Homeಕರೋನಾ ತಲ್ಲಣಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

ಮೂರನೇ ದೇಶಿ ನಿರ್ಮಿತ ಬಯೋಲಾಜಿಕಲ್ E ಕಂಪನಿಯ ಲಸಿಕೆ ಸದ್ಯದಲ್ಲೇ ಮಾರುಕಟ್ಟೆಗೆ

- Advertisement -
- Advertisement -

ಕೋವಿಶೀಲ್ಡ್, ಕೋವಾಕ್ಸೀನ್ ನಂತರ ಭಾರತದಲ್ಲಿ ಮೂರನೇ ದೇಶಿ ನಿರ್ಮಿತ ‘ಕೋವಿಡ್ 19’ ಹೆಸರಿನ ಹೊಸ ಕೊರೋನಾ ವ್ಯಾಕ್ಸೀನ್ ಮಾರುಕಟ್ಟೆಗೆ ಬರಲು ಸಿದ್ಧವಾಗಿದೆ. ಹೈದರಾಬಾದ್ ಮೂಲದ ಬಯೋಲಾಜಿಕಲ್ E ಸಂಸ್ಥೆಯೊಂದಿಗೆ ಕೇಂದ್ರ ಸರ್ಕಾರ 30 ಕೋಟಿ ವ್ಯಾಕ್ಸೀನ್ ಗಳ ಪೂರೈಕೆಗೆ ಒಪ್ಪಂದ ಮಾಡಿಕೊಂಡ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ. ಕೇಂದ್ರ ಸರ್ಕಾರದಿಂದ ತುರ್ತಿ ಪರಿಸ್ಥಿತಿಯ ಬಳಕೆಗೆ ಅನುಮತಿಯನ್ನು ನಿರೀಕ್ಷಿಸುತ್ತಿರುವ ಬಯೊಲಾಜಿಕಲ್ ಈ ಸಂಸ್ಥೆ ಸದ್ಯದಲ್ಲೇ ತನ್ನ ವ್ಯಾಕ್ಸೀನ್ ಅನ್ನು ದೇಶದಲ್ಲಿ ಬಿಡುಗಡೆಮಾಡಲು ಸಜ್ಜಾಗಿದೆ.

ದೇಶದ ಅತ್ಯಂತ ಹಳೆಯ ವ್ಯಾಕ್ಸೀನ್ ತಯಾರಿಕಾ ಕಂಪನಿಯಾದ ಬಯೋಲಾಜಿಕಲ್ E ತನ್ನ ಹೊಸ ವ್ಯಾಕ್ಸೀನ್ ನ ಪ್ರತಿ ಡೋಸ್ ಗೆ 500 ರೂಪಾಯಿಯಂತೆ ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಸಿದ್ಧತೆ ನಡೆಸಿದೆ ಎಂದು ಕಂಪನಿಯ ಮೂಲಗಳಿಂದ ತಿಳಿದು ಬಂದಿದೆ.

ಎರಡು ಡೋಸ್‌ಗಳಲ್ಲಿ ಜನರಿಗೆ ಬಯೊಲಾಜಿಕಲ್ ಈ ಸಂಸ್ಥೆ ಕೊರೋನಾ ವ್ಯಾಕ್ಸೀನ್ ಅನ್ನು  ನೀಡಲು ಮುಂದಾಗಿದೆ. ಭಾರತದ ಜೊತೆಗೆ ವಿಶ್ವದ ಅತ್ಯಂತ ಕಡಿಮೆ ಬೆಲೆಯ ವ್ಯಾಕ್ಸೀನ್ ಇದಾಗಿರಲಿದೆ ಎಂದು ಕಂಪನಿಯ ಮೂಲಗಳು ಹೇಳಿವೆ.

ಈಗಾಗಲೇ ಫೇಸ್ 1 ಮತ್ತು ಫೇಸ್ 2 ಹಂತದ ಕ್ಲಿನಿಕಲ್ ಟ್ರಯಲ್ ನಲ್ಲಿ ಕಂಪನಿಯ ವ್ಯಾಕ್ಸೀನ್ ಉತ್ತಮ ಫಲಿತಾಂಶವನ್ನು ನೀಡಿದ್ದು ಸದ್ಯ ಸರ್ಕಾರದ ಅನುಮತಿಗಾಗಿ ಕಂಪನಿ ಕಾಯುತ್ತಿದೆ.

