ ರೂ. ಮೌಲ್ಯದ ಜಮೀನು, ಬೆಂಗಳೂರಿನಲ್ಲಿರುವ 115 ಕೋಟಿ ರೂ. ಮೌಲ್ಯದ ಲ್ಯಾಂಡ್‌ ಪಾರ್ಸೆಲ್‌ನಲ್ಲಿರುವ ಕಂಪನಿಯ 25% ಈಕ್ವಿಟಿ ಷೇರುಗಳು, 3 ಕೋಟಿ ರೂ. ಮೌಲ್ಯದ ಸಾಂತಾಕ್ರೂಜ್‌ನಲ್ಲಿರುವ ಮತ್ತೊಂದು ಫ್ಲಾಟ್, ದೆಹಲಿ ವಿಮಾನ ನಿಲ್ದಾಣದಲ್ಲಿ ಛಾಬ್ರಿಯಾ ಅವರಿಗೆ ಸೇರಿದ 13.67 ಕೋಟಿ ರೂ. ಮೌಲ್ಯದ ಹೋಟೆಲ್‌‌ನ ಲಾಭ ಮತ್ತು 3.10 ಕೋಟಿ ರೂ. ಮೌಲ್ಯದ ಸಂಜಯ್ ಛಾಬ್ರಿಯಾ ಅವರ ಮೂರು ಅತ್ಯಾಧುನಿಕ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಕೇಜ್ರಿವಾಲ್ ಸಹಾಯಕ, ಜಾರಿ ನಿರ್ದೇಶನಾಲಯದ ಅಧಿಕಾರಿ ಮೇಲೂ ಗೂಢಚರ್ಯೆ

ಇದಲ್ಲದೆ, ಅವಿನಾಶ್ ಭೋಸಲೆ ಅವರ 102.8 ಕೋಟಿ ರೂ. ಮೌಲ್ಯದ ಮುಂಬೈನ ಡ್ಯೂಪ್ಲೆಕ್ಸ್ ಫ್ಲಾಟ್ ರೂಪದ ಆಸ್ತಿ, ಪುಣೆಯ 14.65 ಕೋಟಿ ರೂ. ಮೌಲ್ಯದ ಜಮೀನು, ಪುಣೆಯಲ್ಲೆ ಇರುವ 29.24 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನು, 15.52 ಕೋಟಿ ರೂ. ಮೌಲ್ಯದ ನಾಗ್ಪುರದ ಜಮೀನು ಮತ್ತು ನಾಗ್ಪುರದಲ್ಲೆ ಇರುವ 1.45 ಕೋಟಿ ರೂ. ಮೌಲ್ಯದ ಮತ್ತೊಂದು ಜಮೀನನ್ನು ಕೂಡಾ ಈ ಜಪ್ತಿಯಲ್ಲಿ ಲಗತ್ತಿಸಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಇಬ್ಬರು ಆರೋಪಿಗಳ ವಿರುದ್ಧ 2002ರ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (PMLA) ನಿಬಂಧನೆಗಳ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಎರಡು ತಾತ್ಕಾಲಿಕ ಜಪ್ತಿ ಆದೇಶಗಳನ್ನು ಹೊರಡಿಸಿದೆ. ಈ ಇತ್ತೀಚಿನ ಜಪ್ತಿಯಿಂದ ಒಟ್ಟು ಜಪ್ತಿಯಾದ ಆಸ್ತಿಯ ಮೌಲ್ಯ 1,827 ಕೋಟಿ ರೂ.ಗೆ ಏರಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಜಾರಿ ನಿರ್ದೇಶನಾಲಯ ಜೂನ್‌ನಲ್ಲಿ ಸಂಜಯ್ ಛಾಬ್ರಿಯಾ ಮತ್ತು ಅವಿನಾಶ್ ಭೋಸಲೆ ಅವರನ್ನು ಬಂಧಿಸಿತ್ತು. ಪ್ರಸ್ತುತ ಇಬ್ಬರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...