ಬಯೊಲಾಜಿಕಲ್ ಈ ಸಂಸ್ಥೆಯ ಹೊಸ ವ್ಯಾಕ್ಸೀನ್ ಭಾರತ, ಆಫ್ರಿಕ, ದಕ್ಷಿಣ ಅಮೆರಿಕಾ ಮತ್ತು ಏಷ್ಯಾದ ದೇಶಗಳಲ್ಲಿನ ವ್ಯಾಕ್ಸೀನ್ ಕೊರತೆಯನ್ನು ನೀಗಿಸಲಿದೆ ಎಂದು‌ ಬಯೊಲಾಜಿಕಲ್ ಈ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಿಮಾ ಡಾಲ್ಟಾ ತಿಳಿಸಿದ್ದಾರೆ

ಬಯೊಲಾಜಿಕಲ್ E ಸಂಸ್ಥೆ ಅಮೆರಿಕಾದ ಟೆಕ್ಸಾಸ್ ನ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ಫಾರ್ ವ್ಯಾಕ್ಸೀನ್ ಡೆವಲಪ್‌ಮೆಂಟ್ ಎಂಬ ಔಷಧ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಹೊಸ ವ್ಯಾಕ್ಸೀನ್ ಅನ್ನು ಅಭಿವೃದ್ಧಿಪಡಿಸಿದೆ. “ಭಾರತದಲ್ಲಿ ಕೋವಿಡ್ ವಿರುದ್ಧ ಹೋರಾಟದಲ್ಲಿ ನಾವು ಬಯೋಲಾಜಿಕಲ್ E ಸಂಸ್ಥೆಯ ಜೊತೆ ಕೈಜೋಡಿಸಲು ಅತ್ಯಂತ ಹೆಮ್ಮೆಯಾಗುತ್ತದೆ. ಜಗತ್ತು ಒಗ್ಗಟ್ಟಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ” ಎಂದು ಟೆಕ್ಸಾಸ್ ಚಿಲ್ಡ್ರನ್ ಹಾಸ್ಪಿಟಲ್ ಸೆಂಟರ್ ನ ಪ್ರೊಫೆಸರ್ ಪೀಟರ್ ಹೊಟೇಝ್ ತಿಳಿಸಿದ್ದಾರೆ.

ಕಳೆದ ವರ್ಷ ಬಯೋಲಾಜಿಕಲ್ E ಔಷದೋತ್ಪಾದನಾ ಕಂಪನಿ ಅಮೆರಿಕಾದ ಜಾನ್ಸನ್ ಆ್ಯಂಡ್ ಜಾನ್ಸನ್ ನ ಭಾಗವಾಗಿರುವ ಜಾನ್ಸೆನ್ ಫಾರ್ಮಾಸುಟಿಕಲ್ NV ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ Ad26.COV2.S. ಕೋವಿಡ್ 19 ಲಸಿಕೆಯ ಉತ್ಪಾದನೆಯ ಹಕ್ಕುಗಳನ್ನು ಬಯೋಲಾಜಿಕಲ್ E ಸಂಸ್ಥೆ ಪಡೆದುಕೊಂಡಿದೆ.

ದೇಶದ ಅತ್ಯಂತ ಹಳೆಯ ಔಷಧ ಉತ್ಪಾದನಾ ಕಂಪನಿ ಬಯೋಲಾಜಿಕಲ್ E 1953 ರಲ್ಲಿ ಕೆವಿಕೆ ರಾಜು ಅವರು ಕಂಪನಿಯನ್ನು ಆರಂಭಿಸಿದ್ದರು. ಆ ಸಂದರ್ಭದಲ್ಲಿ ದೇಶದ ಮೊಟ್ಟಮೊದಲ ಖಾಸಗಿ ಔಷಧ ತಯಾರಿಕ ಕಂಪಿನಿಯಾಗಿ ಬಯೋಲಾಜಿಕಲ್ E ಸಂಸ್ಥೆ ಗುರುತಿಸಿಕೊಂಡಿತ್ತು. ಇದುವರೆಗೆ ಜಗತ್ತಿನ 100 ದೇಶಗಳಿಗೆ ವಿವಿಧ ವ್ಯಾಕ್ಸೀನ್ ಪೂರೈಸುತ್ತಿರುವ ಬಯೋಲಾಜಿಕಲ್ E ಕಂಪನಿ ಇತರ ವೈದ್ಯಕೀಯ ಔಷಧಿಗಳನ್ನು ಭಾರತ ಮತ್ತು ಅಮೆರಿಕಾದ ಮಾರುಕಟ್ಟೆಗೆ ಪೂರೈಕೆ ಮಾಡುತ್ತಿದೆ.

ಭಾರತ ಸರ್ಕಾರದ ಅನುಮತಿಯ ನಂತರ ಕಂಪನಿಯು ದೊಡ್ಡ ಮಟ್ಟದಲ್ಲಿ COVID-19 ಹೆಸರಿನ ವ್ಯಾಕ್ಸೀನ್ ಅನ್ನು ಉತ್ಪಾದನೆಗೆ ತೊಡಗಲಿದೆ. ಭಾರತದಲ್ಲಿ ಜನರ ಕೈಗೆಟುಕ ದರದಲ್ಲಿ ಔಷಧೋತ್ಪನ್ನಗಳನ್ನು ವ್ಯಾಕ್ಸೀನ್ ಗಳನ್ನು ಪೂರೈಸುವುದು ಸಂಸ್ಥೆಯ ಉದ್ಧೇಶ ಬಯೋಲಾಜಿಕಲ್ E ಸಂಸ್ಥೆ ಮುಖ್ಯಸ್ಥರು ತಿಳಿಸಿದ್ದಾರೆ.


ಇದನ್ನೂ ಓದಿ; ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...